- Saturday
- March 14th, 2026
ಸುಳ್ಯ ಮೊಸರು ಕುಡಿಕೆ ಉತ್ಸವ ಎಣ್ಣೆ ಕಂಬ ಏರುವ ಸ್ಪರ್ಧೆಯಲ್ಲಿ ಜಗದೀಶ್ ಅಡಿಗರ ಅರಂತೋಡು ಪ್ರಥಮ ಸ್ಥಾನ ಗಳಿಸಿದ್ದು ರೂ. 5000 ಬಹುಮಾನ ಪಡೆದಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ “ಪ್ಲಾಸ್ಟಿಕ್" ಮುಕ್ತವಾಗಿಸುವ ನೆಲೆಯಲ್ಲಿ ಶ್ರೀಕ್ಷೇತ್ರದ ಮಕ್ಕಳ ಭಜನಾ ತಂಡದ ಮಕ್ಕಳಿಂದ ಪ್ರಸಾದ ವಿತರಿಸುವ ಕಾಗದದ ಕವರ್ ನ್ನು ತಯಾರಿಸಿ ನೀಡಿದರು. ಪುಟ್ಟ ಸೇವೆಯಾದರೂ ಅರ್ಥಪೂರ್ಣವಾಗಿಸಿದರು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಹಾಗೂ ದೇಗುಲದ ಅರ್ಚಕರಾದ ರಾಮಚಂದ್ರ ಭಟ್ ಶ್ರೀದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಕ್ಕಳಿಗೆ ಪ್ರಸಾದ ನೀಡಿದರು.
ಜವಾಹರ್ ಯುವಕ ಮಂಡಲ(ರಿ.) ನಡುಗಲ್ಲು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಆ.17 ಭಾನುವಾರದಂದು ನಡುಗಲ್ಲು ವಠಾರದಲ್ಲಿ ನಡೆಯಿತು.ಆಟೋಟ ಸ್ಪರ್ಧೆಗಳನ್ನು ಯುವಕ ಯುವತಿ ಮಂಡಲದ ವಠಾರದಲ್ಲಿ ಶ್ರೀ ಮಹಾ ಮೃತ್ಯುಂಜಯೇಶ್ವರ ಮತ್ತು ಶ್ರೀ ಪಾರ್ವತಿ ಸೇವಾ ಟ್ರಸ್ಟ್(ರಿ.) ನಡುಗಲ್ಲು ಇದರ ಅಧ್ಯಕ್ಷರಾದ ರಾಮಚಂದ್ರ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಅಂಗನವಾಡಿ ಮಕ್ಕಳಿಂದ ಹಿಡಿದು ಪುರುಷರ ಹಾಗೂ...
(ವರದಿ : ಉಲ್ಲಾಸ್ ಕಜ್ಜೋಡಿ)ರೋಟರಿ ಕ್ಲಬ್ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಬಳ್ಪ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ, ವಿಕ್ರಮ ಯುವಕ ಮಂಡಲ ಬಳ್ಪ, ಧರ್ಮಶಾಸ್ತಾವೂ ಭಜನಾ ಮಂಡಳಿ ಬಳ್ಪ ಇವುಗಳ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ ಆ.31 ರಂದು ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ...
ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಇಂದು (ಆ.19) ಸುಳ್ಯದಲ್ಲಿ ನಡೆಯಲಿದೆ. ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರು ಆ.19...
ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವ-2025 ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ ಕಾರ್ಯಕ್ರಮ ಆ.18 ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ನೆರವೇರಿಸಿದರು.ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು "ಈ...
ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ನೂತನ ಶ್ರೀ ಕೃಷ್ಣ ನೂತನ ಭಜನಾ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಆ.18 ರಂದು ನಡೆಯಿತು. ಸುಮಾರು 40 ಲಕ್ಷ ರೂ ವೆಚ್ಚದಲ್ಲಿ ನೂತನ ಮಂದಿರ ನಿರ್ಮಾಣ ಆಗಲಿದೆ. ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಆ.15 ರಿಂದ 18 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಆ.18 ರಂದು ಬೆಳಿಗ್ಗೆ 10:20ರ ತುಲಾ...
ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ಮಹಾಸಭೆ ಆ.17 ರಂದು ಯುವಕ ಮಂಡಲದ ಆವರಣದಲ್ಲಿ ನಡೆಯಿತು. ಈ ಸಭೆಯಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ ಇವರನ್ನು ಆಯ್ಕೆ ಮಾಡಲಾಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿಯಲ್ಲಿ ಆಗಸ್ಟ್ 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ರಮೇಶ್.ಎಮ್ ನೆರವೇರಿಸಿದರು.ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ ಎಂ ವಹಿಸಿದ್ದರು.ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಮಹೇಶ್ ಕುಮಾರ್ ಕರಿಕಳ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿತನುಡಿಗಳನ್ನು ಆಡಿದರು....
ನ್ಯಾಯಾಲಯದಲ್ಲಿ "ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ" ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಆರಂಭಗೊಂಡಿದ್ದು ಅಕ್ಟೋಬರ್ 7ರವರೆಗೆ ಅಭಿಯಾನ ನಡೆಯಲಿದೆ.ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ...
Loading posts...
All posts loaded
No more posts
