- Sunday
- March 15th, 2026
ವಿಶಿಷ್ಟ ಕಂಠದ ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸ್ವರ ಸಂಗೀತ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ. ಆ.03 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಖ್ಯಾತ ಸಾಹಿತಿಗಳಾದ ಪ್ರಭಾಕರ ಶಿಶಿಲ, ನಿವೃತ್ತ ತಾಂತ್ರಿಕ ಕೃಷಿ...
ಜಾಲ್ಸೂರು ಗ್ರಾಮದ ಬೊಳುಬೈಲು ಅರ್ಭಡ್ಕ ಪಡುಮಜಲು ಜೀವನ್.ಎ.ಎಸ್ ಇವರು ಭಾರತೀಯ ವಾಯುಸೇನೆಯ(ಮೈನ್) ಏರ್ಮನ್(ಮೆಡಿಕಲ್ ಅಸಿಸ್ಟಂಟ್) ಹುದ್ದೆಗೆ ಅಯ್ಕೆಯಾಗಿದ್ದಾರೆ.ಪ್ರಸ್ತುತ ಅವರು ಬೆಳಗಾವಿ ಸೇನಾ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದಾರೆ.ವಿವೇಕಾನಂದ ವಿದ್ಯಾಕೇಂದ್ರ ವಿನೋಬನಗರದಲ್ಲಿ ಪ್ರಾಥಮಿಕ, ಮೋರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಹೈಸ್ಕೂಲು, ಮೋರಾರ್ಜಿ ದೇಸಾಯಿ ವಸತಿ ಕಾಲೇಜು ಕಮ್ಮಾಜೆಯಲ್ಲಿ ಪಿಯುಸಿ ಹಾಗೂ ಹುಬ್ಬಳ್ಳಿ ಕೆ.ಎಮ್.ಸಿ.ಆರ್.ಐ ಯಲ್ಲಿ ಬಿ.ಎಸ್ಸಿ ನರ್ಸಿಂಗ್(1.5...
ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಸುಳ್ಯದಲ್ಲಿ ಅದ್ದೂರಿಯಾಗಿ ಆ.19 ನಡೆಯಲಿರುವ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ ಕಾರ್ಯಕ್ರಮವು ಕಲ್ಕುಡ ದೈವಸ್ಥಾನದಲ್ಲಿ ನಡೆಯಿತು. ಪಿಕೆ ಉಮೇಶ್ ರವರು ಸ್ಟಿಕ್ಕರ್ ಬಿಡುಗಡೆ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಶ್ರೀಕಾಂತ್ ಗೋಳ್ವಲ್ಕರ್, ಸಹ ಕಾರ್ಯದರ್ಶಿ ಭಾನುಪ್ರಕಾಶ್...
ವಿಶಿಷ್ಟ ವಿಶೇಷ ಬರಹಗಾರ, ಖ್ಯಾತ ಜೇನು ಕೃಷಿಕರಾದ ಕುಮಾರ್ ಪೆರ್ನಾಜೆ ಮತ್ತು ಶ್ರೀಮತಿ ಸೌಮ್ಯ ಆವರು ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ. ಆ.03 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು...
ಸ್ನೇಹಿತರ ಕಲಾಸಂಘ ಬೆಳ್ಳಾರೆ ಇವರ ವತಿಯಿಂದ ಆಗಸ್ಟ್ 15ರಂದು ನಡೆಯಲಿರುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಆಗಸ್ಟ್ 17ರಂದು ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಜುಲೈ 30ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು, ಕಾರ್ಯದರ್ಶಿ...
ಮೊಗ್ರ ಕಿನ್ನಿಕುಮೇರಿ ಪರಿಸರದಲ್ಲಿ ಸೇವಾ ಸಂಘಟನೆಯಾಗಿ ಕಾರ್ಯ ನಿರ್ವಹಿಸುತ್ತಿರುವ ರಕ್ಷಾ ನಾಗರಿಕ ಬಳಗದ ವತಿಯಿಂದ ಮೊಗ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.ಸಂಘಟನೆಯ ಅಧ್ಯಕ್ಷರಾದ ಲಯನ್ ನಾಗೇಶ್ ತೆಂಕಪ್ಪಾಡಿಯವರು ಸಮವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯದರ್ಶಿ ಜೇಸಿ ಜೀವನ್ ಮಲ್ಕಜೆ, ಕೋಶಾಧಿಕಾರಿ ದಯಾನಂದ ಕಿನ್ನಿಕುಮೇರಿ, ಪದಾಧಿಕಾರಿಗಳಾದ ಲಯನ್ ಕರುಣಾಕರ ಎಣ್ಣೆಮಜಲು, ಉಮೇಶ್ ಮಕ್ಕಿ,...
ರಾಜ್ಯಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರಂತೋಡು ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜು.09 ರಂದು ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಇದರ ಪುನರ್ ನಿರ್ಮಾಣಕಾಗಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಭೇಟಿ ಮಾಡಿ ಮನವಿ ಮಾಡಿದ್ದರು. ಇದೀಗ ಆರಂತೋಡು -ತೊಡಿಕಾನ...
ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ “ಆಟಿಲಿ ಒಂದ್ ದಿನ” ಕಾರ್ಯಕ್ರಮವು ಅರಂಬೂರಿನ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಾಸುದೇವ ಗೌಡ ಕುಡೆಕಲ್ಲು ಅವರು ಉದ್ಘಾಟಿಸಿ ಮಾತನಾಡುತ್ತಾ ”ನಮ್ಮ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಸಂಘಟನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಆಟಿ ಎನ್ನುವಂತದ್ದು ಹಿಂದೆ ಬಹಳ ಕಷ್ಟಕರವಾದ ದಿನವಾಗಿತ್ತು. ಇಂತಹ ಕಷ್ಟಕರವಾದ ದಿನಗಳಲ್ಲೂ...
“ಇಂಟರ್ಯಾಕ್ಟ್ ಕ್ಲಬ್ ಮೂಲಕ ಮಕ್ಕಳಿಗೆ ಎಳವೆಯಲ್ಲಿಯೇ ಸಾಮಾಜಿಕ ಸೇವೆಯನ್ನು ಕಲಿಸಿಕೊಡಲಾಗುತ್ತದೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಲ್ಲಿ ಒಳ್ಳೆಯ ಆಲೋಚನೆಗಳು ಬೆಳೆಯಲು ಸಹಕಾರಿಯಾಗುತ್ತದೆ, ಜೊತೆಗೆ ಮಾನಸಿಕ ನೆಮ್ಮದಿಯೂ ಸಿಗುತ್ತದೆ” ಎಂದು ರೋಟರಿ ಕ್ಲಬ್ ನ ಜಿಲ್ಲಾ ಪೂರ್ವ ಸಹಾಯಕ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಹೇಳಿದರು. ಅವರು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ...
ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ 2024-25 ಸಭೆಯು ಜು. 22ರಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ವಲಯ ಅಧ್ಯಕ್ಷ ರಾದ ಶಶಿಗೌಡ ಕೊಯಿಂಗೋಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯದ ಸ್ಥಾಪಕಾಧ್ಯಕ್ಷರಾದ ಗೋಪಾಲ್ ಸುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್...
Loading posts...
All posts loaded
No more posts
