Ad Widget

ಕೊರಂಬಠ : ಮರ ಬಿದ್ದು 2 ಗಂಟೆಗಳ ಕಾಲ ನಡುಗಲ್ಲು-ಹರಿಹರ ರಸ್ತೆ ಬಂದ್ ; ವಾಹನ ಸಂಚಾರ ಸ್ಥಗಿತ

ನಡುಗಲ್ಲು-ಹರಿಹರ ರಸ್ತೆ ಮಧ್ಯದ ಕೊರಂಬಠ ಎಂಬಲ್ಲಿ ಬೃಹತ್ ಮರವೊಂದು ಬಳ್ಳಿಗಳ ಸಹಿತವಾಗಿ ಬಿದ್ದ ಪರಿಣಾಮ ವಾಹನ ಸಂಚಾರವು ಸುಮಾರು ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು.‌ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ರಸ್ತೆಯನ್ನು ಪುನರ್ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಹರಿಹರ ಪಳ್ಳತ್ತಡ್ಕ : ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುಗೆ ಸಮಾರಂಭ

ನಿವೃತ್ತರಾದ ಚಂದ್ರಶೇಖರ ಬಟ್ಟೋಡಿ, ರವೀಂದ್ರ.ಎಂ ಹಾಗೂ ಪುಷ್ಪಾವತಿ ಹೂವಪ್ಪ ಕಂಚುಗಾರಗದ್ದೆ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ

“ಬಡತನದಿಂದ ಬೆಳೆದು ಬಂದು ಸಂಘವನ್ನು ಸಧೃಡವಾಗಿಸಿದ ಸಿಬ್ಬಂದಿಗಳನ್ನು ಗೌರವಿಸುವುದು ನಮ್ಮ ಕರ್ತವ್ಯ” – ಡಾ. ಸೋಮಶೇಖರ ಕಟ್ಟೆಮನೆ

ಕಳೆದ 40 ವರ್ಷಗಳಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ನಿವೃತ್ತರಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ ಹಾಗೂ ಸಂಘದ 2024-25ನೇ ಸಾಲಿನ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ಜು.26 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ...
Ad Widget

ನಿತಿನ್ ಕೊಯಿಂಗೋಡಿ ನಿಧನ

ಸುಳ್ಯ ಕಸಬಾ ಗ್ರಾಮದ ಕೊಯಿಂಗೋಡಿ ದಿ.ಭವಾನಿ ಪ್ರಸಾದ್ ರವರ ಪುತ್ರ ನಿತಿನ್ ಕೊಯಿಂಗೋಡಿ(35ವ) ಯವರು ಅಸೌಖ್ಯದಿಂದ ಜು.25 ರಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜು.25 ರಂದು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.ಮೃತರು ತಾಯಿ ಕವಿತಾ, ಪತ್ನಿ ಶಿಲ್ಪ, ಪುತ್ರ ಪ್ರಿಯಂಷು, ಸಹೋದರ, ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಅಮರ್ ರಹೇ ಜವಾನ್… ಸೈನಿಕರಿಗೊಂದು ಸಲಾಂ…

ಕಾರ್ಗಿಲ್ ವಿಜಯ್ ದಿವಸ – ಜುಲೈ 26

✍️ಡಾ|| ಮುರಲೀ ಮೋಹನ್‍ ಚೂಂತಾರು

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ದೇವರಕೊಲ್ಲಿ ಅಪಘಾತ

ಗೊಣಿಕೊಪ್ಪ ಮೂಲದ ರಿಶಾದ್, ನಿಹಾದ್, ರಾಖೀಬ್ ಮತ್ತು ಅನೀಷ್ ಮೃತ ದುರ್ದೈವಿಗಳು

ದೇವರಕೊಲ್ಲಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಗೋಣಿಕೊಪ್ಪದಿಂದ ಮಂಗಳೂರು ಉಳ್ಳಾಲದ ಕಡೆಗೆ ತೆರಳುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ದೇವರಕೊಲ್ಲಿ ಸಮೀಪ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಮೃತಪಟ್ಟವರನ್ನು ಕೊಡಗು ಜಿಲ್ಲೆಯ ಗೋಣಿಕೊಪ್ಪ...

ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆರವರ ಮೃತದೇಹವನ್ನು ಕುಮಾರಧಾರ ನದಿಯಲ್ಲಿ ಹುಡುಕಾಟ ನಡೆಸಿ ಹೊರತೆಗೆದ ಈಶ್ವರ್ ಮಲ್ಪೆಯವರಿಗೆ ಸನ್ಮಾನ

ಜು.22 ರಂದು ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕರಾದ ಹೊನ್ನಪ್ಪ ದೇವರಗದ್ದೆ ಅವರ ಮೃತದೇಹ ಇಂದು(ಜು.25) ಕುಮಾರಧಾರ ನದಿಯಲ್ಲಿ ಪತ್ತೆಯಾಗಿದ್ದು, ಸತತ ನಾಲ್ಕು ದಿನಗಳಿಂದ ಕುಮಾರಧಾರ ನದಿಯಲ್ಲಿ ಹುಡುಕಾಟ ನಡೆಸಿದ ಈಶ್ವರ್ ಮಲ್ಪೆ ಹಾಗೂ ಅವರ ತಂಡವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೇಶ್.ಎನ್.ಎಸ್ ಇವರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ಇಂದು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ...

ಹರಿಹರ ಪಳ್ಳತ್ತಡ್ಕ : ನಾಳೆ(ಜು.26) ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ

ಸಂಘದ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭ

(ವರದಿ : ಉಲ್ಲಾಸ್ ಕಜ್ಜೋಡಿ) ಕಳೆದ 40 ವರ್ಷಗಳಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಇತ್ತೀಚೆಗೆ ನಿವೃತ್ತರಾದ ಅನಂತರಾಮ ಮಣಿಯಾನಮನೆ ರವರಿಗೆ ಬೀಳ್ಕೊಡುವ ಸಮಾರಂಭ ಹಾಗೂ ಸಂಘದ 2024-25ನೇ ಸಾಲಿನ ನಿವೃತ್ತ ಸಿಬ್ಬಂದಿಗಳಿಗೆ ಸಾರ್ವಜನಿಕ ಸನ್ಮಾನ ಸಮಾರಂಭವು ನಾಳೆ(ಜು.26) ಪೂರ್ವಾಹ್ನ 10:30ಕ್ಕೆ ಹರಿಹರ ಪಳ್ಳತ್ತಡ್ಕದ...

ದೇವರಕೊಲ್ಲಿಯಲ್ಲಿ ಲಾರಿ ಹಾಗೂ ಕಾರು ಭೀಕರ ಅಪಘಾತ ; ನಾಲ್ವರೂ ಮೃತ್ಯು

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಮೃತರು ಗೋಣಿಕೊಪ್ಪ ಮೂಲದವರು ಎಂದು ತಿಳಿದುಬಂದಿದೆ.

ದೇವರಕೊಲ್ಲಿಯಲ್ಲಿ ಲಾರಿ ಮತ್ತು ಕಾರು ಭೀಕರ ಅಪಘಾತ

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ದೇವರಕೊಲ್ಲಿ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದ್ದು, ನಾಲ್ವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಸುಬ್ರಹ್ಮಣ್ಯ : ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ

ಹುಡುಕಾಟಕ್ಕೆ ಈಶ್ವರ್ ಮಲ್ಪೆ,  ಎಸ್.ಡಿ.ಆರ್.ಎಫ್ ತಂಡ, ಸ್ಥಳೀಯರು, ರವಿಕಕ್ಕೆಪದವು ತಂಡ ಹಾಗೂ ಸುಳ್ಯದ ಅಂಬ್ಯುಲೆನ್ಸ್ ಚಾಲಕರ ಸಂಘ ಸಹಕಾರ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆ ರವರು ಜು.22 ರಂದು ನಾಪತ್ತೆಯಾಗಿದ್ದರು.ಘಟನೆಯ ಬಗ್ಗೆ ಅವರ ಪತ್ನಿ ಶ್ರೀಮತಿ ಪ್ರೇಮ ಅವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಅವರು ಹೊಳೆ ಬದಿ ತೆರಳಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಲೀಸರು ಹಾಗೂ...
Loading posts...

All posts loaded

No more posts

error: Content is protected !!