Ad Widget

ಫೆ.09 ರಂದು ವೆಂಕಟರಮಣ ಸೊಸೈಟಿಯ ಸ್ಥಾಪನಾ ದಿನಾಚರಣೆ – 29ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಬ್ಯಾಂಕ್ ಬಗ್ಗೆ ವಿವರ ನೀಡಿದ ಅಧ್ಯಕ್ಷ ಕೆ.ಸಿ.ಸದಾನಂದ 

ಸುಳ್ಯದ ಪ್ರತಿಷ್ಠಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 1998 ರಂದು ಸ್ಥಾಪನೆಯಾಗಿದ್ದು ಇದೀಗ 29ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಫೆ‌.09 ರಂದು ಪ್ರತಿ ವರ್ಷ ಸ್ಥಾಪನಾ ದಿನಾಚರಣೆಯನ್ನು ಆಚರಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಕೆ.ಸಿ.ಸದಾನಂದ ಹೇಳಿದರು. ಅವರು ಫೆ.06 ರಂದು ಸೊಸೈಟಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಗೌಡರ...

ಅಡ್ತಲೆ : ನಿರಂತರ ಆನೆ ದಾಳಿಯಿಂದಾಗಿ ಅಪಾರ ಕೃಷಿ ಹಾನಿ – ಅರಣ್ಯ ಇಲಾಖೆಯಿಂದ ನಿರ್ಲಕ್ಷ್ಯ – ಹೋರಾಟಕ್ಕೆ ಸಜ್ಜಾದ ಜನತೆ

ಅರಂತೋಡು ಗ್ರಾಮದ ಅಡ್ತಲೆ ಹಾಗೂ ಕಿರ್ಲಾಯ ಭಾಗದಲ್ಲಿ ಆನೆಗಳ ಹಿಂಡು ನಿರಂತರವಾಗಿ ಕೃಷಿ ತೋಟಗಳಿಗೆ ದಾಳಿ ನಡೆಸುತ್ತಿದ್ದು, ಕೃಷಿಕರನ್ನು ಕಂಗಾಲಾಗಿಸಿದೆ. ಈಗಾಗಲೇ ಎಲೆಚುಕ್ಕಿ, ಕೊಳೆರೋಗ ಹಾಗೂ ಹಳದಿ ಎಲೆ ರೋಗಗಳಿಂದ ನಷ್ಟ ಅನುಭವಿಸುತ್ತಿರುವ ಕೃಷಿಕರನ್ನು ಈ ಆನೆಗಳ ದಾಳಿಯು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ. ಫೆ.05ರಂದು ರಾತ್ರಿ ಅರಂತೋಡು ಗ್ರಾಮದ ಅಡ್ತಲೆ ನಿವಾಸಿ ಪೊನ್ನಪ್ಪ ಅಜಿಲ ಅವರ...
Ad Widget

ಸುಳ್ಯ : ನೀರಿನ ಪೂರೈಕೆಯಲ್ಲಿ ಅವ್ಯವಸ್ಥೆ – ನಳ್ಳಿಯಲ್ಲಿ ಬಿಳಿ ಬಣ್ಣದ ನೀರು

ಸುಳ್ಯ ನಗರದಲ್ಲಿ  ಅಮೃತ್ ಯೋಜನೆ ಮೂಲಕ ಪೂರೈಕೆಯಾಗುತ್ತಿರುವ ನೀರು ಬಿಳಿ ಬಣ್ಣಕ್ಕೆ ಬಂದಿದ್ದು, ಇದಕ್ಕೆ ಅತಿಯಾದ ಪ್ರಮಾಣದಲ್ಲಿ ಬ್ಲೀಚಿಂಗ್ ಪೌಡರ್ ಹಾಕಿರಬಹುದು ಎನ್ನಲಾಗುತ್ತಿದೆ. ಇದನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಹಾನಿಕಾರಕವಾಗುವ ಸಾಧ್ಯತೆಯಿದ್ದು, ಈ ಬಗ್ಗೆ  ಆರೋಗ್ಯ ಇಲಾಖೆಯು ತಕ್ಷಣ ಗಮನ ಹರಿಸಬೇಕು, ಸ್ಥಳೀಯಾಡಳಿತ ತಕ್ಷಣ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಸಾಮಾಜಿಕ ಹೋರಾಟಗಾರ ಸುಪ್ರೀತ್ ಮೋಂಟಡ್ಕ...

ಹವ್ಯಾಸ್ – ಭವ್ಯ : ವಿವಾಹ ನಿಶ್ಚಿತಾರ್ಥ

ಕೊಲ್ಲಮೊಗ್ರ ಗ್ರಾಮದ ಚಾಂತಾಳ ಶ್ರೀಧರ ಗೌಡರ ಪುತ್ರ ಹವ್ಯಾಸ್ ಅವರ ವಿವಾಹ ನಿಶ್ಚಿತಾರ್ಥವು ಸಂಪಾಜೆ ಗ್ರಾಮದ ಸಣ್ಣಮನೆ ದಿ. ಜಗದೀಶ್ ರವರ ಪುತ್ರಿ ಭವ್ಯ ಳೊಂದಿಗೆ ಫೆ.05 ರಂದು ವಧುವಿನ ಮನೆಯಲ್ಲಿ ನಡೆಯಿತು.

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:06-02-2026 ಶುಕ್ರವಾರ*01,🐏ಮೇಷರಾಶಿ🐏*🌻,ವ್ಯಾಪಾರ ಮಾಡುವವರಿಗೆ ಇಂದು ಉತ್ತಮ ದಿನವಾಗಲಿದೆ. ಸಣ್ಣ ವಿಷಯವನ್ನು ಬೆನ್ನಟ್ಟುವುದಕ್ಕಿಂತ ದೊಡ್ಡ ಅವಕಾಶದ ಬಗ್ಗೆ ಯೋಚಿಸುವುದು ಉತ್ತಮ. ಇಲ್ಲದಿದ್ದರೆ ಅವರು ತಪ್ಪಿನ ಭಾರವನ್ನು ಅನುಭವಿಸಬೇಕಾಗುತ್ತದೆ. ನಿಮ್ಮ ಜೀವನ ಸಂಗಾತಿಯೊಂದಿಗೆ ಕೆಲವು ವಿಷಯದ ಬಗ್ಗೆ ವಾದಗಳು ಉಂಟಾಗಬಹುದು ಎಚ್ಚರ,ಪರಿಹಾರ:-ತಾಯಿಅನ್ನಪೂರ್ಣೇಶ್ವರಿಯನ್ನು ಪ್ರಾರ್ಥಿಸಿ,*02,🐂ವೃಷಭರಾಶಿ🐂*🌻,ಇಂದು ನಿಮ್ಮ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ. ಯಾರಿಗೂ ಕೇಳದೆ ಸಲಹೆ ನೀಡುವುದನ್ನು ಬಿಡಬೇಕು ಮತ್ತು ನಿಮ್ಮ ಕ್ಷೇತ್ರದಲ್ಲಿ...

ನಿವೃತ್ತ ಉಪ ತಹಶೀಲ್ದಾರ್ ವೇದಾವತಿ ಮುಂಡೋಡಿ ನಿಧನ

ದೇವಚಳ್ಳ ಗ್ರಾಮದ ವಸಂತ ಕುಮಾರ್ ಮುಂಡೋಡಿಯವರ ಪತ್ನಿ ನಿವೃತ್ತ ಉಪ ತಹಶೀಲ್ದಾರ್ ಆಗಿದ್ದ ವೇದಾವತಿ ಅಲ್ಪ ಕಾಲದ ಅಸೌಖ್ಯದಿಂದ ಫೆ.05 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೃತರು ಪತಿ ಹಾಗೂ ಕುಟುಂಬಸ್ಥರು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.

ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್(ರಿ‌.) ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಹಾಗೂ ಶ್ರೀಮತಿ ಹೇಮಾವತಿ ಹೆಗ್ಗಡೆ ಅವರ ಶುಭಾರ್ಶೀವಾದದೊಂದಿಗೆ  ಸುಳ್ಯ ತಾಲೂಕಿನಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಾಸಾಶನ ನೀಡುತ್ತಿರುವ ಕುಟುಂಬಗಳಿಗೆ  ಶ್ರೀಮತಿ ಹೇಮಾವತಿ ಹೆಗ್ಗಡೆಯವರು ನೀಡಿದ ದಿನನಿತ್ಯ ಬಳಕೆ ಮಾಡುವ ವಾತ್ಸಲ್ಯ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ...

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಜಾತ್ರೋತ್ಸವ ಸಂಭ್ರಮ ; ಶ್ರೀ ದೇವರ ದರ್ಶನ ಬಲಿ ಬಟ್ಟಲುಕಾಣಿಕೆ ; ನಾಳೆ ರಾತ್ರಿ ದೇವರ ಬ್ರಹ್ಮರಥೋತ್ಸವ – ಕಾಚುಕುಜುಂಬ ದೈವದ ನರ್ತನ ಸೇವೆ

ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ  ಸಂಭ್ರಮದೊಂದಿಗೆ ಜರುಗುತ್ತಿದ್ದು, ಇಂದು ಬೆಳಿಗ್ಗೆ ಶ್ರೀ ದೇವರ ಉತ್ಸವ, ದರ್ಶನಬಲಿ, ಬಟ್ಟಲುಕಾಣಿಕೆ, ಮಧ್ಯಾಹ್ನ ಮಹಾಪೂಜೆ ಜರುಗಿತು.ನಾಳೆ ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಹಾಗೂ  ಕಾಚುಕುಜುಂಬ ದೈವದ ನರ್ತನ ಸೇವೆ, ಶ್ರೀ ದೇವರ ಮಹಾಪೂಜೆ, ಶ್ರೀ...

ಅಡ್ಕಾರು : ಕ್ಯಾನ್ಸರ್‌ ಬಗ್ಗೆ ಜಾಗೃತಿ ಕಾರ್ಯಕ್ರಮ

ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ.) ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು, ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟ ಜಾಲ್ಸೂರು ಇವುಗಳ ಸಹಯೋಗದೊಂದಿಗೆವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್‌ ಬಗ್ಗೆ ಜಾಗೃತಿ ಕಾರ್ಯಕ್ರಮ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಸಭಾಭವನ ಫೆ.5 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯ ಗ್ರಾಮೀಣಾಬಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್‌ರವರು ಉದ್ಘಾಟಿಸಿದರು. ವಿಜಯ...

ರಾಷ್ಟ್ರೀಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಶ್ರೀಮತಿ ಹರ್ಷಿತಾ.ಕೆ ತೇರ್ಗಡೆ

ಕೇಂದ್ರ ಸರಕಾರ ಉನ್ನತ  ಶಿಕ್ಷಣ ಇಲಾಖೆ ಮತ್ತು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಸಹಯೋಗದೊಂದಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸುವ  ರಾಷ್ಟ್ರೀಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ  ಪರೀಕ್ಷೆ (ಯುಜಿಸಿ ನೆಟ್ ಡಿಸೆಂಬರ್-2025) ಯಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಶ್ರೀಮತಿ ಹರ್ಷಿತಾ.ಕೆ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಇವರು ಬೆಳ್ಳಾರೆ ತಡಗಜೆ ಪ್ರಜ್ವಲ್ ನಾಯಕ.ಟಿ ಇವರ ಪತ್ನಿ ಹಾಗೂ...
Loading posts...

All posts loaded

No more posts

error: Content is protected !!