ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರಥಮ ವರ್ಷದ ಬಿ.ಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ ಸಮುದಾಯ ಭವನ, ಅಮರಶ್ರೀಭಾಗ್‌ನಲ್ಲಿ ಆ. 17ರಂದು ನಡೆಯಿತು. ಮುಖ್ಯ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ನಿತ್ಯಾನಂದ ಮುಂಡೋಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ಪಡೆದು ಉತ್ತಮ ನಾಗರೀಕರಾಗಿ ಉನ್ನತ ಹುದ್ದೆಯನ್ನು ಪಡೆಯುವವರಾಗಿ ಎಂದು ಹೇಳಿ ವಿದ್ಯಾರ್ಥಿಗಳ...

ಹಿರಿಯ ಫೋಟೋಗ್ರಾಫರ್ ಸುಬ್ರಹ್ಮಣ್ಯದ ಲೋಕೇಶ್ ಬಿ.ಎನ್ ರವರಿಗೆ “ಛಾಯಾರತ್ನ ಪ್ರಶಸ್ತಿ” – ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಶಕಗಳ “ಛಾಯಾಗ್ರಾಹಕ ಹಾಗೂ ಪತ್ರಕರ್ತ”

ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬ್ರಹ್ಮಾವರ ವಲಯ ಇವುಗಳ ಜಂಟಿ ಆಶ್ರಯದಲ್ಲಿ ನೀಡಲಾದ “ಛಾಯಾರತ್ನ ಪ್ರಶಸ್ತಿ”ಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯದ ಲೋಕೇಶ್.ಬಿ.ಎನ್ ಭಾಜನರಾಗಿದ್ದಾರೆ. ಆ.18ರಂದು ಬ್ರಹ್ಮಾವರದ ರೋಟರಿ ಸಭಾಭವನದಲ್ಲಿ ನಡೆದ ಎಸ್.ಕೆ.ಪಿ.ಎ ಬ್ರಹ್ಮಾವರ ವಲಯದ ಬೆಳ್ಳಿ ಹಬ್ಬ ಸಂಭ್ರಮ ಕಾರ್ಯಕ್ರಮದಲ್ಲಿ ಲೋಕೇಶ್ ರವರಿಗೆ ಪ್ರಶಸ್ತಿ...
Ad Widget

ಸುಳ್ಯ ಎನ್ಎಂಪಿಯುಸಿ ವತಿಯಿಂದ “ಕಂಡದ ಗೌಜಿ” ಕಾರ್ಯಕ್ರಮ

ಸುಳ್ಯ : ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ವತಿಯಿಂದ “ಕಂಡದ ಗೌಜಿ” ಸಿಸನ್ 03 ಕ್ರೀಡಾ ಕೂಟವು ಕೊರಂಗು ಬೈಲು ಗದ್ದೆ, ಅಜ್ಜಾವರ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾದ ಗದ್ದೆಯ ಮಾಲಿಕರಾದ ನಿವೃತ್ತ ದೈ ಶಿ ಶಿಕ್ಷಕ ಬಾಲಕೃಷ್ಣ ನಾಯ್ಕ್ ಅವರು ಮಾತನಾಡಿ "ನಮ್ಮ ಕೃಷಿ ಪ್ರಧಾನ ಸಂಸ್ಕೃತಿಯನ್ನು ಪ್ರೋತ್ಸಾಹಿಸಬೇಕು. ಯುವ ಜನಾಂಗ ಅದನ್ನು...

ಸುಳ್ಯಕ್ಕೆ ಮೈನಾರಿಟಿ ಹಾಸ್ಟೆಲ್ ಮಂಜೂರು ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ರವರಿಗೆ ಮನವಿ

ಶಿಕ್ಷಣ ಕಾಶಿ ಎಂದು ಹೆಸರು ಪಡೆದಿರುವ ಸುಳ್ಯ ಗ್ರಾಮೀಣ ಪ್ರದೇಶವಾಗಿದ್ದರೂ, ವಿಶೇಷ ಬೌಗೋಳಿಕ ಹಿನ್ನಲೆ ಹೊಂದ್ದಿದ್ದು, ಕೇರಳ ರಾಜ್ಯ, ಕೊಡಗು ಜಿಲ್ಲೆಯ ಗಡಿ ಪ್ರದೇಶವಾಗಿರುತ್ತದೆ ಅಲ್ಲದೇ ಕೆ.ಜಿ ಯಿಂದ ಪಿ.ಜಿ ಯವರೆಗೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಮತ್ತು ಇಂಜಿನಿಯರಿಂಗ್, ನರ್ಸಿಂಗ್, ಮೆಡಿಕಲ್, ಡೆಂಟಲ್, ಪಾಲಿಟೆಕ್ನಿಕ್ ಮೊದಲಾದ ಎಲ್ಲಾ ಕೋರ್ಸ್ ಗಳನ್ನು ಹೊಂದಿರುವ ತಾಲೂಕು ಕೇಂದ್ರದಲ್ಲಿ...

ಇಂದಿನ(ಆಗಸ್ಟ್ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಮತ್ತಷ್ಟು ಇಳಿಕೆ..!! ; ಅಡಿಕೆ, ಕೊಬ್ಬರಿ ಹಾಗೂ ಕಾಳುಮೆಣಸು ಸಂಪೂರ್ಣ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 18 ಆಗಸ್ಟ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ದ್ವಾದಶ ರಾಶಿಗಳ ದಿನ ಭವಿಷ್ಯ – 18 ಆಗಸ್ಟ್ 2026, ಮಂಗಳವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಕಚೇರಿಯಲ್ಲಿ ಅನಗತ್ಯ ವಾದ-ವಿವಾದಗಳಿಂದ ದೂರವಿರಿ. ಅಧಿಕ ಖರ್ಚು ಮಾಡುವುದು ಉತ್ತಮವಲ್ಲ. ಸ್ನೇಹಿತರ ಸಹಾಯ ಪಡೆಯಿರಿ. ವೃಥಾ ನಿಂದನೆಗಳನ್ನು ಎದುರಿಸಬೇಕಾಗಿಬರಬಹುದು... ಗಮನಿಸಿ - ನಿಮ್ಮನ್ನು ನೀವೇ ವಿಮರ್ಶಿಸಿಕೊಳ್ಳಿ... ಪರಿಹಾರ : ಸೋಮವಾರ ದೇವರಮನೆಯಲ್ಲಿ ಶಂಖವನ್ನಿಟ್ಟು ಪೂಜಿಸಿ. 02)ವೃಷಭರಾಶಿ...

ಬೆಳ್ಳಾರೆಯಲ್ಲಿ ನಾಗರ ಪಂಚಮಿ ಆಚರಣೆ

ಬೆಳ್ಳಾರೆಯ ಕೆಳಗಿನಪೇಟೆ ವೆಂಕಟರಮಣ ದೇವಸ್ಥಾನದ ಹತ್ತಿರವಿರುವ‌ ನಾಗನಕಟ್ಟೆಯಲ್ಲಿ ನಾಗತಂಬಿಲ, ಹಾಲಾಭಿಷೇಕ, ಸಿಯಾಳಾಭಿಷೇಕ ಆ 17ರಂದು ನಡೆಯಿತು.ಅಧಿಕ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಆ.17ರಂದು ವಿಶೇಷ ಪೂಜೆ ನಡೆಯಿತು.  ಅರ್ಚಕರಿಂದ ಶ್ರೀ ನಾಗ ದೇವರಿಗೆ ಹಾಲು ಹಾಗೂ ಸೀಯಾಳಾಭಿಷೇಕ ನೆರವೇರಿತು. ನೂರಾರು ಭಕ್ತಾಧಿಗಳು ಆಗಮಿಸಿ ಹಾಲು ಹಾಗೂ ಸೀಯಾಳವನ್ನು ಸೇವಾ ರೂಪದಲ್ಲಿ ಶ್ರೀ ದೇವರಿಗೆ ಅರ್ಪಿಸಿ ತೀರ್ಥ-ಪ್ರಸಾದವನ್ನು ಸ್ವೀಕರಿಸಿದರು. ದೇವಸ್ಥಾನದ ಸಿಬ್ಬಂದಿಗಳು ಸಹಕರಿಸಿದರು.

ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತ ವಿನೋದ್ ಮೂಡಗದ್ದೆ ಆಯ್ಕೆ

ಕೊಡಗು ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಅಂಗವಾಗಿ ನೀಡಲಾಗುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ನಿವಾಸಿ ಪತ್ರಕರ್ತ ವಿನೋದ್ ಮೂಡಗದ್ದೆ ರವರು ಆಯ್ಕೆಯಾಗಿದ್ದಾರೆ. ಗುಂಡುಕಟ್ಟಿ ಎಸ್ಟೇಟ್ ಮ್ಹಾಲಕರಾದ ಜಿ.ಎಂ ಮಹೇಂದ್ರ ರವರು ತಮ್ಮ ತಂದೆ ಜಿ.ಎಂ ಮೋಹನ್ ರವರ ಹೆಸರಿನಲ್ಲಿ ನೀಡುತ್ತಿರುವ ದತ್ತಿನಿಧಿ ಪ್ರಶಸ್ತಿಗೆ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ...

“ಛಾಯಾರತ್ನ” ಪ್ರಶಸ್ತಿಗೆ ಸುಬ್ರಹ್ಮಣ್ಯದ ಲೋಕೇಶ್.ಬಿ.ಎನ್ ಆಯ್ಕೆ ; ನಾಳೆ(ಆ.18) ಪ್ರಶಸ್ತಿ ಪ್ರಧಾನ

ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬ್ರಹ್ಮಾವರ ವಲಯದ ಜಂಟಿ ಆಶ್ರಯದಲ್ಲಿ ನೀಡಲಾಗುವ ಪ್ರತಿಷ್ಠಿತ “ಛಾಯಾರತ್ನ” ಪ್ರಶಸ್ತಿಗೆ ಸುಳ್ಯ ವಲಯದ ಛಾಯಾಗ್ರಾಹಕರಾದ ಸುಬ್ರಹ್ಮಣ್ಯದ ಲೋಕೇಶ್.ಬಿ.ಎನ್ ಆಯ್ಕೆಯಾಗಿದ್ದಾರೆ. ನಾಳೆ ಆ.18ರಂದು ಬ್ರಹ್ಮಾವರದ ರೋಟರಿ ಸಭಾಭವನದಲ್ಲಿ ಎಸ್.ಕೆ.ಪಿ.ಎ ಬ್ರಹ್ಮಾವರ ವಲಯದ ಬೆಳ್ಳಿ ಹಬ್ಬದ ವರ್ಷದ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದಲ್ಲಿ...
Loading posts...

All posts loaded

No more posts

error: Content is protected !!