Ad Widget

ಮಹಿಳೆಗೆ ಹಲ್ಲೆ ಆರೋಪಿಯನ್ನು ಬಂಧಿಸುವಂತೆ ಸಂಘಟನೆಯವರಿಂದ ವೃತ್ತ ನಿರೀಕ್ಷರಿಗೆ ಮನವಿ: ಮಾ.30 ರ ಒಳಗೆ ಬಂಧಿಸದಿದ್ದರೇ ಠಾಣೆಯ ಎದುರು ಪ್ರತಿಭಟನೆಯ ಎಚ್ಚರಿಕೆ

ಸುಳ್ಯದ ನಾವೂರಿನ ಶ್ರೀಮತಿ ಚಂದ್ರಿಕಾ ಎಂಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಯವರ ಮೇಲೆ ಮಾ.26 ರಂದು ಎಫ್.ಐ.ಆರ್ ದಾಖಲಾಗಿದ್ದು ಈ ತನಕ ಬಂಧಿಸದೇ ಇರುವುದನ್ನು ಖಂಡಿಸಿ ಶೀಘ್ರವಾಗಿ ಆತನನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಯವರು ಸುಳ್ಯದ ವೃತ್ತ ನಿರೀಕ್ಷರಿಗೆ ಮನವಿ ಸಲ್ಲಿಸಿದರು. ಮಾ.30...

ಸುಳ್ಯ ನ.ಪಂ. ಸದಸ್ಯ ಶರೀಫ್ ಕಂಠಿ ಯವರ ಮೇಲೆ ಸುಳ್ಳು ಆರೋಪ – ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ. ಖಂಡನೆ

ಸುಳ್ಯ ನಗರ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಶರೀಫ್ ಕಂಠಿಯವರ ಮೇಲೆ ಮಹಿಳೆಯ ಮೇಲೆ ಹಲ್ಲೆ ಎಂಬ ಸುಳ್ಳು ಆರೋಪವನ್ನು ಹೊರಿಸಿ ದೂರು ಕೊಟ್ಟಿರುವುದು ಖಂಡನೀಯ. ನಗರ ಪಂಚಾಯತ್ ಸದಸ್ಯನಾಗಿ ತಮ್ಮ ವಾರ್ಡಿನಲ್ಲಿ ಜಾತ್ಯತೀತವಾಗಿ ಅಬಿವೃದ್ದಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಒಬ್ಬ ಜನಪ್ರತಿನಿಧಿಯಾಗಿರುವ ಇವರ ಮೇಲೆ ಈ ರೀತಿಯ ಸುಳ್ಳು ಆರೋಪ ಮಾಡಿದ್ದು ಈ ಬಗ್ಗೆ...
Ad Widget

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಅಜಿತ್ ರಾವ್ ಕಿಲಂಗೋಡಿ, ಉಪಾಧ್ಯಕ್ಷರಾಗಿ ಹರ್ಷ ಜೋಗಿಬೆಟ್ಟು

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ 3ನೇ ಅವಧಿಗೆ ನಿರ್ದೇಶಕರಾಗಿ ಆಯ್ಕೆಯಾದ ಅಜಿತ್ ರಾವ್ ಕಿಲಂಗೋಡಿ ಅಧ್ಯಕ್ಷರಾಗಿಯೂ, ಹರ್ಷ ಜೋಗಿಬೆಟ್ಟು ಉಪಾಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆ. 7ರಂದು ಚುನಾವಣೆ ನಡೆದಿದ್ದರೂ, ಕಾಂಗ್ರೆಸ್ ಕಡೆಯಿಂದ 200 ಮತ್ತು ಬಿಜೆಪಿ ಕಡೆಯಿಂದ 266 ಸದಸ್ಯರು ಕೋರ್ಟ್ ಮೂಲಕ ಮತದಾನದ ಹಕ್ಕನ್ನು ಪಡೆದುಕೊಂಡು ಬಂದು ಮತ ಚಲಾಯಿಸಿದ್ದರಿಂದ ವಿಜೇತ ಅಭ್ಯರ್ಥಿಗಳ...

ನೆಟ್ಟಾರು : ಮೈಕ್ರೋ ಬಚತ್ ಮರಣ ಸಾಂತ್ವನ ನಿಧಿಯ ಮಂಜೂರಾತಿ ಪತ್ರ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯದ ನೆಟ್ಟಾರು ಕಾರ್ಯ ಕ್ಷೇತ್ರದ ಧನ್ಯಶ್ರೀ ಸಂಘದ ಸದಸ್ಯರಾದ ನೆಸಿಮಾರವರು ಮೈಕ್ರೋ ಬಚತ್ ಪಾಲಿಸಿ ಮಾಡಿಸಿದ್ದು ಅನಾರೋಗ್ಯದ ಕಾರಣ ಮರಣ ಹೊಂದಿದ್ದು, ಮೈಕ್ರೋ ಬಚತ್ ಮರಣ ಸಾಂತ್ವನ ಮೊತ್ತ ಎರಡು ಲಕ್ಷ ರೂಪಾಯಿ ಮಂಜೂರಾತಿ ಪತ್ರವನ್ನು ವಿನಿಯೋಗದಾರದ ರಫೀಕ್ ರವರಿಗೆ ಒಕ್ಕೂಟದ ಅಧ್ಯಕ್ಷರಾದ ಅಣ್ಣುರವರು ಮಾ.29 ರಂದು...

ದುಗಲಡ್ಕ- ನೀರಬಿದಿರೆ ರಸ್ತೆ ಅಭಿವೃದ್ಧಿಗೆ ಶಾಸಕರಿಂದ ಗುದ್ದಲಿಪೂಜೆ – 45 ಲಕ್ಷ ಅನುದಾನ ಮಂಜೂರು

ಸುಳ್ಯ ನಗರ ಪಂಚಾಯ್ ವ್ಯಾಪ್ತಿಯ ಬಹುಬೇಡಿಕೆಯ ರಸ್ತೆ ಕೊಡಿಯಾಲಬೈಲು- ನೀರಬಿದಿರೆ- ದುಗಲಡ್ಕ- ರಸ್ತೆಯು 45ಲಕ್ಷದ ವೆಚ್ಚದಲ್ಲಿ ಅಭಿವೃದ್ಧಿಯಾಗಲಿದ್ದು ಇದರ ಗುದ್ದಲಿಪೂಜೆಯನ್ನು ಶಾಸಕರಾದ ಭಾಗೀರಥಿ ಮುರುಳ್ಯ ನೆರವೆರಿಸಿದರು.ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ,ಉಪಾಧ್ಯಕ್ಷ ಬುದ್ದನಾಯ್ಕ, ಸದಸ್ಯರಾದ ಕಿಶೋರಿ ಶೇಟ್,ಬಾಲಕೃಷ್ಣ ರೈ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಭಾಜಪ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,...

ಮಾಜಿ ಸೈನಿಕರ ಸಂಘದಿಂದ ಸುಳ್ಯದ ಮೂರು ಸಂಸ್ಥೆಗಳಿಗೆ ಸಹಾಯಧನ ಹಸ್ತಾಂತರ

ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘದಿಂದ ಸುಳ್ಯ ಮೂರು ಸಂಸ್ಥೆಗಳಿಗೆ ಸವಲತ್ತು ಖರೀದಿಗಾಗಿ ತಲಾ ರೂ 5000 ವನ್ನು ಕೊಡುಗೆಯಾಗಿ ನೀಡಲಾಯಿತು. ಎಂ.ಬಿ.ಫೌಂಡೇಶನ್ ನ ಸಾಂದೀಪ್ ವಿಶೇಷ ಶಾಲೆ, ಅಡ್ಕಾರಿನ ವನವಾಸಿ ವಿದ್ಯಾರ್ಥಿ ನಿಲಯ ಹಾಗೂ ಸುಳ್ಯ ಪಶುಪಾಲನಾ ಆಸ್ಪತ್ರೆ ಸೇರಿದಂತೆ ಮೂರು ಸಂಸ್ಥೆಗಳಿಗೆ ತಲಾ ರೂ 5000/- ದಂತೆ ದೇಣಿಗೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥರು...

ಎಲಿಮಲೆ ಅರಂತೋಡು ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ, 1.25 ಕೋಟಿ ಅನುದಾನ ಬಿಡುಗಡೆ

ಎಲಿಮಲೆ-ಅರಂತೋಡು ರಸ್ತೆ ಅಭಿವೃದ್ಧಿ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 1.25ಕೋಟಿ ವೆಚ್ಚದ ಕಾಮಗಾರಿಗೆ  ಶಾಸಕರಾದ ಭಾಗೀರಥಿ ಮುರುಳ್ಯ ಅವರು ಮಾ.29 ರಂದು ಗುದ್ದಲಿಪೂಜೆ ನೆರವೇರಿಸಿದರು. ಎಲಿಮಲೆಯಿಂದ ರಸ್ತೆ ಕಾಮಗಾರಿ ನಡೆಯಲಿದೆ.‌ ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಂಡ 8 ಕೋಟಿ ಅನುದಾನಲ್ಲಿ 1.25 ರೂಪಾಯಿಯನ್ನು ಈ ರಸ್ತೆಗೆ ಇರಿಸಲಾಗಿದೆ. ಈಗಾಗಲೇ ಸರಕಾರಕ್ಕೆ 3 ವಿಧಗಳಲ್ಲಿ...

6ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.30ರಂದು ಸಂಜೆ 4.45 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.30 ರಂದು ಸಂಜೆ 4.45 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ

ಸುಳ್ಯ: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವ, ಗುಳಿಗ ದೈವ, ಸ್ವಾಮಿ ಕೊರಗಜ್ಜ‌ ದೈವಗಳ ಸನ್ನಿಧಿಯಲ್ಲಿ ಎ.5 ರಿಂದ 6 ರವರೆಗೆ ನಡೆಯುವ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಮಾ.28 ರಂದು ಶುಕ್ರವಾರ ಸಾರ್ವಜನಿಕ ಶ್ರೀ ದುರ್ಗಾಪೂಜೆಯು ಪುರೋಹಿತ ಶಿವಪ್ರಸಾದ್ ಭಟ್ ಅವರ ನೇತೃತ್ವದಲ್ಲಿ ‌ವಿಜೃಂಭಣೆಯಿಂದ ನೆರವೇರಿತು. ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ...

ಅಡ್ಕಾರು : 33 ಕೆವಿ ವಿದ್ಯುತ್ ಕಂಬಕ್ಕೆ ಲಾರಿ ಗುದ್ದಿ ವಿದ್ಯುತ್ ವ್ಯತ್ಯಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ 33 ಕೆ.ವಿ. ವಿದ್ಯುತ್ ಲೈನ್ ನ ಕಂಬಕ್ಕೆ ಲಾರಿ ಗುದ್ದಿ ಹಾನಿಯಾಗಿದೆ. ರಾತ್ರಿ 3.30 ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಬಹುದೆಂದು ಮೆಸ್ಕಾಂ ಮೂಲಗಳಿಂದ ತಿಳಿದುಬಂದಿದೆ.
Loading posts...

All posts loaded

No more posts

error: Content is protected !!