Ad Widget

ಕೈಕಂಬ : ನಡುತೋಟ ಶಿರಾಡಿ ದೈವದ ನೇಮೋತ್ಸವ

ಸುಬ್ರಹ್ಮಣ್ಯ ಮಾ.15: ಸುಬ್ರಹ್ಮಣ್ಯ ಸಮೀಪದ ಕೈಕಂಬ ನಡುತೋಟ ಶ್ರೀ ಶಿರಾಡಿ ದೈವದ ವಾರ್ಷಿಕ ನೇಮೋತ್ಸವ ಶುಕ್ರವಾರ ರಾತ್ರಿಯಿಂದ ಆರಂಭಗೊಂಡು ಶನಿವಾರ ಮಧ್ಯಾಹ್ನ ತನಕ ಜರಗಿತು.ಶುಕ್ರವಾರ ಸಂಜೆ ಶಿರಾಡಿ ದೈವದ ಚಾವಡಿಯಿಂದ ಭಂಢಾರ ತೆಗೆದು ಕೊಡಿನಾಡದಲ್ಲಿ ಇಡಲಾಯಿತು. ತದನಂತರ ದೈವಗಳಿಗೆ ಎಣ್ಣೆ ಇಡಲಾಯಿತು.ನಾಗಭ್ರಹ್ಮ, ಪಂಜುರ್ಲಿ, ಗುಳಿಗ, ಸತ್ಯದೇವತೆ ಮುಂತಾದ 15 ದೈವಗಳು ನರ್ತನ ಸೇವೆಯನ್ನು ಮಾಡಿ ಕೊನೆಗೆ...

ದ.ಕ.ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸುಳ್ಯ ತಾಲೂಕಿಗೆ 29 ಪ್ರಶಸ್ತಿ

ದಕ್ಷಿಣ ಕನ್ನಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ಮಾ.13 ಹಾಗೂ 14 ರಂದು ನಡೆದ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸುಳ್ಯ ತಾಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರುಗಳು ಭಾಗವಹಿಸಿ 29 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.ಮಾ.13 ರಂದು ನಡೆದ ಕ್ರೀಡಾಕೂಟದಲ್ಲಿ ಕಂದಾಯ...
Ad Widget

ಸುಳ್ಯಕ್ಕೆ ಆಗಮಿಸಿದ ನಂದಿ ರಥಯಾತ್ರೆ – ಭವ್ಯ ಸ್ವಾಗತ – ಮೆರವಣಿಗೆ : ಗೋವು ಉಳಿದರೇ ಎಲ್ಲಾ ಸಮಸ್ಯೆಗೆ ಪರಿಹಾರ – ಭಕ್ತಿಭೂಷನ್ ದಾಸ್

ಗೋವು ಉಳಿದರೇ ಮಾತ್ರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಾಧ್ಯವಿದೆ ಎಂದು ರಾಷ್ಟ್ರೀಯ ಗೋ ಸೇವಾ ಸಂಸ್ಥಾನ್ ಟ್ರಸ್ಟ್ ನ ಅಧ್ಯಕ್ಷರಾದ ಭಕ್ತಿಭೂಷನ್ ದಾಸ್ ಹೇಳಿದರು. ಗೋ ಸೇವಾ ಗತಿನಿಧಿ ಕರ್ನಾಟಕ, ರಾಧ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ ಇವರ ಸಹಯೋಗದೊಂದಿಗೆ ನಡೆಯುವ ನಂದಿ ರಥಯಾತ್ರೆಯ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಸ್ಥಾನದ...

ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಮಿತಿಯ ಸದಸ್ಯರಾಗಿ ಮಹೇಶ್ ಬೆಳ್ಳಾರ್ಕರ್ ನೇಮಕ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ನೂತನವಾಗಿ ರಚಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಮಹೇಶ್ ಬೆಳ್ಳಾರ್ಕರ್ ಇವರು ನಾಮನಿರ್ದೇಶನಗೊಂಡಿರುತ್ತಾರೆ. ದ. ಕ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಈ ಸಮಿತಿಯಲ್ಲಿ ಜಿಲ್ಲೆಯ ಒಟ್ಟು ಐವರು ಸದಸ್ಯರುಗಳಿದ್ದಾರೆ. ಈ ನಿಗಮದ ಮೂಲಕ ಕರ್ನಾಟಕ ಸರಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ...

ಎಂಎಸ್‌ಡಬ್ಲೂ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಪಂಜದ ಆಯಿಶತುಲ್ ಜಾಫ್ನ

ಎಂಎಸ್‌ಡಬ್ಲೂ ಪದವಿಯಲ್ಲಿ 1ನೇ ಬ್ಯಾಂಕ್ ಪಡೆಯುವ ಮೂಲಕ ಪಂಜದ ಆಯಿಶತುಲ್‌ ಜಾಪ್ಟರವರು ಊರಿಗೆ ಕೀರ್ತಿ ತಂದಿದ್ದಾರೆ. ಕೊಣಾಜೆಯ ಮಂಗಳೂರು ಯೂನಿವರ್ಸಿಟಿಯ ವಿದ್ಯಾರ್ಥಿನಿಯಾಗಿರುವ ಇವರು 2023-2024ನೇ ಸಾಲಿನಲ್ಲಿ ನಡೆದ ಎಂಎಸ್‌ಡಬ್ಲೂ ಪದವಿ ಪರೀಕ್ಷೆಯಲ್ಲಿ ಮೊದಲ ಬ್ಯಾಂಕ್‌ ಪಡೆದಿದ್ದಾರೆ. ಇವರು ಪಂಜ ಕಾಲೇಜು ಬಳಿಯ ನಿವಾಸಿ ಅಬ್ದುಲ್ ಕರೀಂ ಮತ್ತು ಜಮೀಲಾ ದಂಪತಿಗಳ ಪುತ್ರಿ.

ಪುತ್ತೂರು : 4ನೇ ವಾರದಲ್ಲಿ ಮುನ್ನಡೆಯುತ್ತಿರುವ ಭಾವ ತೀರ ಯಾನ – ಮಾ.15 ಮತ್ತು 16 ರಂದು ಶೋ ನೋಡಲು ಅವಕಾಶ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.15 ಶನಿವಾರದಂದು ಮಧ್ಯಾಹ್ನ 1.45 ಕ್ಕೆ ಹಾಗೂ ಮಾ.16 ಆದಿತ್ಯವಾರದಂದು ಮಧ್ಯಾಹ್ನ 2-30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book...

ಕನಕಮಜಲು : ಮಾ 27 ಮತ್ತು 28 ರಂದು ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ

ಕನಕಮಜಲು ಗ್ರಾಮದ ಬಾಳೆಹಿತ್ತಿಲು ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ ಮಾ.‌ 27 ಮತ್ತು 28 ರಂದು ನಡೆಯಲಿದೆ. ಮಾ. 20 ಗುರುವಾರದಂದು ಬೆಳಿಗ್ಗೆ ಗಂಟೆ 7-00ಕ್ಕೆ ಗೊನೆ ಮುಹೂರ್ತ ನಡೆಯಲಿದೆ. ಮಾ. 23 ಆದಿತ್ಯವಾರದಂದು ರಾತ್ರಿ ಗಂಟೆ 7-00ಕ್ಕೆ ದೈವಸ್ಥಾನ ಪುನಃ ಪ್ರತಿಷ್ಠಾ ದಿನದ ಅಂಗವಾಗಿ ಕೈವೀದು...

ಸುಳ್ಯ : ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.13ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ.ಎಸ್. ಆಗಮಿಸಿ ಮಹಿಳಾ ದಿನಾಚರಣೆಯ ಕುರಿತು ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಸಮಾಜದಲ್ಲಿ ವಿವಿಧ ರೀತಿಯಲ್ಲಿ...

ಮಡಪ್ಪಾಡಿ : ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ಕೊಡುಗೆ

ಯುವಕ ಮಂಡಲ(ರಿ) ಮಡಪ್ಪಾಡಿ ಹಾಗೂ ಶ್ರೀ ರಾಮ ಭಜನಾ ಮಂಡಳಿ ಇದರ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಕುಶಾಲಪ್ಪ ಪಾರೆಮಜಲು ಇವರಿಗೆ ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ನ್ನು ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯ ಕುಮಾರ್ ಮುಳುಗಾಡು, ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರಾದ ಕರುಣಾಕರ ಪಾರೆಪ್ಪಾಡಿ, ಯುವಜನ ಸಂಯುಕ್ತ...

ಮಾ.16 : ಕುಕ್ಕುಜಡ್ಕದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಅಮರ ಸಂಘಟನಾ ಸಮಿತಿ (ರಿ.), ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗ ಇದರ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವು ಮಾ. 16 ಭಾನುವಾರದಂದು ಕುಕ್ಕುಜಡ್ಕದ ಅಮರಮುಡ್ನೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿರುವುದು. ನಾಗರಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!