- Monday
- September 7th, 2026
ಕಟ್ಟ-ಗೋವಿಂದನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸದಾಶಿವ ಕಟ್ಟ ಧ್ವಜಾರೋಹಣ ನೆರವೇರಿಸಿದರು. ಮಿಥುನ್ ಕುಮಾರ್ ಸೋನ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಹಾಗೂ ಶ್ರೀಮತಿ ಯಮುನಾ ಮತ್ತು ಮನೆಯವರು ಸಿಹಿತಿಂಡಿ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು,...
ಪಂಜ : ಸಮರ್ಪಕ ಲೆಕ್ಕಪತ್ರ ನೀಡಲು ಆಡಳಿತ ಸಮಿತಿ ವಿಫಲ – ರಾತ್ರಿಯಾದರೂ ಮುಗಿಯದ ಭಕ್ತಾಧಿಗಳ ಸಭೆ – ರಾಜೀನಾಮೆಗೆ ಒತ್ತಾಯ
ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ, ಆರ್ಥಿಕ ಪಾರದರ್ಶಕತೆ ಮತ್ತು ಗುತ್ತಿಗೆ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿರುವ ಗೊಂದಲಗಳಿಗೆ ಸ್ಪಷ್ಟನೆ ಕೋರಿ ಆ.15ರಂದು ಸಾರ್ವಜನಿಕ ಸಭೆ ಕರೆಯಬೇಕು ಎಂದು ಒತ್ತಾಯಿಸಿ ಭಕ್ತಾದಿಗಳು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು ಅವರಿಗೆ ಮನವಿ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯವೈಖರಿ ಮತ್ತು ಹಣಕಾಸಿನ ವ್ಯವಹಾರಗಳ ಬಗ್ಗೆ...
ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಆಲೆಟ್ಟಿ ಯಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕಿ ಇಂದಿರಾದೇವಿ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಕಾವ್ಯ ಎಂ., ಶಿಕ್ಷಕ ವೃಂದದವರು, ಅಡುಗೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯವರು, ಆಲೆಟ್ಟಿ ಗ್ರಾಮ ಪಂಚಾಯತ್ ನ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕ...
ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ತಾಲೂಕು ತಹಶೀಲ್ದಾರ್ ಮಂಜುಳಾ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ ಸಂದೇಶ ನೀಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಯಕರ ಮಡ್ತಿಲ, ಇಂಜಿನಿಯರ್ ವೆಂಕಟೇಶ್,...
ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಅನ್ಸಾರಿಯಾ ಎಜುಕೇಶನ್ ಸೆಂಟರ್ನ ಪ್ರದಾನ ಕಾರ್ಯದರ್ಶಿ ಹಾಜಿ ಅಬ್ದುಲ್ ಲತೀಫ್ ಹರ್ಲಡ್ಕ ಧ್ವಜಾರೋಹಣ ನೆರವೇರಿಸಿದರು. ಶಾಲಾ ಸಂಚಾಲಕ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಸಂಯೋಜಕ ಶಾಫಿ ಕುತ್ತಾಮೊಟ್ಟೆ, ನಿಕಟ ಪೂರ್ವ ಸಂಚಾಲಕ...
ಸುಳ್ಯ: ಆಟಿ ತಿಂಗಳು ಪ್ರಕೃತಿಯೊಂದಿಗೆ ಹೊಂದಿಕೊಂಡು ಹೇಗೆ ಬದುಕಬೇಕು ಎಂಬುದನ್ನು ತಿಳಿಸುವ ಕಾಲಘಟ್ಟವಾಗಿದೆ. ಪ್ರಕೃತಿಯು ನಮಗೆ ಯಾವ ಆಹಾರ ಸೇವಿಸಬೇಕು, ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತದೆ. ಪ್ರಕೃತಿಗೆ ಸದಾ ಗೌರವ ನೀಡಬೇಕು. ಅದು ದೇವರು ನಮಗೆ ನೀಡಿರುವ ಅಮೂಲ್ಯ ವರವಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ರಮಾ ವೈ.ಕೆ....
ಸುಳ್ಯ: ಭ್ರಷ್ಟಾಚಾರ ಮುಕ್ತ ನಾಗರಿಕ ಸಮಾಜ ನಿರ್ಮಾಣವಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಎಲ್ಲ ಶಾಲೆಗಳಲ್ಲೂ ಶಿಕ್ಷಕರ ಹುದ್ದೆಗಳು ಭರ್ತಿಯಾದಾಗ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ...
ಸುಳ್ಯ: ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆ. 29ರಂದು ಯಕ್ಷ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 6 ಗಂಟೆಗೆ ಪ್ರಸಿದ್ಧ ಅರ್ಥಧಾರಿಗಳಿಂದ ‘ಭೀಷ್ಮ ವಿಜಯ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಇದೇ ಸಂದರ್ಭದಲ್ಲಿ ರಂಗಮನೆಯ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಕರ್ನಾಟಕ ರಾಜ್ಯ...
ಕುಕ್ಕುಜಡ್ಕ: ಚೊಕ್ಕಾಡಿ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 15ರಂದು ಸಂಭ್ರಮದಿಂದ ಆಚರಿಸಲಾಯಿತು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ನಿರಂಜನ ಕೋಡ್ತುಗುಳಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಿಕೊಳ್ಳುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ...
ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಪುತ್ತೂರು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಅವರ ಪತ್ನಿ ವೇದಾ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಪುತ್ತೂರು ಶಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಹಾಗೂ ಧ್ವಜಗೀತೆಗಳನ್ನು ಹಾಡಿ ಗೌರವ ಸಲ್ಲಿಸಲಾಯಿತು....
Loading posts...
All posts loaded
No more posts
