ಕುಕ್ಕೆ ಸುಬ್ರಹ್ಮಣ್ಯ : ಬಸ್ ನಿಲ್ದಾಣದಲ್ಲಿ ಜಾರಿ ಬೀಳುತ್ತಿರುವ ಪ್ರಯಾಣಿಕರು – ಬಿದ್ದು ಕೈ-ಕಾಲು ಮುರಿದುಕೊಳ್ಳುವ ಮುನ್ನ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ..!

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದಿನಂಪ್ರತಿ ಆಗಮಿಸುವ ಸಾವಿರಾರು ಭಕ್ತಾದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಥಳೀಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ಆಶ್ರಯಿಸುತ್ತಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಸ್ ನಿಲ್ದಾಣದ ಆವರಣದಲ್ಲಿ ಸಂಚರಿಸುವುದೇ ಸಾರ್ವಜನಿಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬಸ್ ನಿಲ್ದಾಣದ ಇಕ್ಕೆಲಗಳಲ್ಲಿ, ಎದುರುಗಡೆಯ ಮಾರ್ಗದ ಬದಿಗಳಲ್ಲಿ...

ವಿದ್ಯಾಮಾತಾದಲ್ಲಿ ಅಗ್ನಿಪಥ್, PC ಹಾಗೂ ವಾಚರ್ ನೇಮಕಾತಿಗಳಿಗೆ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಪ್ರಾರಂಭ

ಪುತ್ತೂರು: ಸೇನಾ ನೇಮಕಾತಿಗಳು ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಅಗ್ನಿಪಥ್, ಪೊಲೀಸ್ ಕಾನ್ಸ್ಟೇಬಲ್ (PC) ಮತ್ತು ಅರಣ್ಯ ಇಲಾಖೆಯ ವಾಚರ್ ಹುದ್ದೆಗಳ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉಚಿತ ದೈಹಿಕ ಸಾಮರ್ಥ್ಯ/ಫಿಟ್ನೆಸ್ ತರಬೇತಿಯನ್ನು ಪ್ರಾರಂಭಿಸಿದೆ. ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಗೆ ಪೂರ್ವ ತಯಾರಿ ನಡೆಸುತ್ತಿರುವವರು ಹಾಗೂ ಭವಿಷ್ಯದ ಸಶಸ್ತ್ರ...
Ad Widget

ಸೋರುತ್ತಿರುವ ಮೆಸ್ಕಾಂ ಕಛೇರಿ – ಗ್ರಾಹಕರು ಜಾರಿ ಬಿದ್ದು ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಿ

ಸುಳ್ಯ ಮೆಸ್ಕಾಂ ಉಪ ವಿಭಾಗ ಕಛೇರಿಯು ಸೋರುತ್ತಿದ್ದು ಗ್ರಾಹಕರು ಜಾರಿ ಬಿದ್ದು ತೊಂದರೆಯಾಗುವ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.ಬಿಲ್ ಪಾವತಿ ಹಾಗೂ ಮತ್ತಿತರ ಕೆಲಸಗಳಿಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ.

ಸುಳ್ಯ : ಕುಸಿದ ಮ್ಯಾನ್ ಹೋಲ್ – ತುರ್ತು ದುರಸ್ತಿಗೆ ಆಗ್ರಹ

ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರು, ಶ್ರೀ ದೇವಿ ಕಾಂಪ್ಲೆಕ್ಸ್ ಬಳಿ ಮ್ಯಾನ್ ಹೋಲ್ ಕುಸಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯ ಆಹ್ವಾನಿಸುತ್ತಿದೆ. ದ್ವಿಚಕ್ರ ವಾಹನ ಸವಾರರು ಜಾಗ್ರತೆಯಿಂದ ಸಂಚರಿಸಬೇಕಿದೆ. ಸಂಬಂಧಪಟ್ಟವರು ತುರ್ತು ಕ್ರಮ ಕೈಗೊಂಡು ಸಂಭಾವ್ಯ ಅಪಾಯ ತಪ್ಪಿಸಬೇಕಿದೆ.

ಹವಾಮಾನ ಆಧಾರಿತ ಬೆಳೆ ವಿಮಾ ಕಂತು ಪಾವತಿಗೆ ಇನ್ನೂ ಇದೆ ಅವಕಾಶ – ಅಂತಿಮ ದಿನಾಂಕ ವಿಸ್ತರಣೆ

“ತೋಟಗಾರಿಕಾ ಬೆಳೆಗಳನ್ನು ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ನೋಂದಣಿಯ ಅಂತಿಮ ದಿನಾಂಕವನ್ನು ಆ.17 ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಜಿಲ್ಲಾ ತೋಟಗಾರಿಕಾ ಜಂಟಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹವಾಮಾನ ಆಧಾರಿತ ಬೆಳೆವಿಮೆ...

ಡಾ| ನಿಶ್ಚಿತಾ ಕಿಶೋರ್ ಅರಂಪಾಡಿ ಅವರಿಗೆ “ಡಾ| ಬಿ.ಸಿ ರಾಯ್ ವೈದ್ಯ ಸೇವಾ ಸ್ಮಾರಕ ಗೌರವ ಪ್ರಶಸ್ತಿ” ಪ್ರದಾನ

ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಗಳೂರು ಇದರ ಹಾಸನ ಜಿಲ್ಲಾ ಶಾಖೆಯ ವತಿಯಿಂದ ಡಾ| ನಿಶ್ಚಿತಾ ಕಿಶೋ‌ರ್ ಅವರಿಗೆ ಆ.08 ರಂದು “ಡಾ| ಬಿ.ಸಿ ರಾಯ್ ವೈದ್ಯ ಸೇವಾ ಸ್ಮಾರಕ ಗೌರವ ಪ್ರಶಸ್ತಿ” ಯನ್ನು ನೀಡಿ ಗೌರವಿಸಲಾಯಿತು. ಸಕಲೇಶಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ physician ಆಗಿರುವ ಇವರು ಕಳೆದ 18 ವರ್ಷದಿಂದ ಸರ್ಕಾರಿ ವೈದ್ಯರಾಗಿ...

ನಿಧನ : ಧರ್ಣಪ್ಪ ಗೌಡ ಕಳಿಗೆ

ಸುಬ್ರಹ್ಮಣ್ಯ ಆಗಸ್ಟ್ 10 : ಬಿಳಿನೆಲೆ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ನಡುತೋಟ ಕೈಕಂಬ ಶಿರಾಡಿ ದೈವಸ್ಥಾನದ ಮಾಜಿ ಅಧ್ಯಕ್ಷರು ಆದ ಕಳಿಗೆ ಧರ್ಣಪ್ಪ ಗೌಡ(83) ಇಂದು ಸೋಮವಾರ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದ್ದಾರೆ. ಮೃತರು...

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅದ್ಯಕ್ಷರಾದ ಎಸ್.ಸಂಶುದ್ದೀನ್ ಅವರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ(ಬಿ) ಇದರ ಅದ್ಯಕ್ಷರಾದ ಡಾ। ರೇಣುಕಾ ಪ್ರಸಾದ್ ಮತ್ತು ಡಾ। ಜ್ಯೊತಿ ಆರ್ ಪ್ರಸಾದ್ ದಂಪತಿಗಳನ್ನು ಭೇಟಿಯಾಗಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ನಿತ್ಯಾನಂದ ಮುಂಡೋಡಿ, ಜ್ಞಾನೇಶ್, ಚಂದ್ರಶೇಖರ ನಂಜೆ, ಹರೀಶ್ ಬಂಟ್ವಾಳ್, ಕೆ.ಟಿ ವಿಶ್ವನಾಥ, ಶಾಫಿ ಕುತ್ತಮೊಟ್ಟೆ ಸೇರಿದಂತೆ...

ಸುಳ್ಯ : ಯುವ ವಕೀಲರ ಬಳಗದಿಂದ “ಆಟಿಡೊಂಜಿ ದಿನ” ಆಚರಣೆ

ಸುಳ್ಯ, ಆ.09: ದಕ್ಷಿಣ ಕನ್ನಡ ಜಿಲ್ಲಾ ಯುವ ವಕೀಲರ ಬಳಗದ ವತಿಯಿಂದ “ಆಟಿಡೊಂಜಿ ದಿನ” ಹಾಗೂ ಸ್ನೇಹಮಿಲನ ಕಾರ್ಯಕ್ರಮವು ಆ.09ರಂದು ಸುಳ್ಯದ ರಸ ಪಾಕ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ನಡೆಯಿತು. ಯುವ ವಕೀಲರ ಬಳಗದ ಅಧ್ಯಕ್ಷರಾದ ಶ್ರೀಮತಿ ಲಿಖಿತಾ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ವಕೀಲರ ಸಂಘದ ಅಧ್ಯಕ್ಷರಾದ ಸುಕುಮಾರ ಕೊಡ್ತುಗೊಳಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ...

ಮನ್ವಿತ್ ಎಂ.ಪಿ ಮೊರಾರ್ಜಿ ದೇಸಾಯಿ ಶಾಲೆಗೆ ಆಯ್ಕೆ

ದೇವಚಳ್ಳ ಗ್ರಾಮದ ಮೆದು ನಿವಾಸಿಯಾದ ಮನ್ವಿತ್ ಎಂ.ಪಿ ಇವರು 2025-26 ನೇ ಸಾಲಿನ ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಯಲ್ಲಿ ಕಮ್ಮಾಜೆ ಶಾಲೆಗೆ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಪಿ.ಎಮ್.ಶ್ರೀ ಕೆ.ಪಿ.ಎಸ್ ಗುತ್ತಿಗಾರಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪುರುಷೋತ್ತಮ.ಎಮ್ ಹಾಗೂ ಶ್ಯಾಮಲಾ ದಂಪತಿಗಳ ಪುತ್ರ.
Loading posts...

All posts loaded

No more posts

error: Content is protected !!