- Tuesday
- March 10th, 2026
ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 17 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಮತ್ತು ಕೃಷಿ ಭೂಮಿಯ ಫಲವತ್ತೆ ಗೆ ಪಯಸ್ವಿನಿ ನದಿಗೆ ಅಡ್ಡಲಾಗಿ ನಾಗಪಟ್ಟಣದಲ್ಲಿ ನಿರ್ಮಿಸಿದ ವೆಂಟೆಡ್ ಡ್ಯಾಂ ಕಾಮಗಾರಿ ಪೂರ್ಣಗೊಂಡು 2 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಲಭಿಸಿಲ್ಲ, ಆದ್ದರಿಂದ ಸಚಿವರಾದ ಭೋಸರಾಜು ರವರು ಸುಳ್ಯಕ್ಕೆ ಆಗಮಿಸಿ ಸದ್ರಿ ವೆಂಟೆಡ್ ಡ್ಯಾಂ ನ್ನು ಉದ್ಘಾಟಿಸಿ...
ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.16 ರಿಂದ ಜ.21 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ.16 ರಂದು ಹಸುರು ಹೊರೆಕಾಣಿಕೆ ಮೆರವಣಿಗೆ : ಜ.16 ರಂದು ಬೆಳಗ್ಗೆ 10 ಗಂಟೆಗೆ ಜಾತ್ರೆಯ ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ,...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಡಿ.16ರಿಂದ ಜ.14 ರವರೆಗೆ ಪ್ರತೀದಿನ ಪ್ರಾತಃಕಾಲ 5:30ಕ್ಕೆ ಧನುಪೂಜೆ ನಡೆಯಿತು. ಜ.14ರಂದು ಮಕರ ಸಂಕ್ರಮಣದ ದಿನ ಪ್ರಾತಃಕಾಲ 4:00 ಗಂಟೆಯಿಂದ ಉದ್ಯಾಪನ ಧನುಪೂಜೆ ಮತ್ತು ಧನುಪೂಜೆ ಸಮಾಪ್ತಿ ನಡೆದು ಮದ್ಯಾಹ್ನ ದೇವಸ್ಥಾನದಲ್ಲಿ ಶ್ರೀ ಹರಿಹರೇಶ್ವರ ದೇವರಿಗೆ ಮಹಾಪೂಜೆ ನಡೆದು, ನಂತರ ಶ್ರೀ ವನಶಾಸ್ತವೇಶ್ವರ ಕಟ್ಟೆಯಲ್ಲಿ ದೇವರಿಗೆ ವಾರ್ಷಿಕ...
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಜ.14 ರಂದು ಕೊಳ್ಳಿ ಮುಹೂರ್ತ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ದೈವದ ಪರಿಚಾರಕರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
ಬೆಳ್ಳಿಪ್ಪಾಡಿ : ಶ್ರೀ ಶಾರದಾಂಬಾ ಭಜನಾ ಮಂದಿರ ಶಕ್ತಿ ನಗರ ಬೆಳ್ಳಿಪ್ಪಾಡಿ 42 ನೇ ವರ್ಷದ ಏಕಾಹ ಭಜನಾ ಮಹೋತ್ಸವವು ಜ.14 ರಿಂದ ಆರಂಭಗೊಂಡಿದ್ದು, ವಿವಿಧ ಭಜನಾ ತಂಡಗಳಿಂದ ನಡೆಯಿತು.
ಜ.13ರಂದು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಆಲೆಟ್ಟಿಯಲ್ಲಿ ಕಲಿಕಾ ಹಬ್ಬವನ್ನು ಆಚರಿಸಲಾಯಿತು. ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವೀಣಾ ವಸಂತ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕಾವ್ಯ.ಎಂ ಶಿಕ್ಷಕ ವೃಂದ, ಪೋಷಕರು,ಅಡುಗೆ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆ ಪ್ರಯುಕ್ತ ಮಕ್ಕಳಿಗೆ ಗಟ್ಟಿ ಓದು, ಸ್ಮರಣ...
ಸುಳ್ಯದ ನಾವೂರಿನ ಶ್ರೀ ಕಲ್ಕುಡ ದೈವಸ್ಥಾನದ ಜೀರ್ಣೋದ್ದಾರ ಕಾರ್ಯದ ಅಂಗವಾಗಿ ಮರದ ಕೆತ್ತನೆ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಪುನರ್ ಪ್ರತಿಷ್ಠಾ ಕಾರ್ಯಕ್ಕೆ ಭಕ್ತಾದಿಗಳು ಸಹಕರಿಸುವಂತೆ ಕೋರಿ ಮನವಿ ಪತ್ರ ಬಿಡುಗಡೆ ಜ.14 ರಂದು ದೈವಸ್ಥಾನದಲ್ಲಿ ನಡೆಯಿತು.ದೈವಸ್ಥಾನದ ಆಡಳಿತ ಸಮಿತಿಯ ಧರ್ಮದರ್ಶಿ ಪಿ.ಕೆ ಉಮೇಶ್ ರವರು ಪ್ರಾರ್ಥನೆ ನೆರವೇರಿಸಿದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು...
ಬೆಳ್ಳಾರೆ ಗ್ರಾಮದ ಬೂಡು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಮತ್ತು ಸಪರಿವಾರ ದೈವಗಳ ನೇಮೋತ್ಸವವು ಮಾ. 14 ಹಾಗೂ 15ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.14ರಂದು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ ಬೂಡು ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಬೆಳ್ಳಾರೆ ಜಲದುರ್ಗಾ ದೇವಿ ಅರ್ಥ್ ಮೂವರ್ಸ್ ಮತ್ತು ಬೋರ್ವೆಲ್ಸ್ ಮಾಲಕರಾಗಿರುವ ಪದ್ಮನಾಭ ಬೂಡು...
ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ.ಜಿ.ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ...
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದದಲ್ಲಿ ಡಿ.16ರಿಂದ ಆರಂಭಗೊಂಡ ಧನುಪೂಜೆಯು ಜ.14 ರಂದು ಸಂಪನ್ನಗೊಂಡಿತು.ಶ್ರೀ ದೇವರಿಗೆ ಪ್ರಾತಃಕಾಲ ರುದ್ರಾಭಿಷೇಕ, ಧನು ಪೂಜೆ, ಮಹಾಪೂಜೆ ಸೇವೆಗಳು, ಭಜನಾ ಸಂಕೀರ್ತನೆ ನಡೆಯಿತು. ಸೀಮೆಯ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಪ್ರತೀ ದಿನ ಬೆಳಗ್ಗಿನ ಫಲಾಹಾರದ ವ್ಯವಸ್ಥೆ ಇತ್ತು .ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ...
Loading posts...
All posts loaded
No more posts
