Ad Widget

ಗಾಯಕ ವಿಜಯಕುಮಾರ್ ಸುಳ್ಯ ನೇತೃತ್ವದಲ್ಲಿ ಜಾತ್ರೋತ್ಸವದಲ್ಲಿ ಮನರಂಜಿಸಿದ “ವಿಜಯ್ ಮ್ಯೂಸಿಕಲ್ ನೈಟ್ -2026”

ಸುಳ್ಯ ಜಾತ್ರಾ ಪ್ರಯುಕ್ತ ಜ.10 ರಂದು ಸುಳ್ಯದ ಖಾಸಗಿ ಬಸ್‌ ನಿಲ್ದಾಣದಲ್ಲಿ ನಡೆದ “ವಿಜಯ್ ಮ್ಯೂಸಿಕಲ್ ನೈಟ್-2026” ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿತು.ಕಾರ್ಯಕ್ರಮದ ಸಂಚಾಲಕರಾದ ರಾಷ್ಟ್ರಮಟ್ಟದ ಗಾನಗಂಧರ್ವ ಪ್ರಶಸ್ತಿ ಪುರಸ್ಕೃತರಾದ ವಿಜಯಕುಮಾ‌ರ್ ಸುಳ್ಯ ಇವರ ಸಾರಥ್ಯದಲ್ಲಿ ಮತ್ತು ವಿವಿಧ ಜಿಲ್ಲೆಯ ಪ್ರಖ್ಯಾತ ಗಾಯಕ, ಗಾಯಕಿಯರು ಹಾಡಿ ಮನ ರಂಜಿಸಿದರು. ವಿಶೇಷ ಆಕರ್ಷಣೆಯಾಗಿ ನೃತ್ಯ ವೈವಿಧ್ಯ ನಡೆಯಿತು. ನಿರೂಪಕ...

“ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಗ್ಲೋ ಫೆಸ್ಟ್” – ಕೊನೆಯ ಮೂರು ದಿನ ಮಾತ್ರ ಬಾಕಿ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಸಂಸ್ಥೆಯು ತನ್ನ ಪುತ್ತೂರು, ಮೂಡಬಿದಿರೆ, ಸುಳ್ಯ, ಹಾಸನ ಮತ್ತು ಕುಶಾಲನಗರದ ಶಾಖೆಗಳಲ್ಲಿ ವಜ್ರಭರಣಗಳ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ “ಗ್ಲೋ ಫೆಸ್ಟ್” ಅನ್ನು ಡಿ.15ರಂದು ಆಯೋಜಿಸಿದ್ದು, ಇನ್ನು ಕೇವಲ ಮೂರು ದಿನಗಳಲ್ಲಿ ಮುಕ್ತಾಯಗೊಳ್ಳುವ ಈ ಫೇಸ್ಟ್ ನಲ್ಲಿ ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಯೊಂದಿಗೆ ವಜ್ರಾಭರಣಗಳನ್ನು ಖರೀದಿಸುವ ಸುವರ್ಣ ಅವಕಾಶ...
Ad Widget

“ಯುವ ಸಮುದಾಯ ರಾಷ್ಟ್ರದ ಸಂಪತ್ತು” : ಲೋಕೇಶ್ ತಂಟೆಪ್ಪಾಡಿ ; ಬೆಳ್ಳಾರೆ ಜ್ಞಾನದೀಪದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

“ಬಲಿಷ್ಠ ರಾಷ್ಟ್ರ ನಿರ್ಮಾಣದ ಕನಸು ಕಂಡ ಕ್ರಾಂತಿಕಾರಿ ಸಂತ ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಚಿಂತನೆಗಳನ್ನು ಯುವ ಸಮುದಾಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಯುವಕರು ದುಶ್ಚಟಗಳಿಂದ ದೂರವಿದ್ದು ಇತರರಿಗೂ ಜಾಗೃತಿ ಮೂಡಿಸುವ ಕಾರ್ಯ ಮಾಡಿದಾಗ ಯಾವುದೇ ರೋಗದ ನಿಯಂತ್ರಣ ಸಾಧ್ಯ” ಎಂದು ಸುಳ್ಯ ಅರೋಗ್ಯ ಇಲಾಖೆಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ...

ಬೆಳ್ಳಾರೆ :ಯುವರಕ್ತ ನಿಧಿ ಬೆಳ್ಳಾರೆ ಉದ್ಘಾಟನೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ; “ಯುವ ಸಮುದಾಯ ರಕ್ತದಾನದಲ್ಲಿ ಪಾಲ್ಗೊಂಡಾಗ ಜಾಗೃತ ಸಮಾಜ ನಿರ್ಮಾಣ ಸಾಧ್ಯ” : ಭಾಸ್ಕರ್ ರಾವ್

ಯುವರಕ್ತ ನಿಧಿ ಬೆಳ್ಳಾರೆ ಇದರ ಉದ್ಘಾಟನಾ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರವು ಬೆಳ್ಳಾರೆ ಸಿ.ಎ ಬ್ಯಾಂಕ್ ಸಭಾಭವನದಲ್ಲಿ ಜ.11ರಂದು ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಐ.ಪಿ.ಎಸ್ ಅಧಿಕಾರಿ ಹಾಗೂ ರೆಡ್ ಕ್ರಾಸ್ ಸೊಸೈಟಿ ಕರ್ನಾಟಕ ಇದರ ಉಪಾಧ್ಯಕ್ಷರಾದ ಭಾಸ್ಕರ್ ರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು “ಇಂತಹ ಒಂದು ಗ್ರಾಮೀಣ ಭಾಗದಲ್ಲಿ ಮೊದಲ ಬಾರಿ ರಕ್ತ...

ಗೌರವ ಡಾಕ್ಟರೇಟ್ ಪುರಸ್ಕೃತ ಡಾ. ಟಿ.ಶ್ಯಾಮ್ ಭಟ್ ಅವರಿಗೆ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಸನ್ಮಾನ

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ವಿಶ್ರಾಂತ ಐ.ಎ.ಎಸ್ ಅಧಿಕಾರಿ ಡಾ. ಟಿ.ಶ್ಯಾಮ್ ಭಟ್ ಅವರಿಗೆ ಪ್ರತಿಷ್ಠಿತ ಮೈಸೂರು ವಿ.ವಿ ಗೌರವ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಿದ ಪ್ರಯುಕ್ತ ಅವರ ಸ್ವಗೃಹದಲ್ಲಿ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ದೇವಸ್ಥಾನದ ಮೊಕ್ತೇಸರರು ಹಾಗೂ ಸಮಿತಿಯ ಅಧ್ಯಕ್ಷರಾದ ಎಂ.ಬಿ ಸದಾಶಿವ ರವರು ಸನ್ಮಾನಿತರ...

ರಂಗಮನೆಯಲ್ಲಿ ನಲಿದಾಡಿದ ವಿಶೇಷ ಚೇತನ ಮಕ್ಕಳು

ಸುಳ್ಯ ಹಳೆಗೇಟಿನಲ್ಲಿರುವ  ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರಕ್ಕೆ ಸುಳ್ಯ ತಾಲೂಕಿನ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿಶೇಷ ಅಗತ್ಯವುಳ್ಳ ಸುಮಾರು 40 ಮಕ್ಕಳು ತಮ್ಮ ಹೆತ್ತವರೊಂದಿಗೆ ಭೇಟಿ ನೀಡಿದರು.    ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯು ಹಮ್ಮಿಕೊಂಡ ವಿಶೇಷ ಅಗತ್ಯವುಳ್ಳ ಮಕ್ಕಳ  ಕ್ಷೇತ್ರ ಭೇಟಿಯ ಅಂಗವಾಗಿ ರಂಗಮನೆಗೆ ಬಂದ ಮಕ್ಕಳು ಅಲ್ಲಿನ ಕಲಾತ್ಮಕ ಶಿಲ್ಪಗಳನ್ನು ಮುಗ್ಧರಾಗಿ ವೀಕ್ಷಿಸಿದರು. ಮನೆಯೊಳಗೆ...

ಸುಳ್ಯ : ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ

ಸುಳ್ಯದ ಸ್ವಾಮಿ ವಿವೇಕಾನಂದ ಪ್ರತಿಮೆ ನಿರ್ಮಾಣ ಸಮಿತಿ ಇದರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ವಿವೇಕಾನಂದ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಜ.12ರಂದು ನಡೆಯಿತು.ಸುಳ್ಯದ ಹಿರಿಯ ದಂತ ವೈದ್ಯರಾದ ಡಾ.ಎಂ.ವಿ.ಆಚಾರ್ ರವರು ವಿವೇಕಾನಂದರ ಪುತ್ಥಳಿಗೆ ಹಾರಾರ್ಪಣೆಗೈದರು. ಸುಳ್ಯ ಹಿಂದೂ ಸಂಗಮ ಆಯೋಜನಾ ಸಮಿತಿ ಅಧ್ಯಕ್ಷ ಎಂ.ಬಿ.ಸದಾಶಿವ, ಸುಳ್ಯ ಸೇವಾ ಭಾರತಿ ಹೆಲ್ಫ್ ಲೈನ್ ಅಧ್ಯಕ್ಷ ಡಾ.ಮನೋಜ್...

ಸುಳ್ಯ : ಪರ್ಸ್ ಕಳೆದುಹೋಗಿದೆ

ಸುಳ್ಯದ ರಥಬೀದಿಯಲ್ಲಿ ಹಣ ಹಾಗೂ ಅಮೂಲ್ಯ ದಾಖಲೆಗಳಿದ್ದ ಪರ್ಸ್ ಕಳೆದು ಹೋಗಿದೆ. ಸಿಕ್ಕಿದವರು ದಯವಿಟ್ಟು ಹಿಂತಿರುಗಿಸಬೇಕಾಗಿ ವಿನಂತಿ ಮೊ: 6363287252

ಕುಕ್ಕೆ ಸುಬ್ರಹ್ಮಣ್ಯ ಬೈಪಾಸ್ ರಸ್ತೆ ಬದಿಗಳಲ್ಲಿ ಕಸದ ರಾಶಿ ರಾಶಿ ; ಸ್ವಚ್ಛತಾ ಕಾರ್ಯ ಕೈಗೊಂಡ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್

ಸುಬ್ರಹ್ಮಣ್ಯ ಜನವರಿ 11 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ದೂರದ ರಾಜ್ಯಗಳಿಂದ ಹಾಗೂ ಊರುಗಳಿಂದ ಅತ್ಯಧಿಕ ಭಕ್ತರು ಬಂದು ದೇವರ ದರ್ಶನ, ಸೇವೆ ಸಲ್ಲಿಸಿ ಪ್ರಸಾದ ಸ್ವೀಕರಿಸಿ ಹೋಗುತ್ತಿದ್ದಾರೆ. ಆದರೆ ಅಷ್ಟೇ ಕಸದ ರಾಶಿ ರಾಶಿಗಳು ಸುಬ್ರಹ್ಮಣ್ಯ ಪಾರ್ಕಿಂಗ್...

2026-27ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಕ್ರೈಸ್ ವಸತಿ ಶಾಲೆಗಳ(ಮೊರಾರ್ಜಿ ದೇಸಾಯಿ ಹಾಗೂ ಇತರೆ ವಸತಿ ಶಾಲೆಗಳ) 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಅಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ(ಕ್ರೈಸ್) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ನೆಲ್ಲಿತೀರ್ಥ, ಗುರುಪುರ, ಮೂಲ್ಕಿ ತಾಲೂಕಿನ ಕಮ್ಮಾಜೆ, ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಮಚ್ಚಿನ, ಹೊಸಂಗಡಿ, ಬಂಟ್ವಾಳ ತಾಲೂಕಿನ ವಗ್ಗ, ಪುಂಜಾಲಕಟ್ಟೆ, ಪುತ್ತೂರು ತಾಲೂಕಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯ...
Loading posts...

All posts loaded

No more posts

error: Content is protected !!