ಬಿಳಿನೆಲೆಯಲ್ಲಿ ಗಿಡ ನೆಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ 3ನೇ ವರ್ಷದ ಸಂಭ್ರಮಾಚರಣೆ – “ಪಂಚ ಗ್ಯಾರಂಟಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯವಾಗಿದೆ” : ಸುಧೀರ್ ಕುಮಾರ್ ಶೆಟ್ಟಿ

ಬಿಳಿನೆಲೆ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂರು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡ ನೆಡುವ ಮೂಲಕ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ...

ಅಜ್ಜಾವರ : ಜಾತಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

ರಾಜ್ಯ ಸರಕಾರವು SIR ಪ್ರಕ್ರಿಯೆಯಲ್ಲಿ ರಾಜ್ಯದ ಅರ್ಹ ಮದಾರರು ಮತದಾರ ಪಟ್ಟಿಯಿಂದ ಹೊರಗೂಳಿಯದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಜಾತಿ ಪ್ರಮಾಣ ಪತ್ರದ ಮುದ್ರಿತ ಪ್ರತಿಯನ್ನು ಮನೆ ಮನೆಗೆ ತಲುಪಿಸುವ ಯೋಜನೆ ಕಾರ್ಯಗತ ಮಾಡಿದ್ದು, ಅಜ್ಜಾವರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ಜಾತಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ...
Ad Widget

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಅಧ್ಯಕ್ಷರಾದ ಅಲೋಕ್ ಕುಮಾರ್

ಸುಬ್ರಹ್ಮಣ್ಯ : ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಅಧ್ಯಕ್ಷರಾದ ಅಲೋಕ್ ಕುಮಾರ್ ಅವರು ಆ.06 ಗುರುವಾರದಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದ ಅವರು ನಂತರ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ತೆರಳಿ ಮಠಾಧೀಶರಾದ ಶ್ರೀ ಶ್ರೀ...

ಚೊಕ್ಕಾಡಿಯಲ್ಲಿ ಆ.09ರಂದು ಕೆಸರುಗದ್ದೆ ಕ್ರೀಡಾಕೂಟ

ಗರುಡ ಯುವಕ ಮಂಡಲ(ರಿ.) ಚೊಕ್ಕಾಡಿ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಜಂಟಿ ಆಶ್ರಯದಲ್ಲಿ, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯದ ಸಹಯೋಗದೊಂದಿಗೆ ಆಗಸ್ಟ್ 09ರಂದು ಚೆನ್ನಪರಿ-ಅಚ್ಚಿಪಳ್ಳ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ-2026 ನಡೆಯಲಿದೆ. ಬೆಳಿಗ್ಗೆ 8:00 ಗಂಟೆಯಿಂದ ವಿವಿಧ ಕ್ರೀಡಾಸ್ಪರ್ಧೆಗಳು ಆರಂಭಗೊಳ್ಳಲಿದ್ದು, ಪೂರ್ವಾಹ್ನ 9:30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದೆ. ಶ್ರೀ ಉಳ್ಳಾಕುಲು ಯಾನೆ ನಾಯರ್ ದೈವಸ್ಥಾನದ...

ಭಾರೀ ಮಳೆ ಹಿನ್ನಲೆ ನಾಳೆ(ಆ.08) ಪುತ್ತೂರು ಉಪವಿಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಾಧ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಪ್ರಕಾರವಾಗಿ ಪುತ್ತೂರು ತಾಲೂಕು, ಬೆಳ್ತಂಗಡಿ ತಾಲೂಕು, ಸುಳ್ಯ ತಾಲೂಕು, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ...

ಚೊಕ್ಕಾಡಿಯಲ್ಲಿ ಆ.9ರಂದು ಕೆಸರುಗದ್ದೆ ಕ್ರೀಡಾಕೂಟ

ಚೊಕ್ಕಾಡಿ, ಆ.7: ಗರುಡ ಯುವಕ ಮಂಡಲ (ರಿ.) ಚೊಕ್ಕಾಡಿ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಜಂಟಿ ಆಶ್ರಯದಲ್ಲಿ, ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯದ ಸಹಯೋಗದೊಂದಿಗೆ ಆಗಸ್ಟ್ 9ರಂದು ಚೆನ್ನಪರಿ–ಅಚ್ಚಿಪಳ್ಳ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ–2026 ನಡೆಯಲಿದೆ.ಬೆಳಿಗ್ಗೆ 8 ಗಂಟೆಯಿಂದ ವಿವಿಧ ಕ್ರೀಡಾಸ್ಪರ್ಧೆಗಳು ಆರಂಭಗೊಳ್ಳಲಿದ್ದು, ಪೂರ್ವಾಹ್ನ 9.30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದೆ. ಶ್ರೀ...

ಇಂದಿನ(ಆಗಸ್ಟ್ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಜಿಗಿತ – ಅಡಿಕೆ, ಕೊಬ್ಬರಿ, ಕಾಳುಮೆಣಸು ಸಂಪೂರ್ಣ ಸ್ಥಿರ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಆಗಸ್ಟ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಆ.9ರಂದು ಜೈ ತುಲುನಾಡ್ ಬೆಂಗಳೂರು ವತಿಯಿಂದ ತುಳುನಾಡ ಆಟಿ ಸಂಭ್ರಮ

ಬೆಂಗಳೂರು:2021 ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ "ವಿಶೇಷ ಸಂಘಟನಾ ಪುರಸ್ಕಾರ" ಪ್ರಶಸ್ತಿ ಪುರಸ್ಕೃತ ಜೈ ತುಲುನಾಡ್ ಬೆಂಗಳೂರು (ರಿ.) ವತಿಯಿಂದ ಆಗಸ್ಟ್ 9, 2026 (ಭಾನುವಾರ) ರಂದು ತುಳುನಾಡ ಆಟಿ ಸಂಭ್ರಮ ಬೆಂಗಳೂರಿನ ಬಿಳೇಕಹಳ್ಳಿಯ ವಿಜಯ ಬ್ಯಾಂಕ್ ಲೇಔಟ್‌ನ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7.15ಕ್ಕೆ ಅಯ್ಯಪ್ಪ...

ನಿಧನ : ಸೀಂಕು ಗೌರಿಹೊಳೆ ಬೆಳ್ಳಾರೆ

ಬೆಳ್ಳಾರೆ ಗ್ರಾಮದ ಗೌರಿಹೊಳೆ ಹತ್ತಿರದ ನಿವಾಸಿಯಾದ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ನೌಕರ ದಿ. ಮುದರ ಇವರ ಪತ್ನಿ ಸೀಂಕು ನಿಧನ ಹೊಂದಿದ್ದಾರೆ. ಅವರಿಗೆ 70 ವರುಷ ವಯಸ್ಸಾಗಿತ್ತು. ಇವರಿಗೆ 4 ಜನ ಮಕ್ಕಳಿದ್ದು ಎರಡು ಹೆಣ್ಣು, ಎರಡು ಗಂಡು ಮಕ್ಕಳು ಸೇರಿದಂತೆ ಸೊಸೆಯಂದಿರು,ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಗುತ್ತಿಗಾರು : ಕಂಪೌಂಡ್ ಕುಸಿತ

ಗುತ್ತಿಗಾರಿನ ಮುತ್ತಪ್ಪ ನಗರದಲ್ಲಿರುವ ನಿವೃತ್ತ ಯೋಧ ಮಹೇಶ್ ಕೊಪ್ಪತ್ತಡ್ಕ ಅವರ ಮನೆಯ ಹಿಂಬದಿಯ ಕಂಪೌಂಡ್ ಭಾರಿ ಮಳೆಯಿಂದ ಆ.07 ರಂದು ಕುಸಿದು ಬಿದ್ದಿದೆ.
Loading posts...

All posts loaded

No more posts

error: Content is protected !!