ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.29ರಂದು ಸೋಣ ಶನಿವಾರ ಆಚರಿಸಲಾಯಿತು. ಆ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಮತ್ತು ವ್ಯವಸ್ಥಾಪನಾ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವರಿಗೆ ಬೆಳ್ಳಿಯ ತ್ರಿನೇತ್ರ ಸಮರ್ಪಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.29 ಶನಿವಾರದಂದು ಶ್ರೀ ಹರಿಹರೇಶ್ವರ ದೇವರಿಗೆ ರಾಮಕೃಷ್ಣ ಕೂಜುಗೋಡು ಕಟ್ಟೆಮನೆ, ಪರಮೇಶ್ವರ ಕೂಜುಗೋಡು ಕಟ್ಟೆಮನೆ, ಭುವನೇಶ್ವರಿ ಕೂಜುಗೋಡು ಕಟ್ಟೆಮನೆ, ಪ್ರವೀಣ್ ಕೂಜುಗೋಡು ಕಟ್ಟೆಮನೆ, ರಾಧಾಕೃಷ್ಣ ಕೂಜುಗೋಡು ಕಟ್ಟೆಮನೆ, ಚಿನ್ನಮ್ಮ ಕೂಜುಗೋಡು ಕಟ್ಟೆಮನೆ, ಭರತ್ ಕೂಜುಗೋಡು ಕಟ್ಟೆಮನೆ, ಜಲಜಾಕ್ಷಿ, ನವೀನ್ ಕೂಜುಗೋಡು ಕಟ್ಟೆಮನೆ ಇವರು 107 ಗ್ರಾಂ ತೂಕದ...
Ad Widget

iRisePro – YASHHO ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸುಬ್ರಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಆರಂಭ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ, ಜಾಗತಿಕವಾಗಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅದರ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯವಾಗುವಂತೆ "ಸರ್ವಶಕ್ತ ವಿದ್ಯಾರ್ಥಿ- ಸರ್ವಶಕ್ತ ಭಾರತ" ಎಂಬ ಸಂದೇಶದೊಂದಿಗೆ ಕುಮಾರಸ್ವಾಮಿ ವಿದ್ಯಾಲಯ ಸುಬ್ರಮಣ್ಯ ಹಾಗೂ iRiseProನ ಜಂಟಿ ಸಹಭಾಗಿತ್ವದೊಂದಿಗೆ " YASHHO-ವಿದ್ಯಾರ್ಥಿಗಳ ಕೌಶಲ ವಿಕಸನ ಕಾರ್ಯಗಾರ"ವು ಆರಂಭಗೊಂಡಿದೆ. ಕುಮಾರಸ್ವಾಮಿ ವಿದ್ಯಾಸಂಸ್ಥೆಯು ಯಶಸ್ವಿ 30ನೇ...

ಕಸ್ತೂರಿರಂಗನ್ ವರದಿ 7ನೇ ಕರಡು ಅಧಿಸೂಚನೆಗೆ ಆಕ್ಷೇಪಣೆ : ವಿಶೇಷ ಗ್ರಾಮಸಭೆಗೆ ಆಗ್ರಹ – ನಾಲ್ಕೂರು ಗ್ರಾಮಸ್ಥರಿಂದ ಗುತ್ತಿಗಾರು ಗ್ರಾಮ ಪಂಚಾಯಿತಿಗೆ ಮನವಿ

ಕಸ್ತೂರಿರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟಗಳ 7ನೇ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವ ಹಿನ್ನೆಲೆಯಲ್ಲಿ ವಿಶೇಷ ಗ್ರಾಮಸಭೆ ಕರೆಯುವಂತೆ ಆ.27 ಗುರುವಾರದಂದು ನಾಲ್ಕೂರು ಗ್ರಾಮದ ನಾಗರಿಕರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮದ ನಾಗರಿಕರು ಒಗ್ಗೂಡಿ ಸಹಿ ಸಂಗ್ರಹಿಸಿ ಗ್ರಾಮ ಪಂಚಾಯಿತಿಗೆ ಮನವಿ ಪತ್ರವನ್ನು ಸಲ್ಲಿಸಿದ್ದು, ಕರಡು ಅಧಿಸೂಚನೆಯ ಕುರಿತು ಗ್ರಾಮಸ್ಥರ ಅಭಿಪ್ರಾಯ, ಸಲಹೆ ಹಾಗೂ...

ಇಂದಿನ(ಆಗಸ್ಟ್ 29) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಹೊಸ ಅಡಿಕೆ ದರದಲ್ಲಿ ಕೊಂಚ ಚೇತರಿಕೆ – ಅಡಿಕೆ ಉಪ ಉತ್ಪನ್ನಗಳಲ್ಲಿ ಇಳಿಕೆ ; ರಬ್ಬರ್, ಕಾಳುಮೆಣಸು ಹಾಗೂ ಕೊಬ್ಬರಿ ಧಾರಣೆ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 29 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಮಾವಿನಕಟ್ಟೆ : ಜಾತಿ ಧರ್ಮ ಮೀರಿ ಪ್ರೀತಿಗೆ ಪಾತ್ರವಾಗಿದ್ದ ಕಿಶನ್‌ ಗೆ ಅಂತಿಮ ವಿದಾಯ

ಗುಂಡ್ಯದಲ್ಲಿ ಕಾರು ಮತ್ತು ಲಾರಿ ಅಪಘಾತದಲ್ಲಿ ಮೃತಪಟ್ಟ ಮಾವಿನಕಟ್ಟೆ ದಿ. ನಾರಾಯಣ ಮತ್ತು ಸುಮಿತ್ರಾ ದಂಪತಿಯ ಪುತ್ರ ಕವನ(ಕಿಶನ್) ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆ.28ರಂದು ಮಾವಿನಕಟ್ಟೆಯಿಂದ ಎಲಿಮಲೆ ವರೆಗೆ ನಡೆಯಿತು.  ನಂತರ ಅವರ ಸ್ವಗೃಹದಲ್ಲಿ ಅಂತಿಮ ಸಂಸ್ಕಾರ ನಡೆಸಲಾಯಿತು. ಸಮಾಜಮುಖಿಯಾಗಿದ್ದ ಕಿಶನ್ ಜಾತಿ ಧರ್ಮ ಮೀರಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರ ಅಗಲಿಗೆ...

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

ಬೆಳ್ಳಾರೆ : ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ-2026 ಸೆ.13ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಗ್ಗೆ 10 ರಿಂದ 11.30ರವರೆಗೆ ಸ್ಪರ್ಧೆಯ ಅವಧಿ ನಿಗದಿಪಡಿಸಲಾಗಿದೆ. 1ರಿಂದ 2ನೇ ತರಗತಿ, 3 ರಿಂದ 4 ನೇ ತರಗತಿ, 5ರಿಂದ 7ನೇ ತರಗತಿ ಹಾಗೂ...

ಮಂಡೆಕೋಲು ಗ್ರಂಥಾಲಯದಲ್ಲಿ Magzter App ಕುರಿತು ಮಾಹಿತಿ ಕಾರ್ಯಾಗಾರ

ಮಂಡೆಕೋಲು : ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ Magzter App ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಗ್ರಂಥಾಲಯದಲ್ಲಿ ಲಭ್ಯವಿರುವ QR Code ಮೂಲಕ Magzter App ಅನ್ನು ಮೊಬೈಲ್‌ಗಳಲ್ಲಿ ಉಚಿತವಾಗಿ ಇನ್‌ಸ್ಟಾಲ್ ಮಾಡಿಕೊಂಡು, ಅದರಲ್ಲಿರುವ ವಿವಿಧ ಇ-ಮ್ಯಾಗಜಿನ್‌ಗಳು, ಪತ್ರಿಕೆಗಳು ಹಾಗೂ ಡಿಜಿಟಲ್ ಓದುವ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ...

ಸುಬ್ರಹ್ಮಣ್ಯಕ್ಕೆ 24/7 ತುರ್ತು ಚಿಕಿತ್ಸಾ ಘಟಕ ; ಸೆ.02ರಂದು ಸಹಿ ಅಭಿಯಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಘಟಕವನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಸೆ.02ರಂದು ಸಾರ್ವಜನಿಕ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. "ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರೂ ಆರೋಗ್ಯ ಸೇವೆಗಾಗಿ ಸುಬ್ರಹ್ಮಣ್ಯವನ್ನೇ ಅವಲಂಬಿಸಿದ್ದಾರೆ. ಆದರೆ ತುರ್ತು...

ದ್ವಾದಶ ರಾಶಿಗಳ ದಿನ ಭವಿಷ್ಯ – ದಿನಾಂಕ : 29-08-2026

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ : 29-08-2026ವಾರ : ಶನಿವಾರ 01)ಮೇಷ ರಾಶಿ : ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ಹೊಸ ವಸ್ತುಗಳನ್ನು ಖರೀದಿಸುತ್ತೀರಿ. ಹಳೆಯ ಸ್ನೇಹಿತರಿಂದ ಬಂದ ಮಾಹಿತಿ ಸಂತೋಷ ಉಂಟುಮಾಡುತ್ತದೆ. ಕೈಗೊಂಡ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ವೃತ್ತಿ ಮತ್ತು ವ್ಯಾಪಾರದಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ... ಗಮನಿಸಿ -...
Loading posts...

All posts loaded

No more posts

error: Content is protected !!