ಪಂಜಿಕಲ್ಲು-ಮೈತಡ್ಕ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ರೂ.10 ಕೋಟಿ ಅನುದಾನ ಮಂಜೂರು – ಸಚಿವ ಯು.ಟಿ. ಖಾದರ್ ಶಿಫಾರಸ್ಸಿನ ಮೇರೆಗೆ ಅನುದಾನ: ಕಾಂಗ್ರೆಸ್ ಮುಖಂಡ ಎಸ್. ಸಂಶುದ್ದೀನ್ ಮಾಹಿತಿ

ಮಂಡೆಕೋಲು ಗ್ರಾಮದ ಪಂಜಿಕಲ್ಲು–ಮೈತಡ್ಕ ಭಾಗದಲ್ಲಿ ಪಯಸ್ವಿನಿ ನದಿಗೆ ಬೃಹತ್ ಸೇತುವೆ ನಿರ್ಮಾಣಕ್ಕಾಗಿ ಕರ್ನಾಟಕ ಸರ್ಕಾರ 2026–27ನೇ ಸಾಲಿನ ಆಯವ್ಯಯದಲ್ಲಿ ರೂ.10 ಕೋಟಿ ಮಂಜೂರು ಮಾಡಿದೆ ಎಂದು ಸುಳ್ಯ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್ ತಿಳಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಜುಲೈ 2ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ...

ಸೇವೆಯೇ ಶ್ರೇಷ್ಠ ಧ್ಯೇಯ, ಸಮಾಜಸೇವೆಗೆ ರೋಟರಿ ಅತ್ಯುತ್ತಮ ವೇದಿಕೆ – ದತ್ತಾತ್ರೇಯ ರಾವ್

ಸುಳ್ಯ: ಸೇವೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ರೋಟರಿ ಸಂಸ್ಥೆ ಸದಾ ಬದ್ಧವಾಗಿದ್ದು, "ಸ್ವಯಂ ಸೇವೆಯೇ ಶ್ರೇಷ್ಠ ಸೇವೆ" ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ದತ್ತಾತ್ರೇಯ ರಾವ್ ಹೇಳಿದರು. ಅವರು ಜುಲೈ 1ರಂದು ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ನಡೆದ ರೋಟರಿ ಕ್ಲಬ್ ಸುಳ್ಯದ 2026–27ನೇ ಸಾಲಿನ ಪದಗ್ರಹಣ...
Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:02-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197 01,ಮೇಷರಾಶಿ* ,ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಪ್ರತಿಫಲ ದೊರೆಯುತ್ತದೆ. ಕುಟುಂಬ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಕೆಲಸದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗುತ್ತವೆ, ಗಮನಿಸಿ:- ಇಂದು ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಿರಿ, ಪರಿಹಾರ:-ಕಾಗೆಗಳಿಗೆ...

ಸುಳ್ಯ : ಪತ್ರಿಕಾ ದಿನಾಚರಣೆ ಹಿನ್ನಲೆ ಜು.04 ರಂದು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.07 ರಂದು ಪತ್ರಿಕಾ ದಿನಾಚರಣೆ ನಡೆಯಲಿದ್ದು, ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಜುಲೈ 04 ಎ.ಪಿ.ಎಂ.ಸಿ ಸಭಾಂಗಣದಲ್ಲಿ ನಡೆಯಲಿದೆ. ದಿ.ಅಬ್ದುಲ್ ಸತ್ತಾರ್ ಗೋರಡ್ಕ ಹಾಗೂ ದಿ.ಚೇತನ್ ರಾಮ್ ಸ್ಮರಣಾರ್ಥ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ “ಡಿಜಿಟಲ್‌ ಯುಗದಲ್ಲಿ ಪತ್ರಿಕೋದ್ಯಮದ ಪಾತ್ರ ಮತ್ತು...

ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ವತಿಯಿಂದ ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮ

ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಜು.01 ರಂದು ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ಮುಖ್ಯಸ್ಥರಾದ ಪ್ರದೀಪ್ ಕರಿಕೆ ನಡೆಸಿಕೊಟ್ಟರು. ತೆಂಗಿನ ಗೆರಟೆಯಲ್ಲಿ ವಿವಿಧ ಗೃಹ ಉಪಯೋಗಿ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿತೆ ಮೂಲಕ ತೊರಿಸಲಾಯಿತು. ಸ್ವದೇಶಿ ನಿರ್ಮಿತ ವಸ್ತುವಿನ ಬಳಕೆಯಿಂದ ಪರಿಸರ ಸಂರಕ್ಷಣೆಯ ಜೊತೆಗೆ ದೇಹದ ಆರೋಗ್ಯಕ್ಕೆ ಮತ್ತು...

ಬಿದ್ದು ಸಿಕ್ಕಿದ ಪರ್ಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ವಿನಾಯಕ ಎಲೆಕ್ಟ್ರಾನಿಕ್ಸ್ ಮಾಲಕ

ಸುಳ್ಯದ ಶ್ರೀರಾಂಪೇಟೆಯಲ್ಲಿ ಅಮೂಲ್ಯ ದಾಖಲೆ ಹಾಗೂ ಹಣವಿದ್ದ ಪರ್ಸ್ ಬಿದ್ದು ಹೋಗಿತ್ತು. ಅದು ಸುಳ್ಯದ ವಿನಾಯಕ ಎಲೆಕ್ಟ್ರಾನಿಕ್ಸ್ ನ ಮಾಲಕರಿಗೆ ಸಿಕ್ಕಿತ್ತು. ಅವರು ಅದರಲ್ಲಿ ನಂಬರ್ ಗೆ ಕರೆ ಮಾಡಿ ಪರ್ಸನ್ನು ಹಿಂತಿರುಗಿಸಿದ್ದಾರೆ.‌ ಪ್ರಾಮಾಣಿಕತೆ ಮೆರೆದ ಸುಧೀರ್ ನಾಯಕ್ ಮತ್ತು ಮನೆಯವರಿಗೆ ರಮ್ಯಶ್ರೀ ನಡುಮನೆ ಕೃತಜ್ಞತೆ ಸಲ್ಲಿಸಿದ್ದಾರೆ.

ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ.ಎನ್.ಜಿ

ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪೋಷಕರ ಸಭೆಯು ಜೂ.20ರಂದು ನಡೆದಿದ್ದು, ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿಯ ತೆರವಾದ ನಾಲ್ಕು ಸ್ಥಾನಗಳಿಗೆ ಸದಸ್ಯರ ಹಾಗೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ.ಎನ್.ಜಿ ಇವರು ಆಯ್ಕೆಯಾಗಿದ್ದಾರೆ. ಸುಳ್ಯದಲ್ಲಿ ವಕೀಲರಾಗಿರುವ ಇವರು ಈ ಹಿಂದೆ ಸತತ 09 ವರ್ಷಗಳ ಕಾಲ ಬಂಗ್ಲೆಗುಡ್ಡೆ ಸರಕಾರಿ...

ಹರಿಹರ ಪಳ್ಳತ್ತಡ್ಕ : ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ ತಾಲೂಕು ಬಿ.ಎಂ.ಎಸ್ ಸಂಯೋಜಿತ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜೂ.30ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ಮಧು ಗೋಳ್ಯಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಲೋಕೇಶ್.ಹೆಚ್,...

ರಾಷ್ಟ್ರೀಯ ವೈದ್ಯರ ದಿನಾಚರಣೆಯ ವಿಶೇಷ – “ಜೀವ ಉಳಿಸುವ ದೇವಮಾನವರು…” – ಬರಹ : ಉಲ್ಲಾಸ್ ಕಜ್ಜೋಡಿ

“ಶರೀರೇ ಜರ್ಝರೀಭೂತೇ ವ್ಯಾಧಿಗ್ರಸ್ಥೇ ಕಳೇಬರೇ ಔಷಧಂ ಜಾಹ್ನವೀತೋಯಂ ವೈದ್ಯೋ ನಾರಾಯಣೋ ಹರಿಃ” ಅಂದರೆ ದೇಹವು ಜರ್ಜರಿತವಾದಾಗ, ರೋಗಗಳಿಂದ ಆವೃತ್ತವಾದಾಗ ದೇಹಕ್ಕೆ ಗಂಗಾ ನದಿಯ ನೀರೇ ಔಷಧ ಹಾಗೂ ವೈದ್ಯರೇ ಸಾಕ್ಷಾತ್ ಹರಿ ಅಥವಾ ನಾರಾಯಣ ದೇವರು ಎಂಬಂತೆ ಸ್ವತಃ ಭಗವಂತ ಅಥವಾ ಆ ದೇವರು ಮಾಡುವಂತಹ ಜೀವ ಉಳಿಸುವ ಕಾಯಕವನ್ನು ದಿನದ 24 ಗಂಟೆಯೂ ಕೂಡ...

ಮಳೆಯ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ; ನಾಳೆ(ಜು.02) ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಮತ್ತು...
Loading posts...

All posts loaded

No more posts

error: Content is protected !!