- Wednesday
- April 29th, 2026
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದದಲ್ಲಿ ಡಿ.16ರಿಂದ ಆರಂಭಗೊಂಡ ಧನುಪೂಜೆಯು ಜ.14 ರಂದು ಸಂಪನ್ನಗೊಂಡಿತು.ಶ್ರೀ ದೇವರಿಗೆ ಪ್ರಾತಃಕಾಲ ರುದ್ರಾಭಿಷೇಕ, ಧನು ಪೂಜೆ, ಮಹಾಪೂಜೆ ಸೇವೆಗಳು, ಭಜನಾ ಸಂಕೀರ್ತನೆ ನಡೆಯಿತು. ಸೀಮೆಯ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಪ್ರತೀ ದಿನ ಬೆಳಗ್ಗಿನ ಫಲಾಹಾರದ ವ್ಯವಸ್ಥೆ ಇತ್ತು .ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ...
ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.3 ಮತ್ತು 4 ರಂದು ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಈ ನಿಮಿತ್ತ ಮಕರ ಸಂಕ್ರಮಣದ ದಿನವಾದ ಬುಧವಾರ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ ನೆರವೇರಿತು. ಆರಂಭದಲ್ಲಿ ದೈವಸ್ಥಾನದಲ್ಲಿ ತಂಬಿಲ ನಡೆಯಿತು. ನಂತರ ಪೂಜೆ ನೆರವೇರಿತು. ಬಳಿಕ ವಿವಿಧ ವೈದಿಕ ವಿದಿ ವಿಧಾನಗಳನ್ನು ನೆರವೇರಿಸಿ ಕೊಳ್ಳಿ...
ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸಂಸದ ಬ್ರಿಜೇಶ್ ಚೌಟರವರು ಪ್ರದೇಶ ಅಭಿವೃದ್ಧಿ ಅನುದಾನದ 5 ಲಕ್ಷ ರೂಪಾಯಿಯಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣಗೊಂಡ ರಸ್ತೆಯ ಉದ್ಘಾಟನೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ. ಚಂದ್ರಶೇಖರ್ ಕಿರಿಭಾಗ ಉದ್ಘಾಟಿಸಿದರು.ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ತೆಂಗಿನಕಾಯಿ ಒಡೆದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತಡ್ಕ ಗ್ರಾ.ಪಂ...
ದೇವಚಳ್ಳ ಗ್ರಾಮದ ಮಾವಿನಕಟ್ಟೆ-ಕಂದ್ರಪ್ಪಾಡಿ ರಸ್ತೆಯು ಪ್ರಗತಿಪಥ ಯೋಜನೆ(ಎ.ಡಿ.ಬಿ)ಯಲ್ಲಿ ಆಯ್ಕೆಯಾಗಿದ್ದು, ಮಾವಿನಕಟ್ಟೆಯಿಂದ ದೇವದವರೆಗೆ 2.8 ಕೀ.ಮಿ ರಸ್ತೆ ಅಭಿವೃದ್ಧಿಗೊಳ್ಳಲಿದ್ದು, ಆ ನಿಟ್ಟಿನಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಇವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಪಿ.ಎಂ.ಜಿ.ಎಸ್.ವೈ ಯೋಜನಾ ಉಪ ವಿಭಾಗ ಪುತ್ತೂರು ಇದರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚೇತನ್ ಕುಮಾರ್, ಕೌಶಿಕ್ ಕನ್ಸಲ್ಟೆಂಟ್...
ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರು ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಜ.14ರಂದು ಬೆಳಿಗ್ಗೆ ವರದಿಯಾಗಿದೆ.ವೀರಾಜಪೇಟೆಯಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಒಮಿನಿ ಕಾರು ದೇವರಕೊಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಗು ಸೇರಿ ನಾಲ್ಕು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ...
ಗುತ್ತಿಗಾರು ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆಗೆ ಪಿ.ಎಂ.ಶ್ರೀ ಅನುದಾನದಿಂದ 17 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಶಾಲಾ ಕೊಠಡಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಹಾಗೂ ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಶೌಚಾಲಯ ಮತ್ತು ನೂತನ ಬೊರ್ ವೇಲ್ ಅನ್ನು ಉದ್ಘಾಟಿಸಿದರು. ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ವೆಂಕಟ್...
ಕೊಯನಾಡು ಸಮೀಪ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಕೂಟಿ ಢಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಇದೀಗ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಂಕರ್ ನ ಹಿಂಭಾಗಕ್ಕೆ ಕೊಯನಾಡು ದೇವಸ್ಥಾನದ ಸಮೀಪ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರನ್ನು ಆಂಬುಲೆನ್ಸ್ ಮೂಲಕ ಸುಳ್ಯ ಕೆವಿಜಿ ಆಸ್ಪತ್ರೆಗೆ ತಂದು ದಾಖಲಿಸಲಾಯಿತಾದರೂ ಸ್ಕೂಟಿ ಸವಾರ ಕೊಯನಾಡು...
ಹಲವು ದಿನಗಳಿಂದ ಮೋಡ ಕವಿದ ವಾತಾರಣವಿದ್ದು ಸುಳ್ಯ ತಾಲೂಕಿನ ವಿವಿಧೆಡೆ ಇಂದು ಮಳೆ ಸುರಿದಿದೆ. ಸುಳ್ಯ ಗುತ್ತಿಗಾರು ಸಂಪಾಜೆ, ಜಾಲ್ಸೂರು ಸೇರಿದಂತೆ ವಿವಿಧೆಡೆ ಬಾರಿ ಮಳೆಯಾಗಿದೆ. ಸುಳ್ಯ ಜಾತ್ರೆಯ ಸಂತೆ ವ್ಯಾಪಾರಸ್ಶರು ಮಳೆಯಿಂದ ತೊಂದರೆಗೆ ಸಿಲುಕಿದರು. ಅಕಾಲಿಕ ಮಳೆ ಸಂಕಷ್ಟದಲ್ಲಿರುವ ಕೃಷಿಕರಿಗೆ ಮತ್ತೆ ಬರೆ ಎಳೆದಂತಾಗಿದೆ. ವಿದ್ಯುತ್ ಕಡಿತಗೊಂಡಿದ್ದು ಸುಳ್ಯದಲ್ಲಿ ಕತ್ತಲೆ ಆವರಿಸಿದೆ.
ಗ್ರಾಮ ಪಂಚಾಯತ್ ಅರಂತೋಡು ಘನ ತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕಾಗಿ ಅನ್ವಾರುಲ್ ಹುದಾ ಯಂಗ್ ಮ್ಯಾನ್ಸ್ ಎಸ್ಸೋಸಿಯೇಷನ್ ವತಿಯಿಂದ ರೂಪಾಯಿ 5,000 ಚೆಕ್ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಮಾಜಿ ಉಪಾಧ್ಯಕ್ಷರಾದ ಹರಿಣಿ ದೇವರಾಜೆ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ, ಅನ್ವರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಷನ್...
ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಇಂದು(ಜ.13) ಧನು ಪೂಜೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯರವರು ಆಗಮಿಸಿ ಧನು ಪೂಜೆಯ ವಿಶೇಷ ಪ್ರಸಾದವನ್ನು ಸ್ವೀಕರಿಸಿದರು.ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ,...
Loading posts...
All posts loaded
No more posts
