- Thursday
- September 10th, 2026
ಜೂ.11 ರಂದು ನಿಧನರಾದ ಹರಿಹರ ಪಳ್ಳತ್ತಡ್ಕ ಗ್ರಾಮದ ಕಜ್ಜೋಡಿ ನಿವಾಸಿ ನಿವೃತ್ತ ಮುಖ್ಯೋಪಾಧ್ಯಾಯರಾದ ದಿ| ಶ್ರೀಧರ್ ಭಾಗವತ್ ರವರಿಗೆ ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ, ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಹಾಗೂ ಊರ ಅಭಿಮಾನಿಗಳಿಂದ “ಸಾರ್ವಜನಿಕ ಶ್ರದ್ಧಾಂಜಲಿ ಸಭೆ”ಯು ಜೂ.28ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಿತು.ಸುಳ್ಯ ತಾಲೂಕು ಪಿಂಚಣಿದಾರರ...
ದಿನಾಂಕ : 29 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ಸುಬ್ರಹ್ಮಣ್ಯ ಜೂನ್ 28 : ಅಂತರಾಷ್ಟ್ರೀಯ ರೋಟರಿ ಜಿಲ್ಲೆ 31/81ರ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದ್ದು, ಸುಬ್ರಹ್ಮಣ್ಯ ರೋಟರಿ ಕ್ಲಬ್ ವಿವಿಧ ವಿಭಾಗಗಳಲ್ಲಿ ಸಲ್ಲಿಸಿದ ಸೇವೆಗಳಿಗಾಗಿ ಪ್ಲಾಟಿನಮ್ ಅವಾರ್ಡ್ ಗಳಿಸಿಕೊಂಡಿದೆ. ರೋಟರಿ ಜಿಲ್ಲೆಯ ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಕಂದಾಯ ಜಿಲ್ಲೆಗಳನ್ನೊಳಗೊಂಡ ಕ್ಲಬ್ ಸರ್ವಿಸ್ ವಿಭಾಗದಲ್ಲಿ ಕಾರ್ಗಿಲ್ ಯೋಧರನ್ನು...
ಸುಬ್ರಹ್ಮಣ್ಯ, ಜೂನ್ 28 : ಶ್ರೀ ಸುಬ್ರಹ್ಮಣ್ಯೇಶ್ವರ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ಶನಿವಾರ(ಜೂನ್ 27) ಕಾಲೇಜಿನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಂದಾ ಹರೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಚ್ಚ ನ್ಯಾಯಾಲಯದ ಹಿರಿಯ ವಕೀಲರು ಹಾಗೂ ಸಂಸ್ಥೆಯ ಹಿರಿಯ...
ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಡಾ. ಸೆಲ್ವ ರತ್ನಂ ರವರು ಸುಳ್ಯದ ಖ್ಯಾತ ನ್ಯಾಯವಾದಿ ಹಾಗೂ ತಾಲೂಕು ವಕೀಲರ ಸಂಘದ ಕಾರ್ಯದರ್ಶಿಗಳಾದ ಜಗದೀಶ್.ಡಿ.ಪಿ ಅವರಿಗೆ ತಾವು ಬರೆದ “ರತ್ನನ ಸಾರಸ್ವತ ಲೋಕ” ಪುಸ್ತಕವನ್ನು ಬೆಂಗಳೂರಿನ ಅಮ್ಮಾಪುರ ರೆಸಿಡೆನ್ಸಿಯಲ್ಲಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಡಾ. ಸೆಲ್ವ ರತ್ನಂ ರವರ ಪತ್ನಿ ಉಷಾ, ಪುತ್ರ ಜಿತಿನ್ ಬಾಲಾಜಿ, ಮಂಗಳೂರಿನ...
ದಿನಾಂಕ : 29-06-2026ವಾರ : ಸೋಮವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 95919691971) ಮೇಷರಾಶಿ : ಇಂದು ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೆಲವು ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ... ಗಮನಿಸಿ : ಇಂದು ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ... ಪರಿಹಾರ :...
ಸುಳ್ಯ: ನಗರದ ಬಸ್ ನಿಲ್ದಾಣದಲ್ಲಿ ವೆಂಕಮ್ಮ ಬೆಳ್ಳಿಪ್ಪಾಡಿ (ಅಮ್ಮಾಜಿಮೂಲೆ) ಅವರ ಚಿನ್ನದ ಉಂಗುರ ಕಳೆದುಹೋಗಿದೆ. ಉಂಗುರ ಯಾರಿಗಾದರೂ ದೊರೆತಲ್ಲಿ ದಯವಿಟ್ಟು 8296267387 ಸಂಖ್ಯೆಯನ್ನು ಸಂಪರ್ಕಿಸಿ ಹಿಂತಿರುಗಿಸುವಂತೆ ಕೋರಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಪುತ್ತೂರು ಇಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯನ್ನು ಪುತ್ತೂರು ಉಪವಿಭಾಗ ಡಿ.ವೈ.ಎಸ್.ಪಿ. ಪ್ರಮೋದ್ ಕುಮಾರ್ ಬಿ. ಯವರು ಉದ್ಘಾಟಿಸಿದರು.ಕರಾವಳಿ ಭಾಗದಲ್ಲಿ ಸರಕಾರಿ ಹುದ್ದೆಗಳಿಗೆ ಪ್ರಯತ್ನಪಡುವವರ ಸಂಖ್ಯೆ ಕಮ್ಮಿ ಇದ್ದು, ವಿದ್ಯಾಮಾತಾ ಅಕಾಡೆಮಿ ಇಂತಹ ಸಂದರ್ಭದಲ್ಲಿ ಜಾಗೃತಿಯನ್ನು ಮೂಡಿಸಿಕೊಂಡು ತರಬೇತಿ ನೀಡುವುದರ ಮೂಲಕ ಸರಕಾರಿ...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 8ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದಂತಹ ಕಾವೇರಮ್ಮನವರ 87ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕವಾಗಿ ನಡೆಯುವ ರಾಜ್ಯಮಟ್ಟದ ಅರೆಭಾಷೆ ಕವನ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಒಂದು ಸ್ವ-ರಚಿತ ಅರೆಭಾಷೆ ಕವಿತೆಯನ್ನು ಜುಲೈ 14 ತಾರೀಖಿನ ಒಳಗಾಗಿ ಕಳುಹಿಸಿಕೊಡಬೇಕು ಎಂದು...
ಸುಬ್ರಹ್ಮಣ್ಯ ಜೂನ್ 28 : ಭಾನುವಾರ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇವುಗಳ ಆಶ್ರಯದಲ್ಲಿ ಕುಕ್ಕೆ ಶ್ರೀ ದೇವಳದ ಮುಂಭಾಗದಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶ್ರೀ ದೇವಳದ ಗೋಪುರ ಸಮೀಪ ವ್ಯವಸ್ಥಾಪನಾ ಸಮಿತಿ ಸದಸ್ಯ...
Loading posts...
All posts loaded
No more posts
