ಬಿಜೆಪಿ ಜಿಲ್ಲಾ ಕಾನೂನು ಪ್ರಕೋಷ್ಠದ ಸದಸ್ಯರಾಗಿ ಸಂದೀಪ್ ವಳಲಂಬೆ ಹಾಗೂ ಸುಳ್ಯ ಮಂಡಲದ ಕಾನೂನು ಪ್ರಕೋಷ್ಠದ ಸದಸ್ಯರಾಗಿ ಸಂದೀಪ್ ಮದುವೆಗದ್ದೆ ಆಯ್ಕೆ

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾನೂನು ಪ್ರಕೋಷ್ಠದ ಸದಸ್ಯರಾಗಿ ಸಂದೀಪ್ ವಳಲಂಬೆ ಆಯ್ಕೆಯಾಗಿದ್ದಾರೆ. ಹಾಗೂ ಸುಳ್ಯ ಮಂಡಲದ ಕಾನೂನು ಪ್ರಕೋಷ್ಠದ ಸಹಸಂಚಾಲಕರಾಗಿ ಸಂದೀಪ್ ಮದುವೆಗದ್ದೆ ಆಯ್ಕೆಯಾಗಿದ್ದಾರೆ. ಜೂ.26 ರಂದು ಭಾರತೀಯ ಜನತಾ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.‌

ಬೆಳ್ಳಾರೆ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ನೆನಪಿನ ಸ್ನೇಹ ಪಥ ಸ್ಮರಣ ಸಂಚಿಕೆ ಬಿಡುಗಡೆ

“ಮಹಿಳೆ ಬಹುಮುಖ ಪ್ರತಿಭೆಯ ಪ್ರತೀಕವಾಗಿದ್ದು, ಆಕೆಯಲ್ಲಿರುವ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರಕೃತಿ ಮತ್ತು ಪುರುಷನನ್ನು ಸಮಾನತೆಯ ದೃಷ್ಟಿಯಿಂದ ಒಪ್ಪಿಕೊಳ್ಳಬೇಕು” ಎಂದು ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಗಂಗಾಧರ ಬೆಳ್ಳಾರೆ ಹೇಳಿದರು. ಅವರು ಬೆಳ್ಳಾರೆಯ ಸ್ನೇಹಶ್ರೀ ಮಹಿಳಾ ಮಂಡಲದ ದಶ ಸಂಭ್ರಮದ ಸವಿನೆನಪಿಗೆ ಹೊರತರಲಾದ ಸ್ನೇಹ ಪಥ ಸ್ಮರಣ ಸಂಚಿಕೆಯನ್ನು...
Ad Widget

ಕಲ್ಮಡ್ಕ: ಹಳೆ ಮನೆಗೆ ಬೆಂಕಿ | ಆಗ್ನಿ ಶಾಮಕ ದಳದಿಂದ ಕಾರ್ಯಾಚರಣೆ

ಕಲ್ಮಡ್ಕ ಗ್ರಾಮದ ನಡ್ಕ ಎಂಬಲ್ಲಿ ಮಮತಾ ಎಂಬುವರ ಹಳೆಯ ಮನೆಗೆ ಜೂ. 27ರಂದು ಬೆಳಿಗ್ಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಬೆಳಿಗ್ಗೆ 6 ಗಂಟೆ ಸಮಯದಲ್ಲಿ ಬೆಂಕಿ ತಗುಲಿದ್ದು, ಅನಾಹುತ ಸ್ಥಳಕ್ಕೆ ತೆರಳಿದ್ದ ಸುಳ್ಯ ಅಗ್ನಿಶಾಮಕ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಹಾಗೂ ಸ್ಥಳೀಯರ ಸಹಕಾರದಿಂದ ಮನೆಯಲ್ಲಿದ್ದ ಅಡಿಕೆ, ರಬ್ಬರ್, ಮತ್ತು ತೆಂಗಿನಕಾಯಿಯನ್ನು ಮನೆಯಿಂದ ಹೊರಗಡೆ...

ಗಾಂಧಿನಗರದಲ್ಲಿ ಸಮಸ್ತ ಸ್ಥಾಪನಾ ದಿನಾಚರಣೆ

ಸಮಸ್ತ ಶತಮಾನೋತ್ಸವದ ಅಂಗವಾಗಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್.ವೈ.ಎಸ್, ಎಸ್.ಎಸ್.ಎಫ್ ಗಾಂಧಿನಗರ ಯೂನಿಟ್ ವತಿಯಿಂದ ಜೂನ್ 26ರಂದು ಗಾಂಧಿನಗರದಲ್ಲಿ ಸಮಸ್ತ ಸ್ಥಾಪನಾ ದಿನ ಆಚರಿಸಲಾಯಿತು. ಸಯ್ಯಿದ್ ತ್ವಾಹಿರ್ ಸಅದಿ ತಂಙಳ್ ದುಆ ನೆರವೇರಿಸಿದರು. ಕೆ.ಎಂ.ಜೆ ಯುನಿಟ್ ಅಧ್ಯಕ್ಷರಾದ ಅಬೂಬಕ್ಕರ್ ಕೆ.ಎ. ಅಧ್ಯಕ್ಷತೆ‌ ವಹಿಸಿದರು. ಸುಳ್ಯ ತಾಲೂಕು ಸುನ್ನಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸಖಾಫಿ...

ಸುಳ್ಯ : ಎನ್.ಎಂ.ಪಿ.ಯು.ಸಿಯಲ್ಲಿ ನಶಾ ಮುಕ್ತ ಭಾರತ ಅಭಿಯಾನ ; ಪ್ರತಿಜ್ಞಾ ವಿಧಿ ಸ್ವೀಕಾರ

ಸುಳ್ಯ, ಜೂ.26 : ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಸುಳ್ಯದ ಎನ್.ಎಂ.ಪಿ.ಯು.ಸಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಚಾರ್ಯ ಸಾವಿತ್ರಿ.ಕೆ.ವಿ, ಕ್ಷೇಮಾಧಿಕಾರಿ ರೇಷ್ಮಾ.ಎಂ.ಎಂ, ಉಪನ್ಯಾಸಕ ಹಾಗೂ ಬೋಧಕೇತರ ವೃಂದದ ಸದಸ್ಯರು ಮತ್ತು ವಿದ್ಯಾರ್ಥಿಗಳು ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗುವ ಪ್ರತಿಜ್ಞೆ ಸ್ವೀಕರಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ.ಪಿ.ಬಿ ಅವರು ಪ್ರತಿಜ್ಞಾ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 27-06-2026ವಾರ : ಶನಿವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷರಾಶಿ : ಹೊರ ತಿಂಡಿಗಳನ್ನು ತಿನ್ನುವಾಗ ಮತ್ತು ಕುಡಿಯುವಾಗ ಎಚ್ಚರದಿಂದಿರಿ. ಅಸಡ್ಡೆ ನಿಮಗೆ ಅನಾರೋಗ್ಯ ತರಬಹುದು. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆಯಿಂದ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ನಿಮ್ಮ ಸ್ನೇಹಿತರಿಂದ ಅನುಕೂಲವಾಗುವುದು... ಗಮನಿಸಿ : ಇಂದು ನಿಮ್ಮ ಹಿರಿಯ ಅಧಿಕಾರಿಗಳ ಸಲಹೆ...

ಹರಿಹರ ಪಳ್ಳತ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಹರಿಹರ ಪಳ್ಳತ್ತಡ್ಕ, ಐನೆಕಿದು, ಬಾಳುಗೋಡು ಹಾಗೂ ಕೊತ್ನಡ್ಕ ಪ್ರಗತಿಬಂಧು-ಸ್ವಸಹಾಯ ಸಂಘಗಳ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.26 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...

ಸುಳ್ಯ ಎನ್.ಎಂ ಪಿ.ಯು.ಸಿ.ಯಲ್ಲಿ ಟ್ಯಾಲೆಂಟ್ಸ್ ಡೇ ಆಚರಣೆ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ಪ್ರಾಚಾರ್ಯರಾದ ಮಿಥಾಲಿ.ಪಿ ರೈ ಅವರು ಮಾರ್ಗದರ್ಶನ ನೀಡಿದ್ದರು.  ವಿದ್ಯಾರ್ಥಿಗಳು ಹಾಡು, ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು. ಉಪನ್ಯಾಸಕ ವಿನಯ್ ನಿಡ್ಯಮಲೆ, ವಿದ್ಯಾರ್ಥಿ ಮಹಮ್ಮದ್ ಆಶಿಕ್ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು.  ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡಿಂಪಲ್...

ಇಂದಿನ(ಜೂನ್ 26) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಭಾರಿ ಜಿಗಿತ..!! ; ಗ್ರೇಡ್ ರಬ್ಬರ್ ಬೆಲೆಯಲ್ಲಿ ಮತ್ತೆ ಕುಸಿತ..! ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 26 ಜೂನ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಉಸ್ತುವಾರಿ ಸಚಿವರಾಗಿ ಡಾ. ಯು.ಟಿ. ಖಾದರ್ ನೇಮಕ – ಕರಾವಳಿ ನಾಲ್ಕು ಜಿಲ್ಲೆಗಳ ಜವಾಬ್ದಾರಿ

ರಾಜ್ಯ ಸರ್ಕಾರವು ಸಚಿವರ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಮರುಹಂಚಿಕೆ ಮಾಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡಲಾಗಿದೆ.ಡಾ. ಯು.ಟಿ. ಖಾದರ್ ಅವರು ಕರ್ನಾಟಕ ರಾಜಕೀಯದಲ್ಲಿ ಅನುಭವಿ ಹಾಗೂ ಜನಪ್ರಿಯ ನಾಯಕರಾಗಿದ್ದು, ಹಲವು ಮಹತ್ವದ...
Loading posts...

All posts loaded

No more posts

error: Content is protected !!