- Thursday
- September 10th, 2026
ಬೆಳ್ಳಾರೆ, ಜೂ. 23: ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ-2026ರ ಅಂಗವಾಗಿ ಜೂ. 24ರಂದು ಬೆಳ್ಳಾರೆಯಲ್ಲಿ ಬೃಹತ್ ಜಾಥಾ ಹಾಗೂ ಬೀದಿ ನಾಟಕ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ ಬೆಳ್ಳಾರೆ ವೆಂಕಟರಮಣ ದೇವಸ್ಥಾನದ ಬಳಿಯಿಂದ ಮಾಸ್ತಿಕಟ್ಟೆಯವರೆಗೆ ಜಾಥಾ...
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ, ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯಡಿ ಬೆಳೆಸಾಲ ಪಡೆದಿರುವ ಹಾಗೂ ಬೆಳೆಸಾಲ...
ಭಾರತೀಯ ಜನತಾ ಪಕ್ಷದ ಸುಳ್ಯ ಮಂಡಲದ ವತಿಯಿಂದ ರಾಷ್ಟ್ರದ ಏಕತೆ, ಅಖಂಡತೆ ಮತ್ತು ಸ್ವಾಭಿಮಾನದ ಸಂಕೇತರಾದ ಜನಸಂಘದ ಸ್ಥಾಪಕ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವನ್ನು ಇಂದು (ಜೂ.23) ಆಚರಿಸಲಾಯಿತು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ದೇಶಸೇವೆ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ,ಮಹಿಳಾ ಸಬಲೀಕರಣ ಘಟಕ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಅರಿವು ಕಾರ್ಯಕ್ರಮವನ್ನು ಜೂ. 19 ರಂದು ಬೆಳ್ಳಾರೆ...
ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆಯನ್ನು ಜೂ. 23 ರಂದು ಬೆಳ್ಳಾರೆ ಠಾಣಾಧಿಕಾರಿ ಹೀರಯ್ಯ ಎಚ್.ಡಿ. ಯವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಗಾಂಜಾ ಮತ್ತು ಅಫೀಮು, ಮೊಬೈಲ್ ಬಳಕೆ, ಸೈಬರ್ ಕ್ರೈಂ, ಅಪ್ರಾಪ್ತರ ವಾಹನ ಚಲಾವಣೆ ಮುಂತಾದ ಕುರಿತಾಗಿ ಕಾನೂನು ಮಾಹಿತಿಗಳನ್ನು ವಿವರವಾಗಿ ನೀಡಿದರು. ಹಾಗೆಯೇ ಸುತ್ತಮುತ್ತಲೂ ನಡೆಯುತ್ತಿರುವ ಮಾದಕ ವಸ್ತುಗಳ ಚಟುವಟಿಕೆಗಳ ಕುರಿತು...
ದಿನಾಂಕ : 23 ಜೂನ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 23) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...
ದೇವಚಳ್ಳ ಗ್ರಾಮದ ಧರ್ಮಪಾಲ ಕರಂಗಲ್ಲು ರವರು ಜೂ.23ರಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 72 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಚಂದ್ರಾವತಿ, ಪುತ್ರ ಕಿಶೋರ್, ಪುತ್ರಿಯರಾದ ಭಾರತಿ, ರೇಖಾ ಹಾಗೂ ಸಹೋದರರಾದ ಪುರುಷೋತ್ತಮ ಕರಂಗಲ್ಲು, ಮೋಹನ ಕರಂಗಲ್ಲು, ಸಹೋದರಿಯರಾದ ಕುಸುಮಾವತಿ ಅತ್ಯಾಡಿ, ಬಾಲಕಿ ಕಜ್ಜೋಡಿ, ಚಂದ್ರಪ್ರಭಾ ಮೋಂಟಡ್ಕ, ಗೀತಾ ಚೆಮ್ನೂರು ಮತ್ತು ಸೊಸೆ, ಅಳಿಯಂದಿರು,...
ಗುತ್ತಿಗಾರಿನ ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಂಸ್ಥೆಯ ಬೆಳ್ಳಿ ಹಬ್ಬದ ಅಂಗವಾಗಿ ಲೋಗೋ ಅನಾವರಣ ಮಾಡುವುದರ ಮೂಲಕ ಈ ಶೈಕ್ಷಣಿಕ ವರ್ಷದಲ್ಲಿ ನಡೆಯಲಿರುವ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆಯನ್ನು ಜೂನ್ 20ರಂದು ಸಂಭ್ರಮ ಮತ್ತು ಶಿಸ್ತಿನೊಂದಿಗೆ ಉದ್ಘಾಟಿಸಲಾಯಿತು. ಕಾರ್ಯಕ್ರಮವು ಸಂಸ್ಥೆಯ ಸಾಧನೆಗಳನ್ನು ಸ್ಮರಿಸುವ ವಿಶೇಷ ಕ್ಷಣವಾಗಿ ರೂಪುಗೊಂಡಿತು. ಕಾರ್ಯಕ್ರಮದ ಆರಂಭದಲ್ಲಿ ಗುತ್ತಿಗಾರಿನ ಸಿ.ಎಂ.ಸಿ...
ಸುಳ್ಯ, ಜೂನ್ 21 : ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷದ 18ನೇ ಸಂಸ್ಥಾಪನಾ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಮಿರಾಝ್ ಸುಳ್ಯ ಅವರು ವಹಿಸಿದ್ದರು. ಅವರು ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಧ್ವಜಾರೋಹಣಗೈದು...
ಕ.ರಾ.ಅ.ಪ.ವಿ.ಗು.ಸಂಘ(ರಿ.) ಬೆಂಗಳೂರು.ದ.ಕ ಜಿಲ್ಲಾ ಸಮಿತಿ, ದ.ಕ.ಜಿಲ್ಲಾ ಸಮಿತಿ-ಉಪಸಮಿತಿ ಸುಳ್ಯ ಇದರ ನೇತೃತ್ವದಲ್ಲಿ ವಿದ್ಯುತ್ ಗುತ್ತಿಗೆದಾರರ ಉಳಿವಿಗಾಗಿ ಹೋರಾಟ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಬ್ರಹತ್ ಪ್ರತಿಭಟನೆ ಜೂ.22ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ನಡೆಯಿತು. ಈ ಪ್ರತಿಭಟನೆಯಲ್ಲಿ ಸುಳ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಪೈಕ, ಉಪಾಧ್ಯಕ್ಷರಾದ ದಾಮೋದರ ಮಂಚಿ, ಕಾರ್ಯದರ್ಶಿ ಹರೀಶ್ಚಂದ್ರ ಕೇಪಳಕಜೆ, ಖಜಾಂಜಿ ಮಧುಕಿರಣ್,...
Loading posts...
All posts loaded
No more posts
