- Wednesday
- April 29th, 2026
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಗ್ರಾಮೀಣ ಪ್ರದೇಶವಾಗಿದ್ದು ಜಿಲ್ಲಾ ಕೇಂದ್ರದಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿದೆ. ಕೊಡಗು ಜಿಲ್ಲೆ ಮತ್ತು ಕೇರಳ ರಾಜ್ಯದ ಗಡಿ ಪ್ರದೇಶವಾಗಿದ್ದು, ಕ್ರೀಡಾಕೂಟಗಳು ಆಗಾಗ ನಡೆಯುತ್ತಿರುತ್ತದೆ. ತಾಲೂಕು ಮಟ್ಟದ, ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ನಡೆಯುವ ಸಂದರ್ಭದಲ್ಲಿ ತಾಲೂಕಿಗೆ ಹೈ-ಜಂಪ್ ಬೆಡ್ ಇಲ್ಲದೆ ಲಭ್ಯತೆಗೆ ಅನುಗುಣವಾಗಿ ಪುತ್ತೂರು ಅಥವಾ ಮಂಗಳೂರಿನಿಂದ ತರಬೇಕಾಗಿದೆ....
ಬೆಳ್ಳಾರೆ ನಗರದ ಕೊಳಂಬಳ ದೇವಿನಗರದ ಶ್ರೀ ರಕ್ತೇಶ್ವರಿ ದೇವಿ ಮತ್ತು ಪರಿವಾರ ದೈವಗಳಾದ ವರ್ಣಾರ ಪಂಜುರ್ಲಿ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ದೇರೇಬೈಲು ತಂತ್ರಿ ಶ್ರೀ ಪತಂಜಲಿ ಶಾಸ್ತ್ರಿ ಮುಕ್ಕೂರು ಇವರ ನೇತೃತ್ವದಲ್ಲಿ ಜ.6 ಮತ್ತು 7 ರಂದು ರಾತ್ರಿ 8:00 ರಿಂದ ನಡೆಯಲಿದೆ.ಜ.6ರಂದು ಪ್ರಾತ:ಕಾಲ ಗಂಟೆ 8:00ಕ್ಕೆ ಸ್ವಸ್ತಿ ಪುಣ್ಯಾಹ,...
110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಡಿ.30 ರಂದು ಬೆಳಿಗ್ಗೆ 10:00 ರಿಂದ ಸಂಜೆ ಗಂಟೆ 4:00 ರ ತನಕ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಮಾಡಾವು 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ 33/11ಕೆವಿ ಸವಣೂರು, ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರಕ್ಕೆ ಸರಬರಾಜು ಕಡಿತವಾಗಲಿದ್ದು, ಇಲ್ಲಿಂದ ಹೊರಡುವ ಎಲ್ಲಾ 11 ಕೆವಿ...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಗುರುಪುರ ಜಂಕ್ಷನ್ ನಿಂದ ದೇವ ಶಾಲೆಯವರೆಗಿನ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಗೆಳೆಯರ...
ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಡಿ.29 ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರೀಯ ಸದಸ್ಯರಾದ ಕೆ.ಆರ್.ಶೀನಪ್ಪ ಗುತ್ತಿಗಾರು ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 50,000/-(ರೂಪಾಯಿ ಐವತ್ತು ಸಾವಿರ) ಚೆಕ್ ಅನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಎ.ವಿ ತೀರ್ಥರಾಮರವರು ಡಿ.29ರಂದು ಕೆ.ಆರ್...
ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ದೇವ ಗುರುಪುರ ಬಸ್ಸು ನಿಲ್ದಾಣದ ಅಂಗಡಿಗೆ ಸ್ವಚ್ಛತಾ ಪಲಕ ಅಳವಡಿಕೆ ಹಾಗೂ ಕಸದ ಬುಟ್ಟಿ ವಿತರಣೆ ಮಾಡಲಾಯಿತು . ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ,ಗೌರವಾ ಧ್ಯಕ್ಷ ಯೋಗೀಶ್ ದೇವ, ಗ್ರಾಮ ಪಂಚಾಯತ್ ನ...
“ಲಯನ್ಸ್ ಕ್ಲಬ್ ಎಂದಾಗ ಇದು ಪಟ್ಟಣಕ್ಕೆ ಅಷ್ಟೇ ಸೀಮಿತ ಎಂದು ಭಾವಿಸುವ ಕಾಲವೊಂದಿತ್ತು ಅದನ್ನು ಗ್ರಾಮೀಣ ಮಟ್ಟದಲ್ಲಿ ಸ್ಥಾಪಿಸಿದ ಕಾವು ಹೇಮನಾಥ ಶೆಟ್ಟಿ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಇದೊಂದು ಸೇವಾ ಸಂಸ್ಥೆ ಅಷ್ಟೇ ಆಗಿ ಅಲ್ಲದೆ ಆಗಿದ್ದು ಎಲ್ಲರೂ ತಮ್ಮ ತಮ್ಮ ಸ್ವಾರ್ಥಗಳನ್ನು ತ್ಯಾಗ ಮಾಡಿದಾಗಲೇ ಇದಕ್ಕೊಂದು ಅರ್ಥ ಸಿಗುತ್ತದೆ” ಎಂದು ಸನ್ಮಾನವನ್ನು ಸ್ವೀಕರಿಸಿದ ಕುಮಾರ್...
ಕಡಬ, ಡಿ.28 : “ಶ್ರವಣ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ಕಾಲಕಾಲಕ್ಕೆ ಕಿವಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಶಿಬಿರವನ್ನು ಆಯೋಜಿಸಿದ ಕಡಬದ ಪತ್ರಕರ್ತರ ಸಂಘ ಮತ್ತು ಟೀಮ್ ಈಶ್ವರ ಮಲ್ಪೆ ಅವರ ಕಾರ್ಯ ಶ್ಲಾಘನೀಯ” ಎಂದು ಕಡಬದ ಹಿರಿಯ ವೈದ್ಯರಾದ ಡಾ| ಸಿ.ಕೆ. ಶಾಸ್ತ್ರಿಯವರು ಕರೆ ನೀಡಿದರು.ಅವರು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್...
ನಾಳೆ(ಡಿ.30) ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಲಿರುವ ಸುಳ್ಯ ತಾಲೂಕು ಮಟ್ಟದ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಭಾಗವಹಿಸುವ ಸುಳ್ಯ ತಾಲೂಕಿನ ಕನ್ನಡ ಭಾಷಾ ಶಿಕ್ಷಕರು ಹಾಗೂ ಇತರೆ ಆಸಕ್ತ ಶಿಕ್ಷಕರಿಗೆ ಅನ್ಯ ಕಾರ್ಯ ನಿಮಿತ್ತ(ಒ.ಒ.ಡಿ) ಸೌಲಭ್ಯ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಅನುಮತಿ ದೊರೆತಿದ್ದು, ಹಾಜರಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ...
ರಾಷ್ಟೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಇವರ ಆದೇಶದ ಮೇರೆಗೆ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಇಬ್ಬರು ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಇಂದು ನಡೆಯಿತು. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆಯವರ ನೇತೃತ್ವದಲ್ಲಿ, ಕಾಂಗ್ರೆಸ್ ಪಕ್ಷದ...
Loading posts...
All posts loaded
No more posts
