ನಿಧನ : ಅಜಪಿಲ ಇಬ್ರಾಹಿಂ(ಮೋನುಚ್ಚ)

ಕಳಂಜ ಗ್ರಾಮದ ಅಯ್ಯನಕಟ್ಟೆ ನಿವಾಸಿ ಇಬ್ರಾಹಿಂ ಅಜಪಿಲ(86) ಎಂಬುವವರುಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂನ್ 04 ರಂದು ನಿಧನರಾದರು. ಅವರು ಪುತ್ರರಾದ ಮುಹಮ್ಮದ್, ಅಬ್ದುಲ್ ಖಾದರ್, ಅಬೂಬಖರ್ ಸೆಲೆಖ್ಟ್ ಹಾಗೂ ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

ಉರುಂಡೆ ನಾರಾಯಣ ಗೌಡ ನಿಧನ

ಉಬರಡ್ಕ ಮಿತ್ತೂರು ಗ್ರಾಮದ ಉರುಂಡೆ ನಾರಾಯಣ ಗೌಡರು ಮೇ 30 ರಂದು ಅಲ್ಪಕಾಲ ಅಸೌಖ್ಯ ದಿಂದ ಸ್ವಗೃಹದಲ್ಲಿ ನಿಧನರಾದರು.ಅವರಿಗೆ 80 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಸೀತಮ್ಮ, ಪುತ್ರ ವಸಂತ, ಪುತ್ರಿಯರಾದ ದಮಯಂತಿ ಮತ್ತು ಗಿರಿಜಾ, ಸೊಸೆ ನಳಿನಿ ಹಾಗೂ ಮೊಮ್ಮಮ್ಮಕ್ಕಳನ್ನು ಅಗಲಿದ್ದಾರೆ..
Ad Widget

ನಿಧನ : ಪ್ರಸಾದ್ ಕಳಿಗೆ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದದಲ್ಲಿ ವಾಸವಾಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ನಿವೃತ್ತ ಚೀಫ್ ಮ್ಯಾನೇಜರ್ ಪ್ರಸಾದ್ ಕಳಿಗೆ(69) ಗುರುವಾರ ನಿಧನರಾದರು. ಅವರು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರು ಸಹೋದರ, ಸಹೋದರಿ, ಬಂಧು-ಮಿತ್ರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ನಿಧನ : ಚಂದ್ರಾವತಿ ಅಂಬೆಕಲ್ಲು

ದೇವಚಳ್ಳ ಗ್ರಾಮದ ಅಂಬೆಕಲ್ಲು ದಿ.ರಾಮಣ್ಣ ಗೌಡರ ಪತ್ನಿ ಚಂದ್ರಾವತಿ ಅಂಬೆಕಲ್ಲು ಇವರು ವಯೋಸಹಜ ಅನಾರೋಗ್ಯದಿಂದ ಮೇ.27 ರಂದು ನಿಧನರಾದರು. ಮೃತರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ಜಯರಾಮ್ ಅಂಬೆಕಲ್ಲು, ಮನಮೋಹನ್ ಅಂಬೆಕಲ್ಲು, ಕಲಾವತಿ ಮಂಡೆಕೋಲು ಹಾಗೂ ಮೊಮ್ಮಕ್ಕಳು, ಮರಿಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ನಿಧನ : ಸುಂದರ ಗೌಡ ಹಳೆಮನೆ

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಹಳೆಮನೆ ಸುಂದರ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ಮೇ.20ರಂದು ಬೆಳಿಗ್ಗೆ ನಿಧನರಾದರು. ಮೃತರಿಗೆ 61 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶೀಲಾವತಿ, ಪುತ್ರಿಯರಾದ ಜಯಶ್ರೀ, ಜಶ್ಮಿತಾ, ಪುತ್ರ ಹಿತೇಶ್ ಹಾಗೂ ಸಹೋದರರಾದ ಕುಂಞಣ್ಣ ಗೌಡ, ಗಂಗಾಧರ ಗೌಡ, ಸಹೋದರಿ ಜಯಂತಿ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಮತ್ತು ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ನಿಧನ : ಹೊನ್ನಮ್ಮ ನಡುತೋಟ ಕುಲ್ಕುಂದ

ಸುಬ್ರಹ್ಮಣ್ಯ ಮೇ 09 : ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆಯಲ್ಲಿ ವಾಸವಿರುವ ದಿ. ವೀರಪ್ಪಗೌಡ ನಡುತೋಟ ಅವರ ಪತ್ನಿ ಹೊನ್ನಮ್ಮ(73) ಇಂದು ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅವರು ಪುತ್ರ ವಿಜಯ್, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪಿ.ಬಿ ದಿವಾಕರ ರೈಯವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ನಿಧನ

ಹಿರಿಯ ಜಿಲ್ಲಾ ಸಹಕಾರಿ ಧುರೀಣ ಸುಳ್ಯದ ಪಿ.ಬಿ ದಿವಾಕರ ರೈ ಅವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ರವರು ಅಲ್ಪಕಾಲದ ಅಸೌಖ್ಯದಿಂದ ಏ.05 ರಂದು ಸಂಜೆ ನಿಧನರಾದರು. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ಸಮಯಗಳಿಂದ ಅಸೌಖ್ಯದಿಂದದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಕಾರಣದಿಂದ ದಿವಾಕರ ರೈ ಅವರು...

ನಿಧನ : ಪೆರುವಾಜೆಗುತ್ತು ಅಮರನಾಥ ಶೆಟ್ಟಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕ್ಷೇತ್ರೇಶರಾಗಿದ್ದ ಪೆರುವಾಜೆ ಗ್ರಾಮದ ಪೆರುವಾಜೆಗುತ್ತು ಅಮರನಾಥ ಶೆಟ್ಟಿಯವರು ಮೇ 01ರಂದು ಮುಂಜಾನೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಪುಷ್ಪಾವತಿ ಪಾಲ್ತಾಡು, ಪುತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಾಲ್ತಾಡು ನಿರಂಜನ ಶೆಟ್ಟಿ, ಪುತ್ರಿ ಶ್ರೀಮತಿ ನಿವೇದಿತಾ ಶೆಟ್ಟಿ, ಅಳಿಯ,...

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ನಿಧನ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಮಾಧವ ಅವರು ಇಂದು(ಏ.29) ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಮೃತಪಟಿರುವುದಾಗಿ ತಿಳಿದು ಬಂದಿದ್ದು, ಮೃತರು ಕಾಣಿಯೂರಿನವರಾಗಿದ್ದು, ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.

ಅಕ್ಕಮ್ಮ ಹಳೆಮನೆ ನಿಧನ

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಹಳೆಮನೆ ಅಕ್ಕಮ್ಮ ಅವರು ಅಲ್ಪ ಕಾಲದ ಅಸೌಖ್ಯದಿಂದ ಏ.24ರಂದು ಬೆಳ್ಳಿಗೆ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೃತರ ಪುತ್ರರಾದ ಕುಞಣ್ಣ ಗೌಡ, ಸುಂದರ, ಗಂಗಾಧರ ಹಾಗೂ ಪುತ್ರಿ ಪುತ್ರಿಯರಾದ ಸುಶೀಲ, ಯಶೋಧ, ನಾಗವೇಣಿ, ಜಯಂತಿ ಹಾಗೂ ಸೊಸೆಯಂದಿರು ಹಾಗೂ ಅಳಿಯಂದಿರು ಹಾಗೂ ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!