Ad Widget

ದೈವ ನರ್ತಕ ಕುಸುಮಾಧರ ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ ದಿ.ಬಟ್ಯ ಅಜಲ ರ ಪುತ್ರ ಕುಸುಮಾಧರ ಅಡ್ಡನಪಾರೆ ಅಲ್ಪಕಾಲದ ಅಸೌಖ್ಯದಿಂದ ಅ.2 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜ್ವರ, ವಾಂತಿ ಭೇದಿ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಮತ್ತೆ ಉಲ್ಬಣಿಸಿ ಮಂಗಳೂರಿನ ಖಾಸಗಿ ಆಸತ್ರೆಯಲ್ಲಿ ಚಿಕಿತ್ಸೆ ಪಡೆದರೂ ಫಲಕಾರಿಯಾಗಲಿಲ್ಲವೆಂದು ತಿಳಿದುಬಂದಿದೆ. ಅವರಿಗೆ 32 ವರ್ಷ ವಯಸ್ಸಾಗಿತ್ತು....

ಪಿ ಡಬ್ಲ್ಯೂ ಡಿ ಗುತ್ತಿಗೆದಾರ ಶಬ್ಬೀರ್ ಬಾಳಿಲರವರ ತಾಯಿ ಬೆಹರುನ್ನಿಸಾ ನಿಧನ

ಬಾಳಿಲ ಪಾಜಪಳ್ಳ ದಿ. ಸೈಯದ್ ಹುಸೈನ್ ರವರ ಪತ್ನಿ ಬೆಹರುನ್ನೀಸಾ ಸೆ.29 ರಂದು ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Ad Widget

ಗುರುಪ್ರಕಾಶ್ ಕೇಬಲ್ ನೆಟ್ವರ್ಕ್ ಮಾಲಕ ಗುರುದತ್ ನಾಯಕ್ ನಿಧನ

ಸುಳ್ಯದ ಗುರು ಪ್ರಕಾಶ್ ಕೇಬಲ್ ನೆಟ್ ವರ್ಕ್ ಮಾಲಕ, ಹಿರಿಯ ಉದ್ಯಮಿ ಹಾಗೂ ಕ್ರೀಡಾ ಪ್ರೋತ್ಸಾಹಕ ಗುರುದತ್ ನಾಯಕ್ ರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ಸುಮಾರು 54 ವರ್ಷ ವಯಸ್ಸಾಗಿತ್ತು.ಕಿಡ್ನಿ ಸಮಸ್ಯೆಯಿಂದ ಕೆಲ ಸಮಯದಿಂದ ಬಳಲುತ್ತಿದ್ದ ಅವರಿಗೆ ಡಯಾಲಿಸಿಸ್ ಆರಂಭಿಸಲಾಗಿತ್ತು. ವಾರದ ಹಿಂದೆ ಅಸೌಖ್ಯ ಉಲ್ಬಣಗೊಂಡಿತ್ತು. ಅವರ ಅಂತ್ಯ ಸಂಸ್ಕಾರ...

ಮಾಣಿಮರ್ಧು ಜನಾರ್ದನ ನಾಯ್ಕ ನಿಧನ

ಆಲೆಟ್ಟಿ ಗ್ರಾಮದ ಮಾಣಿಮರ್ಧು ಜನಾರ್ದನ ನಾಯ್ಕ ಎಂಬವರು ಅಗಸ್ಟ್ 31 ನಿಧನರಾದರು. ಅನಾರೋಗ್ಯಕ್ಕೊಳಗಾದ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ನೀಡುತ್ತಿದ್ದಾಗ ಹೃದಯಘಾತದಿಂದ ನಿಧನರಾದರೆಂದು ತಿಳಿದುಬಂದಿದೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳಾದ ಶ್ರೀದೇವಿ, ಸುನಿತ, ದಮಯಂತಿ,ದೇವಿಪ್ರಸಾದ ಮತ್ತು ಸಹೊದರ ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ದೇವಚಳ್ಳ ಗ್ರಾ.ಪಂ. ಮಾಜಿ ಸದಸ್ಯ ಪುಷ್ಪಾಕರ ಮಾವಿನಕಟ್ಟೆ ವಿಧಿವಶ

ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಸ್ನೇಹಜೀವಿ ಪುಷ್ಪಾಕರ ಮಾವಿನಕಟ್ಟೆ ಅಲ್ಪ ಕಾಲದ ಅಸೌಖ್ಯದಿಂದ ಇಂದು(ಆ.26) ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ಮೃತರು ತಂದೆ,ತಾಯಿ, ಪತ್ನಿ, ಪುತ್ರಿ, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಅಟೋ ಚಾಲಕರಾಗಿ ಜನರೊಂದಿಗೆ ಸ್ನೇಹಜೀವಿಯಾಗಿದ್ದ ಇವರು ತಾ.ಪಂ.ಸದಸ್ಯೆ ಯಶೋಧ ಬಾಳೆಗುಡ್ಡೆ ಯವರ ಸಹೋದರ.

ಕೊಲ್ಲಮೊಗ್ರದ ಯುವಕ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಕೆವಿಜಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೊಲ್ಲಮೊಗ್ರದ ಸತ್ತಾರ್ (35) ಎಂಬ ಯುವಕ ಮಾನಸಿಕ ಅಸ್ವಸ್ಥರಾಗಿ ಚಿಕಿತ್ಸೆ ಎರಡು ದಿನಗಳ ಹಿಂದೆ ಸುಳ್ಯ ಕೆವಿಜಿ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಇಂದು ಸಂಜೆ ವೇಳೆಗೆ ಅವರು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದರೆಂದು ತಿಳಿದು ಬಂದಿದೆ. ಅವರನ್ನು ಜೊತೆಗಿದ್ದ ವ್ಯಕ್ತಿ...

ಅಮರಮುಡ್ನೂರು ಗ್ರಾ.ಪಂ. ಮಾಜಿ ಸದಸ್ಯ ಶಿವರಾಮ ಗೌಡ ಕಾಸಿನಗೋಡ್ಲು ನಿಧನ

ಅಮರಮುಡ್ನೂರು ಗ್ರಾಮದ ದೊಡ್ಡತೋಟ ನಿವಾಸಿ, ಅಮರಮುಡ್ನೂರು ಗ್ರಾ.ಪಂ. ಮಾಜಿ ಸದಸ್ಯ ಶಿವರಾಮ ಗೌಡ ಕಾಸಿನಗೋಡ್ಲು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 6೦ ವರ್ಷ ವಯಸ್ಸಾಗಿತ್ತು. 2000-05 ನೇ ಅವಧಿಯಲ್ಲಿ ಅಮರಮುಡ್ನೂರು ಗ್ರಾ.ಪಂ. ಸದಸ್ಯರಾಗಿದ್ದರು. ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಕ್ರಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಮಾಜಿ ಗ್ರಾ.ಪಂ. ಸದಸ್ಯೆ ಶಾಲಿನಿ, ಪುತ್ರ ಶರತ್,...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ದೇಶದ 13 ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ಇಂದು ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಕೋವಿಡ್ 19 ಭಾದಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದರು.ಅವರಿಗೆ 76 ವರ್ಷ ವಯಸ್ಸಾಗಿತ್ತು. 1935 ಡಿಸೆಂಬರ್ 11 ರಂದು ಪಶ್ಚಿಮ ಬಂಗಾಳದ ಬೀರ್ ಬೂಂ ನಲ್ಲಿ ಜನಿಸಿದ್ದರು. ಇವರ ತಂದೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬಾಂಗ್ಲಾ ಕಾಂಗ್ರೆಸ್ ನಿಂದ ರಾಜಕೀಯಕ್ಕೆ ಬಂದ ಇವರು...

ಲಕ್ಷ್ಮಣ ಆಚಾರ್ಯ ಅಡ್ಡನಪಾರೆ ನಿಧನ

ಗುತ್ತಿಗಾರು ಗ್ರಾಮದ ಅಡ್ಡನಪಾರೆ ಲಕ್ಷ್ಮಣ ಆಚಾರ್ಯ ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಆ. 5 ರಂದು ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶೋಭಾವತಿ, ಪುತ್ರರಾದ ಮಾಜಿ ಗ್ರಾ.ಪಂ.ಸದಸ್ಯರುಗಳಾದ ಗಂಗಾಧರ, ಭವಾನಿಶಂಕರ, ಪುತ್ರಿ ಚಂದ್ರಕಲಾ ಅಳಿಯ,ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಪದ್ಮಯ್ಯ ಗೌಡ ಕಮಿಲ ನಿಧನ

ಗುತ್ತಿಗಾರು ಗ್ರಾಮದ ಕಮಿಲ ಆಜಡ್ಕ ದಿ. ಶೇಷಪ್ಪ ಗೌಡರ ಪುತ್ರ ಪದ್ಮಯ್ಯ ಗೌಡ ಆ.7 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಪದ್ಮಾವತಿ,ಮೂವರು ಪುತ್ರಿಯರು, ಅಳಿಯಂದಿರು, ಹಾಗೂ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!