ಕಲ್ಲಪಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಜಗದೀಶ್ ಪಿ.ಬಿ ನಿಧನ

ಕಲ್ಲಪಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಜಗದೀಶ್ ಪಿ.ಬಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಮೃತರು ತಾಯಿ,ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಎಲ್ಲರೊಂದಿಗೆ ಆತ್ಮೀಯರಾಗಿದ್ದ ಇವರು ನಾಟಿ ವೈದ್ಯರಾಗಿಯೂ...

ಬಾಲಕಿ ಮೋಟ್ನೂರು ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ಮೋಟ್ನೂರು ದಿ. ವೀರಪ್ಪ ಗೌಡರ ಧರ್ಮಪತ್ನಿ ಬಾಲಕಿ ಮೋಟ್ನೂರು ಜ.2 ರಂದು ನಿಧನರಾದರು. ಮೃತರು ಪುತ್ರಿಯರಾದ ಮೀನಾಕ್ಷಿ ಕಡ್ಲಾರು, ಜಯ, ಇಂದಿರಾ , ರೇವತಿ, ಪುತ್ರ ಶಿವಪ್ರಸಾದ್, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Ad Widget

ಅರಂತೋಡು : ಈಶ್ವರಿ ಕೇನಾಜೆ ನಿಧನ

ಆರಂತೋಡು ಗ್ರಾಮದ ಕೋಡಂಕೇರಿ ಲಿಂಗಪ್ಪ ಗೌಡ ಕೇನಾಜೆ ಯವರ ಧರ್ಮಪತ್ನಿ ಶ್ರೀಮತಿ ಈಶ್ವರಿ (57)ಯವರು ಇಂದು ನಿಧನರಾದರು. ಮೃತರು ಪತಿ, ಮಕ್ಕಳಾದ ಪವನ್ ಕೋಡಂಕೇರಿ, ಕಿಶೋರ್ ಕೋಡಂಕೇರಿ ಹಾಗೂ ಮಗಳು ವಿಜಯಲಕ್ಷ್ಮಿ ಯವರನ್ನು ಅಗಲಿದ್ದಾರೆ.

ಕಮಲ ಕೆದಿಲ ನಿಧನ

ಐನೆಕಿದು ಗ್ರಾಮದ ಕೆದಿಲ ದಿ.ತಮ್ಮಯ್ಯ ಗೌಡರ ಧರ್ಮಪತ್ನಿ ಶ್ರೀಮತಿ ಕಮಲರವರು ಡಿ.1ರಂದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ನವೀನ್ ಕೆದಿಲ, ಶಶಿಧರ ಕೆದಿಲ,ಪುತ್ರಿಯರಾದ ಹರಿಣಿ, ಪ್ರೇಮಾ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು,ಕುಟುಂಬಸ್ಥರು ಹಾಗೂ ಅಪಾರ ಬಂಧುಗಳನ್ನು ಆಗಲಿದ್ದಾರೆ.

ಕೊಡಿಯಾಲ: ಅಂಗಾರ ಕಲ್ಲಗದ್ದೆ ನಿಧನ

ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿ ಅಂಗಾರ ರವರು ಅಸೌಖ್ಯದಿಂದ ಅ.15ರಂದು ನಿಧನರಾದರು. ಅವರಿಗೆ ಸುಮಾರು 45 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಯಮುನಾ, ಮಗಳು ದೀಪಿಕಾ ಮತ್ತು ಮಗ ಶ್ರೇಯಸ್ಸ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಕಳಂಜ: ಸುನಂದಾ ಪಟ್ಟೆ ನಿಧನ

ಕಳಂಜ ಗ್ರಾಮದ ಪಟ್ಟೆ ಶಿವಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಸುನಂದಾ ಪಟ್ಟೆಯವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತಿ ಶಿವಪ್ಪ ಪೂಜಾರಿ, ಪುತ್ರರಾದ ಭಾಸ್ಕರ, ಸದಾನಂದ, ಪ್ರಶಾಂತ್ ಹಾಗೂ ಪುತ್ರಿಯರಾದ ಅರುಣಾ ಪೈಚಾರು, ಉಮಾವತಿ ಮಾಡಾವು ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ದೇವಚಳ್ಳ ಗ್ರಾ.ಪಂ. ಮಾಜಿ ಸದಸ್ಯ ಮೋಹನ ಗೌಡ ಮುಂಡೋಡಿ ನಿಧನ

ದೇವಚಳ್ಳ ಗ್ರಾಮದ ಮುಂಡೋಡಿ ನಿವಾಸಿ,‌ ಗ್ರಾ.ಪಂ ಮಾಜಿ ಸದಸ್ಯರಾದ ಮೋಹನ ಗೌಡ‌ ಮುಂಡೋಡಿಯವರು ಅಲ್ಪಕಾಲದ ಅಸೌಖ್ಯದಿಂದ ಮೇ 23 ರಂದು ನಿಧನರಾದರು. ಇವರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಐವರ್ನಾಡು: ಉದಯಕುಮಾರ್ ಹಸಿರುತೋಟ ನಿಧನ

ಐವರ್ನಾಡು ಗ್ರಾಮದ ದಿ.ಕೃಷ್ಣ ಅಂಗಿತ್ತಾಯ ಅವರ ಪುತ್ರ ಉದಯಕುಮಾರ ಭಟ್ ಹಸಿರುತೋಟ (51 ವ) ರವರು ಎ.22ರಂದು ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ತಾಯಿ ಶ್ರೀಮತಿ ಶಾರದಾ, ಪತ್ನಿ ಶ್ರೀಮತಿ ಅಮೃತಲತಾ ಹಾಗೂ ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ‌ ಟಿ.ಜಿ ಮುಡೂರು ವಿಧಿವಶ

ಹಿರಿಯ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟಿ.ಜಿ ಮುಡೂರು(95) ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾಡಿನ ಅಗ್ರಮಾನ್ಯ ಸಾಹಿತಿಯಾಗಿದ್ದ ಮುಡೂರುರವರು ತಮ್ಮ ಇಳಿವಯಸ್ಸಿನಲ್ಲೂ ಅತ್ಯಂತ ಲವಲವಿಕೆಯಿಂದ ಇದ್ದರು. ಅಧ್ಯಾಪಕರಾಗಿ, ಸಾಹಿತಿಯಾಗಿ, ಸಂಘಟಕರಾಗಿ ಗುರುತಿಸಿಕೊಂಡಿದ್ದ ಮುಡೂರುರವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅರೆಭಾಷೆ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. ಕಾಡಮಲ್ಲಿಗೆ, ಹೊಸತು ಕಟ್ಟು, ಅಬ್ಬಿಯ ಮಡಿಲು ಸೇರಿದಂತೆ...

ಮಣಿಮಜಲು ಜೈನ ಮನೆತನದ ಪಿ.ಗುಲಾಬಿಯಮ್ಮ ನಿಧನ

ಕಳಂಜ ಗ್ರಾಮದ ಮಣಿಮಜಲು ಜೈನ ಮನೆತನದ, ಪ್ರಸ್ತುತಮೂಡುಬಿದಿರೆಯಲ್ಲಿ ನೆಲೆಸಿದ್ದಪಿ ಗುಲಾಬಿಯಮ್ಮ ಜ.02ರಂದು ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಮೂಡುಬಿದಿರೆಯ ಜೈನ ಪೇಟೆ ಬಕ್ಕಾರು ಮನೆ ನಿವಾಸಿ ದಿ. ಎಂ ಮಿತ್ರ ಸೇನ ಶೆಟ್ಟಿ ಅವರ ಧರ್ಮಪತ್ನಿಯಾಗಿರುವ ಪಿ ಗುಲಾಬಿ ಅಮ್ಮನವರು ಓರ್ವ ಪುತ್ರ ,ಮೂವರು ಪುತ್ರಿಯರನ್ನು ಅಗಲಿದ್ದಾರೆ. ಧಾರ್ಮಿಕವಾಗಿ ಸಕ್ರಿಯರಾಗಿದ್ದ ಅವರು ಸಮ್ಮೇದ...
Loading posts...

All posts loaded

No more posts

error: Content is protected !!