ಯೋಗೀಶ್ ಕುಮಾರ್ ಚೂಂತಾರು ನಿಧನ

ಅಮರಪಡ್ನೂರು ಗ್ರಾಮದ ದಿ.ಸತೀಶ್ ನಾಯ್ಕ ರವರ ಪುತ್ರ ಚೂಂತಾರು ಯೋಗೀಶ್ ಕುಮಾರ್ ಹೃದಯಾಘಾತದಿಂದ ಡಿ.31ರ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 22 ವರ್ಷ ವಯಸ್ಸಾಗಿತ್ತು. ಅವರಿಗೆ ಕಳೆದ ಡಿ.27ರಂದು ಹೃದಯ ಸಂಬಂಧಿ ಅನಾರೋಗ್ಯ ಕಾಣಿಸಿಕೊಂಡ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ...

ಶ್ರೀಮತಿ ಸೀತಮ್ಮ ಕಳಂಜ ನಿಧನ

ಕಳಂಜ ಗ್ರಾಮದ ಕಳಂಜ ಮನೆ ಶ್ರೀಮತಿ ಸೀತಮ್ಮ ಕಳಂಜ ಇಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ 57 ವರ್ಷ ವಯಸ್ಸಾಗಿತ್ತು.ಮೃತರು ಪತಿ ಸುಬ್ರಾಯ ಗೌಡ, ಸಹೋದರಿ ಹೊನ್ನಮ್ಮ, ಪುತ್ರ ಪುರಂದರ ಗೌಡ, ಸೊಸೆ ಶ್ರೀಮತಿ ರಮ್ಯ, ಮೊಮ್ಮಗಳು ಬೇಬಿ ಜನನಿ, ಪುತ್ರಿಯರಾದ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ನಳಿನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Ad Widget

ಸುಬ್ರಹ್ಮಣ್ಯ : ಕಡವೆ ಗುದ್ದಿ ಹವ್ಯಾಸಿ ಭಾಗವತ ರಾಮಚಂದ್ರ ಅರ್ಬಿತ್ತಾಯ ವಿಧಿವಶ

ಸುಮಾರು 16 ವರ್ಷಗಳಿಂದ ಸುಬ್ರಹ್ಮಣ್ಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಆಶ್ರಯದಲ್ಲಿರುವ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹೆಡ್ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮಚಂದ್ರ ಅರ್ಬಿತ್ತಾಯರು ಇಂದು ಬೆಳಿಗ್ಗೆ ತಮ್ಮ ಸಹೋದರ ರವಿ ಅರ್ಬಿತ್ತಾಯರೊಂದಿಗೆ ಕುಲ್ಕುಂದದ ಸೋಮಶೇಖರ್ ಎಂಬವವರ ಮನೆಗೆ ಬ್ಯಾಡ್ಮಿಂಟನ್ ಆಟವಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಅವರು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಹತ್ತಿರದ ಗುಡ್ಡದಿಂದ ಕಡವೆ...

ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ

ಯಕ್ಷರಂಗದ ಖ್ಯಾತ ಭಾಗವತ ಪದ್ಯಾಣ ಗಣಪತಿ ಭಟ್ ರವರು ಅ.12ರಂದು ಬೆಳಗ್ಗೆ ವಿಧಿವಶರಾಗಿದ್ದು, ಅವರಿಗೆ 66 ವರ್ಷ ವಯಸ್ಸಾಗಿತ್ತು.ಇವರು 1955 ರಲ್ಲಿ ಪದ್ಯಾಣ ತಿರುಮಲೇಶ್ವರ ಭಟ್ ಹಾಗೂ ಸಾವಿತ್ರಿ ದಂಪತಿಗಳ ಮೂರನೇ ಮಗನಾಗಿ ಜನಿಸಿದ್ದು, ಕಳೆದ 40 ವರ್ಷಗಳಿಂದ ತೆಂಕುತಿಟ್ಟಿನ ಯಕ್ಷಗಾನ ಭಾಗವತಿಕೆ ಕ್ಷೇತ್ರದಲ್ಲಿ ಅಗ್ರಗಣ್ಯ ಕಲಾವಿದರಾಗಿ ಪ್ರಸಿದ್ದರಾಗಿದ್ದಾರೆ.ಪದ್ಯಾಣ ಗಣಪತಿ ಭಟ್ ಅವರು ಚೌಡೇಶ್ವರಿ, ಕುಡಾವು,...

ಅರಂತೋಡು : ಬಟ್ಟೆ ಒಗೆಯಲು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆ

ಬಟ್ಟೆ ಒಗೆಯಲೆಂದು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಉಳುವಾರಿನ ಮಹಿಳೆಯ ಮೃತದೇಹ ಪೆರಾಜೆ ಸಮೀಪ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ.ಅರಂತೋಡು ಗ್ರಾಮದ ಉಳುವಾರು ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿಯವರು ಸೆ. 11ರಂದು ಸಂಜೆ 5 ಗಂಟೆ ಸುಮಾರಿಗೆ ಅರಂತೋಡಿನ ಮಾಡದ ಬಳಿ ಇರುವ ಹೊಳೆಗೆ ಬಟ್ಟೆ ಒಗೆಯಲೆಂದು ಹೋದವರು ನಾಪತ್ತೆಯಾಗಿದ್ದರು. ತೊಡಿಕಾನ ಅರಂತೋಡಿನ ಗ್ರಾಮಸ್ಥರು, ಅಗ್ನಿಶಾಮಕ ದಳ, ಪೈಚಾರಿನ...

ಶತಾಯುಷಿ ಕುಂಜ್ಞಣ್ಣ ನಾಯ್ಕ್ ಕಡವೆಪಳ್ಳ ನಿಧನ

ನಾಲ್ಕೂರು ಗ್ರಾಮದ ಕಡವೆಪಳ್ಳ ದಿವಂಗತ ವಾಮನ ಮಾಸ್ತರ್ ಅವರ ತಂದೆ ಕುಂಜ್ಞಣ್ಣ ನಾಯ್ಕ್ ಅವರು ಸೆ.14 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 115 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ. (ವರದಿ :- ಉಲ್ಲಾಸ್ ಕಜ್ಜೋಡಿ)

ಪೂರ್ಣಚಂದ್ರ ದೇರಪ್ಪಜ್ಜನಮನೆ ನಿಧನ

ನಾಲ್ಕೂರು ಗ್ರಾಮದ ದೇರಪ್ಪಜ್ಜನ ಮನೆ ಡಿ.ಎಚ್. ಪೂರ್ಣಚಂದ್ರ ರವರು ಮೆದುಳಿನ ರಕ್ತಸ್ರಾವದಿಂದ ಆ.27 ರಂದು ಪೂನಾದಲ್ಲಿ ನಿಧನರಾದರು. ಪೂನಾದ ಖಾಸಗಿ ಕಂಪೆನಿಯಲ್ಲಿ ಹಲವಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಲತಾ, ಪುತ್ರ ಶಮಂತ್, ಪುತ್ರಿ ವಿಂಧ್ಯಾ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪಂಜ: ಶ್ರೀಮತಿ ಅನಸೂಯ.ಸಿ.ಕೆ ನಿಧನ

ಪಂಜ ಸಂಕಡ್ಕ ನಿವಾಸಿ ಕೂತ್ಕುಂಜ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಕುಕ್ಕುಪುಣಿಯವರ ಪತ್ನಿ ಶ್ರೀಮತಿ ಅನಸೂಯ.ಸಿ.ಕೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.20ರಂದು ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.ಶ್ರೀಮತಿ ಅನಸೂಯ.ಸಿ.ಕೆ ಯವರು ಪಂಜ ವನಿತಾ ಸಮಾಜದ ಕಾರ್ಯದರ್ಶಿಯಾಗಿ, ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು.

ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆ ನಿಧನ

ಕೊಡಿಯಾಲ ಗ್ರಾಮದ ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆಯವರು ಆ.18ರಂದು ನಿಧನರಾದರು. ಅವರಿಗೆ 105 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಮುದರ, ಪುತ್ರಿಯರಾದ ಲಕ್ಷ್ಮೀ, ಕುಸುಮ, ಕಮಲ, ಚನ್ನು, ಸೊಸೆಯಂದಿರಾದ ಜಾನಕಿ, ಸೇಸಮ್ಮ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಬಾಬು ಪೂಜಾರಿ ಕಳಂಜ ನಿಧನ

ಕಳಂಜ ನಿವಾಸಿ ಬಾಬು ಪೂಜಾರಿ ಕಳಂಜ ಹೃದಯಾಘಾತದಿಂದ ಆ.15ರಂದು ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಭವಾನಿ, ಪುತ್ರ ಸುಧೀರ್, ಪುತ್ರಿಯರಾದ ಶ್ರೀಮತಿ ಜಯಶ್ರೀ, ಶ್ರೀಮತಿ ಸುಜಾತ ಈಶ್ವರಮಂಗಲ, ಶ್ರೀಮತಿ ವಿಜಯಶ್ರೀ ಬೆಂಗಳೂರು ಹಾಗೂ ಸಹೋದರರಾದ ಆನಂದ ಪೂಜಾರಿ ಕಳಂಜ, ಐತ್ತಪ್ಪ ಪೂಜಾರಿ ಕಳಂಜ, ಸುಂದರ ಪೂಜಾರಿ ಸಜೀಪ ಮೇಲ್ಕಾರ್, ಸಹೋದರಿಯರಾದ...
Loading posts...

All posts loaded

No more posts

error: Content is protected !!