ಕೊಲ್ಲಮೊಗ್ರದ ಯುವಕ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಕೆವಿಜಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಹಾರಿದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೊಲ್ಲಮೊಗ್ರದ ಸತ್ತಾರ್ (35) ಎಂಬ ಯುವಕ ಮಾನಸಿಕ ಅಸ್ವಸ್ಥರಾಗಿ ಚಿಕಿತ್ಸೆ ಎರಡು ದಿನಗಳ ಹಿಂದೆ ಸುಳ್ಯ ಕೆವಿಜಿ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಇಂದು ಸಂಜೆ ವೇಳೆಗೆ ಅವರು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದರೆಂದು ತಿಳಿದು ಬಂದಿದೆ. ಅವರನ್ನು ಜೊತೆಗಿದ್ದ ವ್ಯಕ್ತಿ...

ಅಮರಮುಡ್ನೂರು ಗ್ರಾ.ಪಂ. ಮಾಜಿ ಸದಸ್ಯ ಶಿವರಾಮ ಗೌಡ ಕಾಸಿನಗೋಡ್ಲು ನಿಧನ

ಅಮರಮುಡ್ನೂರು ಗ್ರಾಮದ ದೊಡ್ಡತೋಟ ನಿವಾಸಿ, ಅಮರಮುಡ್ನೂರು ಗ್ರಾ.ಪಂ. ಮಾಜಿ ಸದಸ್ಯ ಶಿವರಾಮ ಗೌಡ ಕಾಸಿನಗೋಡ್ಲು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 6೦ ವರ್ಷ ವಯಸ್ಸಾಗಿತ್ತು. 2000-05 ನೇ ಅವಧಿಯಲ್ಲಿ ಅಮರಮುಡ್ನೂರು ಗ್ರಾ.ಪಂ. ಸದಸ್ಯರಾಗಿದ್ದರು. ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಕ್ರಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಮಾಜಿ ಗ್ರಾ.ಪಂ. ಸದಸ್ಯೆ ಶಾಲಿನಿ, ಪುತ್ರ ಶರತ್,...
Ad Widget

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ದೇಶದ 13 ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ಇಂದು ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಕೋವಿಡ್ 19 ಭಾದಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದರು.ಅವರಿಗೆ 76 ವರ್ಷ ವಯಸ್ಸಾಗಿತ್ತು. 1935 ಡಿಸೆಂಬರ್ 11 ರಂದು ಪಶ್ಚಿಮ ಬಂಗಾಳದ ಬೀರ್ ಬೂಂ ನಲ್ಲಿ ಜನಿಸಿದ್ದರು. ಇವರ ತಂದೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬಾಂಗ್ಲಾ ಕಾಂಗ್ರೆಸ್ ನಿಂದ ರಾಜಕೀಯಕ್ಕೆ ಬಂದ ಇವರು...

ಲಕ್ಷ್ಮಣ ಆಚಾರ್ಯ ಅಡ್ಡನಪಾರೆ ನಿಧನ

ಗುತ್ತಿಗಾರು ಗ್ರಾಮದ ಅಡ್ಡನಪಾರೆ ಲಕ್ಷ್ಮಣ ಆಚಾರ್ಯ ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಆ. 5 ರಂದು ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶೋಭಾವತಿ, ಪುತ್ರರಾದ ಮಾಜಿ ಗ್ರಾ.ಪಂ.ಸದಸ್ಯರುಗಳಾದ ಗಂಗಾಧರ, ಭವಾನಿಶಂಕರ, ಪುತ್ರಿ ಚಂದ್ರಕಲಾ ಅಳಿಯ,ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಪದ್ಮಯ್ಯ ಗೌಡ ಕಮಿಲ ನಿಧನ

ಗುತ್ತಿಗಾರು ಗ್ರಾಮದ ಕಮಿಲ ಆಜಡ್ಕ ದಿ. ಶೇಷಪ್ಪ ಗೌಡರ ಪುತ್ರ ಪದ್ಮಯ್ಯ ಗೌಡ ಆ.7 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಪದ್ಮಾವತಿ,ಮೂವರು ಪುತ್ರಿಯರು, ಅಳಿಯಂದಿರು, ಹಾಗೂ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

ಅಬೂಬಕ್ಕರ್ ಉಸ್ತಾದ್ ಕನಕಮಜಲು ನಿಧನ

ಕನಕಮಜಲಿನ ಅಬೂಬಕ್ಕರ್ ಉಸ್ತಾದ್ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಸಮಸ್ತದ ಹಿರಿಯ ಗುರುಗಳಾಗಿದ್ದು ಅಪಾರ ಅನುಯಾಯಿಗಳನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.

*ಅಮ್ಮಕ್ಕ ಕೆಮನಬಳ್ಳಿ ನಿಧನ*

ಜಾಲ್ಸೂರು ಗ್ರಾಮದ ಕೆಮನಬಳ್ಳಿ ದಿ.ಶೀನಪ್ಪ ಗೌಡರ ಧರ್ಮಪತ್ನಿ ಅಮ್ಮಕ್ಕ ಕೆಮನಬಳ್ಳಿ(87) ಇಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರು ಓರ್ವ ಪುತ್ರ, ಏಳು ಪುತ್ರಿಯರು,ಸೊಸೆ,ಅಳಿಯಂದಿರು,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

*ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈಗೆ ಮಾತೃ ವಿಯೋಗ*

ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ರವರ ತಾಯಿ ಪುಷ್ಪವೇಣಿ ಜೆ ರೈ ಯವರು ಇಂದು ಸ್ವಗೃದಲ್ಲಿ ನಿಧನರಾದರು.

ಗಂಗಮ್ಮ ದೋಳ‌ ನಿಧನ

ಮರ್ಕಂಜ ಗ್ರಾಮದ ದೋಳ ದಿ. ಅನಂತಯ್ಯ ಗೌಡರ ಧರ್ಮಪತ್ನಿ ಶ್ರೀಮತಿ ‌ಗಂಗಮ್ಮ ದೋಳ ಜು.23 ರಂದು ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರಿಯರು, ಮೂವರು ಪುತ್ರರು, ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣಾ ಮುಖ್ಯಪೇದೆ ಉಮೇಶ್ ನಿಧನ

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಮುಪ್ಪೇರ್ಯ ಗ್ರಾಮದ ಉಮೇಶ್ ಇವರು(47 ವರ್ಷ) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಇವರು ಕೆಲವು ದಿನಗಳಿಂದ ಶ್ವಾಸಕೋಶ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು.ಮೃತರು ತಾಯಿ ಕಮಲ,ಪತ್ನಿ ತೀರ್ಥಕುಮಾರಿ,ಓರ್ವ ಪುತ್ರ,ಓರ್ವ ಪುತ್ರಿ,ಐವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!