- Thursday
- April 23rd, 2026
ಸುಳ್ಯ ಚೆನ್ನಕೇಶವ ದೇವಸ್ಥಾನವೂ ಸೇರಿದಂತೆ ಹಲವಾರು ದೇವಾಲಯ ಗಳ ತಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳವರು ರಾತ್ರಿ 12.30 ಕ್ಕೆ ನಿಧನರಾದುದಾಗಿ ತಿಳಿದುಬಂದಿದೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ನ್ಯುಮೋನಿಯಯನಿಕ್ಕೊಳಗಾಗಿ ಎರಡು ದಿನಗಳ ಹಿಂದೆ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಕಾಸರಗೋಡು ತಾಲೂಕಿನ ಕುಂಬ್ಡಾಜೆ ಗ್ರಾಮದ ಅಗಲ್ಪಾಡಿಯಲ್ಲಿ ಅವರು ನಲೆಸಿದ್ದರು. ಮೃತರು...
ನಿವೃತ್ತ ಯೋಧ , ಗುತ್ತಿಗಾರು ಸಿಂಡಿಕೇಟ್ ಬ್ಯಾಂಕ್ ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಗುತ್ತಿಗಾರು ನಿವಾಸಿ ಸುಬ್ರಹ್ಮಣ್ಯ ಶಾಸ್ತ್ರಿಯವರು ಇಂದು ಮುಂಜಾನೆ ವಾಕಿಂಗ್ ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನರಾದ ಘಟನೆ ವರದಿಯಾಗಿದೆ . ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು . ಶಾಸ್ತ್ರಿಯವರು ಪ್ರತಿದಿನ ಬೆಳಿಗ್ಗೆ 4.30 ಕ್ಕೆ ವಾಕಿಂಗ್ ಹೊರಡುತ್ತಿದ್ದರು . ವಳಲಂಬೆ...
ಸುಳ್ಯ ಕಸಬಾ ಕೆರೆಮೂಲೆ ನಿವಾಸಿ ದಿ. ಸುಕುಮಾರ ಬಂಗೇರರವರ ಪತ್ನಿ ಸುಂದರಿಯ(62 ) ಹೃದಯಾಘಾತದಿಂದ ಇಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಕೆಲದಿನದ ಹಿಂದೆ ಎದೆನೋವು ಕಾಣಿಸಿಕೊಂಡ ಇವರನ್ನು ಸುಳ್ಯದ ವೈದ್ಯರಿಗೆ ತೋರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಪರೀಕ್ಷೆ ವೇಳೆ ನ್ಯುಮೋನಿಯಾ ಇರುವುದು ಗೊತ್ತಾಗಿ ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಅವರು ಹೃದಯಾಘಾತದಿಂದ ನಿಧನರಾದರು. ಸುಂದರಿಯವರು ರೋಟರಿ...
ಸುಬ್ರಹ್ಮಣ್ಯ ದೇವಾಲಯದ ಬಳಿ ಇರುವ ಶೌಚಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 25 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮದ್ಯಾಹ್ನದ ವೇಳೆಗೆ ಕೆಲಸಕ್ಕೆ ಆಗಮಿಸಿದ್ದ ಈ ಯುವಕ ಶೌಚಾಲಯದ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಬೆಳ್ಳಾರೆ: ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡದಿದೆ. ಮೃತ ಯುವಕನನ್ನು ಎಡಮಂಗಲದ ಪ್ರಕಾಶ್ (25) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಜೂ.14 ರಂದು ನಿಧನರಾದ ಸುಳ್ಯ ಪರಿವಾರ ನಿವಾಸಿ ಜನಮೆಚ್ಚಿದ ಶಿಕ್ಷಕ ದಿ.ಮೊರಂಗಲ್ಲು ಪಿ.ಪದ್ಮನಾಭ ರೈಯವರ ಉತ್ತರ ಕ್ರಿಯಾದಿ ಸದ್ಗತಿ ಕಾರ್ಯಕ್ರಮವು ಜೂ.24 ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ನ ಗ್ರಾಂಡ್ ಪರಿವಾರ್ ಸಭಾಂಗಣದಲ್ಲಿ ಜರುಗಿತು . ಮೃತರಿಗೆ ಎಣ್ಣೂರುಗುತ್ತು ಪಟ್ಟೆ ಪ್ರಭಾಕರ ರೈ ಯವರು ನುಡಿ ನಮನ ಸಲ್ಲಿಸಿದರು . ಈ ಸಂದರ್ಭದಲ್ಲಿ ಮೃತರ ಪತ್ನಿ...
ಜಾಲ್ಸೂರು ಗ್ರಾಮದ ಅಣ್ಣಯ್ಯ ಗೌಡ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಅರೋಗ್ಯ ಇಲಾಖೆಯಲ್ಲಿ ೩೩ ವರ್ಷಗಳ ಸೇವೆ ಸಲ್ಲಿಸಿ ನಿವೃತರಾದ ಬಳಿಕ ಗೃಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರಿಯರಾದ ಆರೋಗ್ಯ ಇಲಾಖೆಯಲ್ಲಿರುವ ಹೇಮಾವತಿ, ಬೇಬಿ, ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಹರಿಣಾಕ್ಷಿ, ಪುತ್ರ ಗೃಹರಕ್ಷದ ದಳದಲ್ಲಿರುವ ರಾಜೇಶ್ ಹಾಗೂ ಕುಟುಂಬಸ್ಥರನ್ನು...
ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಸೋಜಾ ಇಲೆಕ್ಟ್ರಾನಿಕ್ಸ್ನಲ್ಲಿ ಟೆಕ್ನಿಷಿಯನ್ ಆಗಿದ್ದ ಪುತ್ತೂರು ಬಲ್ನಾಡುನ ಯಶವಂತ್ ( ರವಿ ) ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು . ಒಂದು ವಾರದ ಹಿಂದೆ ಅಸೌಖ್ಯಕ್ಕೊಳಗಾಗಿದ್ದರು.
ಮುಂಬೈ(ಜೂ.14): ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್(34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಬಾಂದ್ರಾದ ತಮ್ಮ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ಇಂದು ಬೆಳಗ್ಗೆ ನೇಣಿಗೆ ಶರಣಾದ ಸ್ಥಿತಿಯಲ್ಲಿ ಸುಶಾಂತ್ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಅವರ ಮಾಜಿ ಮ್ಯಾನೇಜರ್ ಸಾಲಿಯಾನ್ ಸೂಸೈಡ್ ಮಾಡಿಕೊಂಡಿದ್ದರು ಎಂಬುವುದು ಉಲ್ಲೇಖನೀಯ. ಕಾಯ್ ಪೋ ಚೆ ಸಿನಿಮಾ ಮೂಲಕ ಬಾಲಿವುಡ್ಗೆ...
ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಬಾಲಕೃಷ್ಣ ಎಂಬವರ ಪುತ್ರ ಚಿದಾನಂದ ಎಂಬವರು ಇಂದು ಮುಂಜಾನೆ ನಿಧನರಾದರು. ಅವರಿಗೆ ಸುಮಾರು 30 ವರ್ಷ ಪ್ರಾಯವಾಗಿತ್ತು. ನಿನ್ನೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡ ಇವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 3 ಗಂಟೆ ವೇಳೆಗೆ ಅವರು ಮೃತಪಟ್ಟರು.ಕೆಲ ವರ್ಷಗಳಿಂದ ಅವರು ಸುಳ್ಯ ಖಾಸಗಿ ಬಸ್ ನಿಲ್ದಾಣದ ಲ್ಲಿರುವ ಹೂವಿನ...
Loading posts...
All posts loaded
No more posts
