- Thursday
- April 23rd, 2026
ಮಂಡೆಕೋಲು ಗ್ರಾಮದ ಮೇಲ್ಮನೆ ಸುಬ್ಬಣ್ಣ ಗೌಡರು ಆ.16ರಂದು ನಿಧನರಾದರು. ಅವರಿಗೆ ಸುಮಾರು 94 ವರ್ಷ ವಯಸ್ಸಾಗಿತ್ತು.ನಾಟಿವೈದ್ಯರಾಗಿದ್ದ ಇವರು, ದೈವ ಪರಿಚಾರಕರಾಗಿಯೂ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬ ಸ್ಥರನ್ನು ಅಗಲಿದ್ದಾರೆ.
ಸುಳ್ಯದ ಹಳೆಗೇಟಿನಲ್ಲಿ ಕುಸಿದು ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವೆಹಿಕಲ್ ಎಲೆಕ್ಟ್ರಿಷಿಯನ್ ಸತ್ಯ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.ಎರಡು ದಿನಗಳ ಹಿಂದೆ ಅವರು ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದರು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ, ಇವರು ಹಲವು ವರ್ಷಗಳಿಂದ ಸುಳ್ಯದಲ್ಲಿ ವಾಹನಗಳ ಇಲಕ್ಟ್ರೀಷಿಯನ್ ಆಗಿ...
ಆಲೆಟ್ಟಿ ರಸ್ತೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಜೀಪಿಗೆ ಗುರುಂಪು ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಶಶಿಧರನ್ ಆಲೆಟ್ಟಿ ಯವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆ.10 ರಂದು ಬೆಳಗ್ಗೆಆಲೆಟ್ಟಿಯಿಂದ ಸುಳ್ಯಕ್ಕೆ ತಮ್ಮ ಬೈಕಿನಲ್ಲಿ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು ಗಾಯಗೊಂಡ ಅವರನ್ನು ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ದಾಖಲಿಸಿ...
ಕೊಲ್ಲಮೊಗ್ರದಲ್ಲಿ ಅಂಚೆ ಪಾಲಕರಾಗಿರುವ ಜಾಲ್ಸೂರು ಮೂಲದ ಅಬ್ದುಲ್ ಜಬ್ಬಾರ್ ಅವರು ಆ.12 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.ಚಾಳೆಪ್ಪಾಡಿ ಎಂಬಲ್ಲಿ ರೂಮ್ ನಲ್ಲಿ ವಾಸವಿರುವ ಅವರು ಅಲ್ಲೇ ನಿಧನರಾಗಿದ್ದು, ಅವರಿಗೆ 55 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ, ಮಕ್ಕಳು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.
ಬಾಳುಗೋಡು ಗ್ರಾಮದ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ನಾಗಪ್ಪ ಗೌಡ ಕೂಜುಗೋಡು ಕಟ್ಟೆಮನೆ ಅವರು ಇಂದು ನಿಧನರಾದರು.ಅವರಿಗೆ 94 ವರ್ಷ ವಯಸ್ಸಾಗಿತ್ತು. ಇವರು ಸುಳ್ಯ ತಾಲೂಕು ಶಿಕ್ಷಣ ಇಲಾಖೆಯಲ್ಲಿ ನಿರೀಕ್ಷಕರಾಗಿದ್ದರು.ಮೃತರು ಪುತ್ರರಾದ ಗುತ್ತಿಗೆದಾರರಾದ ದಿನೇಶ್, ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಯತೀಶ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ.ಮೃತರ ಸದ್ಗತಿ ಕಾರ್ಯಕ್ರಮ...
ಆರಂತೋಡು ಗ್ರಾಮದ ಕಿರ್ಲಾಯ ಗಂಗಾಧರರವರ ಧರ್ಮಪತ್ನಿ ಶ್ರೀಮತಿ ಸುಶೀಲ ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಆ. 7 ರಂದು ರಾತ್ರಿ ನಿಧನರಾದರು.ಮೃತರು ಪತಿ, ಪುತ್ರ ನಿತಿನ್, ಪುತ್ರಿ ಅಕ್ಷಿತಾ, ಅಳಿಯ, ಮೊಮ್ಮಗ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತ ದೇಹ ಇಂದು ಪತ್ತೆಯಾಗಿದೆ.ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33ವ)ಎಂಬ ಯುವಕ ಆ.4.ರಂದು ಮನೆಯಿಂದ ನಾಪತ್ತೆಯಾಗಿದ್ದು ಮೂರು ದಿನದ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಪಂಜ ಹೊಳೆಯ ಪಲ್ಲೋಡಿ ಅಡ್ಕದಲ್ಲಿ ಆ.7 ರಂದು ಮಧ್ಯಾಹ್ನ ವೇಳೆಗೆ ಮೃತ ದೇಹವನ್ನು ಮುಳುಗು ತಜ್ಞರು ಪತ್ತೆ ಹಚ್ಚಿದ್ದಾರೆ.ಸುಳ್ಯದ ಮುಳುಗು ತಜ್ಞರು...
ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕದ ತಿಮ್ಮಪ್ಪಯ್ಯರ ಪುತ್ರ ಸುಳ್ಯದಲ್ಲಿ ವಕೀಲರಾಗಿದ್ದ ಸುಧೀರ್ ಭಟ್ ರವರು ಅಸೌಖ್ಯದಿಂದ ಜು.31 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ತಂದೆ, ತಾಯಿ ಶ್ರೀಮತಿ ಸಾವಿತ್ರಿ, ಪತ್ನಿ ಶ್ರೀಮತಿ ಶ್ವೇತಾ, ಮಕ್ಕಳಾದ ಶ್ರೀ, ಶ್ರೀ ದುರ್ಗ, ಶ್ರೀ ತನಯ ಮತ್ತು ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಮರ್ಕಂಜ ಗ್ರಾಮದ ಬಳ್ಳಕ್ಕಾನ ಮೋನಪ್ಪ ಪೂಜಾರಿ ಎಂಬವರ ಪುತ್ರ ರವಿಕುಮಾರ ಎಂಬವರು ನಿನ್ನೆ ರಾತ್ರಿ ಅಸೌಖ್ಯದಿಂದ ನಿಧನರಾದರು. ಅವರಿಗೆ 38 ವರ್ಷ ವಯಸ್ಸಾಗಿತ್ತು. ಮೃತರು ತಂದೆ, ತಾಯಿ ಪುಷ್ಪಾವತಿ, ಪತ್ನಿ ಪ್ರೇಮ, ಮಗಳು ವರ್ಷಿಣಿ, ಮಗ ಪ್ರೀತಮ್, ಸಹೋದರಿ ಜಯಶ್ರೀ ಸಹೋದರ ರಾಜೇಶ್ ರನ್ನು ಅಗಲಿದ್ದಾರೆ.
ಸುಳ್ಯದ ಕುರುಂಜಿಭಾಗ್ ನಲ್ಲಿರುವ ಮಧುವನ ಹೋಟೇಲ್ ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಅಲ್ಪ ಕಾಲದ ಅನಾರೋಗ್ಯದಿಂದ ಜು.21 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದಿ.ರಾಮಣ್ಣ ಗೌಡರ ಪುತ್ರ ಶಿವಪ್ರಕಾಶ್ (32) ಮೃತಪಟ್ಟ ದುರ್ದೈವಿ. ಮೃತರು ಸಹೋದರರಾದ ಪದ್ಮನಾಭ, ಸುಳ್ಯದಲ್ಲಿ ಹೋಟೆಲ್ ಉದ್ಯಮಿಗಳಾಗಿರುವ ಚಿದಾನಂದ, ಲವಕುಮಾರ್,...
Loading posts...
All posts loaded
No more posts
