Ad Widget

ಬಾಳಿಲ: ಯಶಿತ ಫ್ಯಾನ್ಸಿ ಶುಭಾರಂಭ

ಬಾಳಿಲ ಗ್ರಾಮದ ಪಾಜಪಳ್ಳದಲ್ಲಿ ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು ಮಾಲೀಕತ್ವದ ಯಶಿತ ಫ್ಯಾನ್ಸಿ ಮಾ.05ರಂದು ಶುಭಾರಂಭಗೊಂಡಿತು. ಪೂರ್ವಾಹ್ನ ಗಣಹೋಮ ನೆರವೇರಿತು. ಫ್ಯಾನ್ಸಿಯನ್ನು ಬೆಳ್ಳಾರೆ ಅಮ್ಮ ಭಗವಾನ್ ಸತ್ಸಂಗ ಸೆಂಟರಿನ ರಮಾನಾಥ್ ಮಣಿಯಾಣಿ ಅಂಕತ್ತಡ್ಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ದೇವಕಿ ಕಾಂಚೋಡು, ಲಕ್ಷ್ಮೀಶ ಕಾಂಚೋಡು, ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು, ರಮೇಶ್ ಕಾಂಚೋಡು, ಗೋಪಾಲಕೃಷ್ಣ ಕರಿಕ್ಕಳ,...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ‌ 21 ರ ತನಕ ವಾರ್ಷಿಕ ಜಾತ್ರೆ, ಜ.19ರಂದು ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.16 ರಿಂದ ಜ.21 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಜ.16ರಂದು ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ , ಅನ್ನಸಂತರ್ಪಣೆ ನಡೆಯಲಿದೆ. ಸಂಜೆ‌ 3...
Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ

ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಲೋಗೋ ಅನಾವರಣ

*ಶೀಘ್ರದಲ್ಲಿ ಅತ್ಯಾಧುನಿಕ ಜೇನು ಸಂಸ್ಕರಣಾ ಘಟಕ ಸ್ಥಾಪನೆ-ಶ್ರೀ ನಿರಂಜನ್ ಪೋಳ್ಯ* ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ನೂತನ ಲೋಗೋ ಅನಾವರಣ ಕಾರ್ಯಕ್ರಮ ನ.28ರಂದು ಪುತ್ತೂರು ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಿತು.ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಕೇಶವ ಪ್ರಸಾದ್ ಮುಳಿಯ ಸಂಸ್ಥೆಯ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿ ನೂತನ ಲೋಗೋ ಅನಾವರಣಗೊಳಿಸಿದರು. ದೇವಸ್ಥಾನದ...

ಮಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾರ್ಷಿಕ ಮಿಲನದಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆ ಭಾಗಿ

2023-24ರಲ್ಲಿ ನವದೆಹಲಿಯಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯಿಂದ (Public Relations Council of India - PRCI) ಚಾಣಕ್ಯ ಪ್ರಶಸ್ತಿ ವಿಜೇತರಾದ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯನ್ನು ಈ ಬಾರಿ ಮಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ವಾರ್ಷಿಕ ಮಿಲನದಲ್ಲಿ ವಿಶೇಷ ಆಹ್ವಾನಿತರಾಗಿ ಕರೆಯಲಾಗಿತ್ತು. ದೇಶದ ಪ್ರಮುಖ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಗ್ರಾಮಜನ್ಯ...

ನ.10: ತಂಟೆಪ್ಪಾಡಿ ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ ಯಕ್ಷಗಾನ ಗಾನ ವೈಭವ ಹಾಗೂ ಮಕ್ಕಳ ಯಕ್ಷಗಾನ ಬಯಲಾಟ

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಇಲ್ಲಿ ನ.10ರಂದು ಮಹಿಳಾ ಭಾಗವತರಿಂದ ಯಕ್ಷಗಾನ ಗಾನ ವೈಭವ ಹಾಗೂ ಮಕ್ಕಳ ತಂಡದಿಂದ ಸತೀ ಹೈಮಾವತಿ ಯಕ್ಷಗಾನ ಬಯಲಾಟ ನಡೆಯಲಿದೆ. ಮಹಿಳಾ ಭಾಗವತರುಗಳಾದ ಶ್ರೀಮತಿ ಭವ್ಯಶ್ರೀ ಕುಲ್ಕುಂದ, ಕು ಹೇಮಸ್ವಾತಿ ಕುರಿಯಾಜೆ, ಕು। ರಚನಾ ಚಿದ್ಗಲ್ಲು, ಕು| ಅಭಿಜ್ಞಾ ಭಟ್ ನಾಟಿಕೇರಿ ಇವರುಗಳಿಂದ ಸಂಜೆ 4.30 ರಿಂದ ಯಕ್ಷಗಾನ ಗಾನ...

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಿದ್ಯಾರ್ಥಿನಿ ಹರ್ಷಪ್ರಿಯ ಜಿಲ್ಲಾ ಮಟ್ಟದ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ

ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಇಲಾಖೆ ವತಿಯಿಂದ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದ 80 ಮೀಟರ್ ಅಡೆತಡೆ ಓಟದಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ| ಹರ್ಷಪ್ರಿಯ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಐವರ್ನಾಡು ಶ್ರೀಮತಿ ದೀಪ ಆರ್ ಮತ್ತು ಶ್ರೀ ಕುಮಾರ್ ಎಂ ದಂಪತಿಗಳ ಪುತ್ರಿ.

ಪಂಜಿಗಾರು: ಸ್ವರ್ಣ ಅಟೋ ವರ್ಕ್ಸ್ ನಲ್ಲಿ ಆಯುಧಪೂಜೆ

ಪಂಜಿಗಾರು ಮುಖ್ಯ ರಸ್ತೆಯ ಬಳಿ ಕಾರ್ಯಾಚರಿಸುತ್ತಿರುವ ಸ್ವರ್ಣ ಅಟೋ ವರ್ಕ್ಸ್ ಸಂಸ್ಥೆಯಲ್ಲಿ ನ.02ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಅಟೋ ವರ್ಕ್ಸ್ ಮಾಲಕರಾದ ವಸಂತ ಕುಮಾರ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಬೆಳ್ಳಾರೆ: ಸುಪ್ರಭ ಜ್ಯುವೆಲ್ಲರಿ ವರ್ಕ್ಸ್ ಸಂಸ್ಥೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ

ಬೆಳ್ಳಾರೆಯ ಮುಖ್ಯರಸ್ತೆ ಬಳಿಯ ಶ್ರೀ ದುರ್ಗಾ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸುಪ್ರಭ ಜ್ಯುವೆಲ್ಲರಿ ವರ್ಕ್ಸ್ ಸಂಸ್ಥೆಯು 14ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು ಈ ಪ್ರಯುಕ್ತ ಸಂಸ್ಥೆಯಲ್ಲಿ ನ.01ರಂದು ಗಣಹೋಮ, ಲಕ್ಷ್ಮೀಪೂಜೆ ಹಾಗೂ ವಾಹನಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ಸತ್ಯನಾರಾಯಣ ಆಚಾರ್ಯ ಬೆಳ್ಳಾರೆ ಹಾಗೂ ಪ್ರಸಾದ್ ಆಚಾರ್ಯ ಬೆಳ್ಳಾರೆ ಮತ್ತು ಮನೆಯವರು ಹಾಗೂ ಸಂಸ್ಥೆಯ ಸಿಬ್ಬಂದಿ...

ಬೆಳ್ಳಾರೆ: ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಆಯುಧಪೂಜೆ

ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ನ.01ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಸಂದರ್ಭದಲ್ಲಿ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯ ಮಾಲಕರಾದ ಗಗನ್ ನಾಲ್ಗುತ್ತು, ವಸಂತ ಕುಮಾರ್ ನಾಲ್ಕುತ್ತು, ಭರತ್ ಪಂಜಿಗಾರು, ಮಿಥುನ್ ಗೌರಿಹೊಳೆ, ಹಿಮಾಂಶು ಕುಂಟಿಕಾನ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!