- Wednesday
- May 15th, 2024
ಶ್ರೀಹಸ್ತಾ ರೇಣುಕಾ ರಚಿತಾ ಮನ್ವಿತ್ ಹರ್ಷಿತಾ ದೀಪ್ತಿ ನಿತೇಶ್ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶೇ. 100% ಫಲಿತಾಂಶ ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಗೆ ಶೇ. 100% ಫಲಿತಾಂಶ ದಾಖಲಾಗಿದೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 28 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.ಕುಕ್ಕುಜಡ್ಕದ ನಳಿಯಾರು ಹೊನ್ನಪ್ಪ ಎನ್ ಮತ್ತು ದೇವಕಿ ಬಿ ದಂಪತಿಯ ಪುತ್ರಿ ರೇಣುಕಾ...
*ದೇವಳದಲ್ಲಿ ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ* ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ...
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿ ಜ.29ರಂದು ಸಂಪನ್ನಗೊಂಡಿತು. ಜಾತ್ರೋತ್ಸವವು ಜ.26ರಂದು ಮೊದಲ್ಗೊಂಡಿದ್ದು, ಬೆಳಿಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು. ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಬೆಳಿಗ್ಗೆ ಗಂಟೆ 11 ರಿಂದ ನಾಗತಂಬಿಲ,...
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದ್ದು, ಜ.28ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಅಧ್ಯಾಪಕರಾದ ಸದಾಶಿವ ಭಟ್ ಜೋಗಿಬೆಟ್ಟು ಭಾಗವಹಿಸಿದ್ದರು. ಮುಖ್ಯ ಅತಿಥಿಯಾಗಿ...
ಜ. 28ರಂದು ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನೆರವೇರಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಬಳಿಕ ಪರಿವಾರ ದೈವಗಳಾದ...
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ...
ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ರಥೋತ್ಸವ ಕಣ್ತುಂಬಿಕೊಂಡು ಪುಳಕಿತರಾದ ಸಹಸ್ರ ಸಹಸ್ರ ಭಕ್ತಾದಿಗಳು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು(ಜ.19) ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ನಡೆಯಿತು. ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು...
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...
Loading posts...
All posts loaded
No more posts