Ad Widget

ಮಂಗಳೂರು ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು

ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು  ಮಹಿಳಾ ಘಟಕದ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಜು.15 ರಂದು ನಡೆಯಿತು.  ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು, ಹಾಗೂಕಾರ್ಯದರ್ಶಿ ಸ್ಥಾನಕ್ಕೆ ಕಿರಣ್ ಹೊಸೊಳಿಕೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ,  ಖಜಾಂಚಿಯಾಗಿ ಚೇತನ್ ಕೊಕ್ಕಡ, ಜತೆಕಾರ್ಯದರ್ಶಿಯಾಗಿ ...

ಚೆಂಬು : ಜಾಗದ ವಿವಾದ – ಅಣ್ಣನನ್ನು ಕೊಂದ ತಮ್ಮ

ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಘಟನೆ ಇಂದು ವರದಿಯಾಗಿದೆ. ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ. ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ...
Ad Widget

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2023-24ನೇ ಸಾಲಿನ 6 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್ಮಚಾರಿ, ಸ್ಮಶಾನ ಕಾರ್ಮಿಕ, ದೇವದಾಸಿ, ಮ್ಯಾನುವಲ್ ಸ್ಕ್ಯಾವೆಂಜ‌ ಸಮುದಾಯದ ಮಕ್ಕಳಿಗೆ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರವಾಗಿ ದಾಖಲಾತಿಯನ್ನು ನೀಡಲಾಗುವುದು. ವಸತಿ ಶಾಲೆಗಳಲ್ಲಿ ಉಚಿತ ಊಟ ವಸತಿಯೊಂದಿಗೆ ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಾಗ್ರಿಗಳು ಮೂಲಸೌಲಭ್ಯವನ್ನು ಒದಗಿಸಲಾಗುವುದು....

ಯುವ ಬ್ರಿಗೇಡ್ ಕಾರ್ಯಕರ್ತ ಹಾಗೂ ಜೈನ ಮುನಿಗಳ ಹತ್ಯೆ ಮಾಡಿದವರಿಗೆ ಕಠಿಣ ಕಾನೂನು ಕ್ರಮಕ್ಕೆ ರಾಜ್ಯಪಾಲರಿಗೆ ಸುಳ್ಯ ಯುವ ಬ್ರಿಗೇಡ್ ಮನವಿ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಮತ್ತು ಚಿಕ್ಕೋಡಿಯ ಜೈನ ಮುನಿಗಳ ಹತ್ಯೆ ಖಂಡಿಸಿರುವ ಸುಳ್ಯದ ಯುವ ಬ್ರಿಗೇಡ್, ಸೂಕ್ತ ರೀತಿಯ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಮನೀಶ್ ಗೂನಡ್ಕ,...

ಕುಂದುಕೊರತೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲು ಟ್ವೀಟರ್ ಖಾತೆ ಆರಂಭ

ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು...

ಕೂರ್ನಡ್ಕ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆ

ಜು.6 ರಂದು ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನಾರಾಯಣನ್ ಎಂಬ ವ್ಯಕ್ತಿ ಪಾಲದಿಂದ ಬಿದ್ದು ನಾಪತ್ತೆಯಾಗಿದ್ದರು. ಸುಳ್ಯ ಪ್ರಕೃತಿ ವಿಕೋಪ ತಂಡದಿಂದ ನಿರಂತರ 3 ದಿನಗಳಿಂದ ಕಾರ್ಯಚರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ವೇಳೆಗೆ ಆಲೆಟ್ಟಿ ಗ್ರಾಮದ ನೆಡ್ಚಿಲ್ ಎಂಬಲ್ಲಿ ನಾರಾಯಣ ಅವರ ಮೃತದೇಹ ಸಿಕ್ಕಿದೆ ಎಂದು ತಿಳಿದುಬಂದಿದೆ. ಎಸ್ ಡಿ ಆರ್ ಫ್ , ಪೈಚಾರ್...

ಸರ್ಕಾರಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ – ಜಿಲ್ಲೆಯ 200 ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ಸೆಲ್ಕೋ ಸಂಸ್ಥೆ

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...

ನಾಳೆ(ಮೇ.08) ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 10.00 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಮಂಡಳಿ ಮಾಹಿತಿ ನೀಡಿದೆ. ಈ ಬಾರಿ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು 11.00 ಗಂಟೆಯಿಂದ...

ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ : ಡಾ|| ಚೂಂತಾರು

ಗಾಂಧಿ ಜಯಂತಿಯ ಅಂಗವಾಗಿ ಇಂದು ಬೆಳ್ಳಾರೆ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ "ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು,...

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯದ ಯುವ ನಾಯಕರಾದ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಜತೆಗಿದ್ದರು.
Loading posts...

All posts loaded

No more posts

error: Content is protected !!