ಆ.31: ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ ; ದರುಶನದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ  ನೆರವೇರಲಿದೆ. ನಂತರ...

ಕುಕ್ಕೆ ಸುಬ್ರಹ್ಮಣ್ಯ : ಸೆ.07 ರಂದು ಚಂದ್ರಗ್ರಹಣದ ನಿಮಿತ್ತ ದೇವಳದಲ್ಲಿ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...
Ad Widget

ಅಮರ ಸುದ್ದಿ ಸ್ಪೆಷಲ್ ರಿಪೋರ್ಟ್

ಪ್ರತೀ ವರ್ಷವೂ ಬೇಸಿಗೆ ರಜೆ ಕಳೆದು ಶಾಲೆಗಳು ಪ್ರಾರಂಭವಾಗುವ ಬೆನ್ನಲ್ಲೇ ಶುರುವಾಗುವ ಮಳೆ ; ಮಳೆಗಾಲದಲ್ಲಿ ಶಾಲೆಗೆ ತೆರಳಲು ಕಷ್ಟಪಡುವ ವಿದ್ಯಾರ್ಥಿಗಳು

ವಿದ್ಯಾರ್ಥಿಗಳಿಗೆ ವಾರ್ಷಿಕ ಬೇಸಿಗೆ ರಜೆಯನ್ನು ಬೇಸಿಗೆಯ ಬದಲು ಮಳೆಗಾಲದಲ್ಲಿ ನೀಡಿದರೆ ಉತ್ತಮವಲ್ಲವೇ…!?

✍️ ಉಲ್ಲಾಸ್ ಕಜ್ಜೋಡಿ

ಇತ್ತೀಚೆಗೆ ಕೇರಳ ರಾಜ್ಯದ ಶಿಕ್ಷಣ ಸಚಿವರಾದ ವಿ.ಶಿವನ್ ಕುಟ್ಟಿ ಅವರು ತಮ್ಮ ರಾಜ್ಯದ ಶಾಲೆಗಳ ವಾರ್ಷಿಕ ಬೇಸಿಗೆ ರಜೆಯ ಕುರಿತಾಗಿ “ಕೇರಳ ರಾಜ್ಯದಲ್ಲಿ ತೀವ್ರ ಬಿಸಿಲು ಇರುವ ಸಂದರ್ಭದಲ್ಲಿ ಮಕ್ಕಳಿಗೆ ವಾರ್ಷಿಕ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ ಭಾರೀ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ತಿಂಗಳ ಅವಧಿಯಲ್ಲಿ...

ಆ.15ರಿಂದ ಕುಕ್ಕೆ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ – ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ ಅಭಿಯಾನ

ಸುಬ್ರಹ್ಮಣ್ಯ: "ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುವುದು. ಅಲ್ಲದೆ ಈ ಮೂಲಕ ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ ಅಭಿಯಾನಕ್ಕೆ ಪುಣ್ಯಕ್ಷೇತ್ರ ದಲ್ಲಿ ಚಾಲನೆ ನೀಡಲಾಗುವುದು. ಆರೋಗ್ಯಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆ ಮಾಡದೆ...

ಚೆಂಬು :  ಪುಂಡಾನೆ ಸೆರೆಗೆ  ಸರಕಾರದಿಂದ ಅಧಿಕೃತ ಅನುಮತಿ ; ಕಾರ್ಯಾಚರಣೆ ಆರಂಭ

ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಕಾಡಾನೆ ದಾಳಿಯಿಂದ ಕೊಪ್ಪದ ಶಿವಪ್ಪ ಎಂಬುವವರು ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಮಡಿಕೇರಿ ಹಾಗೂ ಸಂಪಾಜೆಯಲ್ಲಿ ರೈತರು ಪ್ರತಿಭಟನೆ ನಡೆಸಿ ಆನೆಯನ್ನು ಹಿಡಿದು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದರು. ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಕೂಡ ಮುತುವರ್ಜಿ ವಹಿಸಿ ಆನೆ ಸೇರೆಗೆ ಸರಕಾರದ ಗಮನ ಸೆಳೆದಿದ್ದರು. ಇದೀಗ ಆನೆ ಸೆರೆಗೆ ಸರಕಾರ...

ಪ್ರಧಾನಿಗೆ ಪತ್ರ ಬರೆದ ಕೆ.ಎಸ್.ಎಂ.ಸಿ.ಎ ಅಧ್ಯಕ್ಷ ಬಿಟ್ಟಿ ಬಿ.ನೆಡುನಿಲಂ ; ಕ್ರೈಸ್ತರ ಧಾರ್ಮಿಕ ಸ್ವಾತಂತ್ರ್ಯವನ್ನು ಕಾಪಾಡಲು ಮನವಿ

"ಇತ್ತೀಚಿನ ತಿಂಗಳಲ್ಲಿ ಭಾರತದ ವಿವಿಧ ಭಾಗಗಳಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಹಿಂಸಾಚಾರ ಮತ್ತು ಹಿಂಸೆ ಹೆಚ್ಚುತ್ತಿರುವುದು ನಮ್ಮನ್ನು ಗಂಭೀರವಾಗಿ ಕಳವಳಗೊಳಿಸಿದೆ. ಪಾದ್ರಿಗಳು, ಸನ್ಯಾಸಿನಿಯರು, ಇಗರ್ಜಿಗಳು ಮತ್ತು ಕ್ರೈಸ್ತ ಸಂಸ್ಥೆಗಳ ಮೇಲೆ ದಾಳಿಗಳು ನಡೆಯುತ್ತಿರುವ ವರದಿಗಳು ಜಾಗತಿಕ ಸಮುದಾಯದ ಗಮನ ಸೆಳೆದಿವೆ, ಏಕೆಂದರೆ ಇಂತಹ ಕೃತ್ಯಗಳು ಭಾರತದ ಸಂವಿಧಾನದಲ್ಲಿ ಭರವಸೆ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಮತ್ತು ಮಾನವ...

ವಿವಿಧ ಬೇಡಿಕೆ ಈಡೇರದ ಹಿನ್ನೆಲೆ ಇಂದಿನಿಂದ(ಆ.05) ಕೆ.ಎಸ್‌.ಆರ್‌.ಟಿ.ಸಿ ನೌಕರರ ಮುಷ್ಕರ

News Update : ದ.ಕ.ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೇ ದ.ಕ. ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು...

ಅಮರ ಸುದ್ದಿ ವಿಶೇಷ ವರದಿ

ಅಡಿಕೆಗೆ ಹಿಡಿದಿರುವ ಹಲವು ರೋಗಗಳಿಂದ ಹೈರಾಣಾಗಿರುವ ಅಡಿಕೆ ಬೆಳೆಗಾರರು…!

ಈ ರೀತಿ ಅಡಿಕೆ ಕೃಷಿ ನಾಶವಾಗುತ್ತಾ ಹೋದರೆ ಅಡಿಕೆ ಬೆಳೆಯನ್ನೇ ನಂಬಿ ಬದುಕು ನಡೆಸುತ್ತಿರುವ ಕೃಷಿಕರ ಮುಂದಿನ ಪರಿಸ್ಥಿತಿಯೇನು…!?

ಭವಿಷ್ಯದ ಬದುಕಿನ ಚಿಂತೆಯಲ್ಲಿ ಅಡಿಕೆ ಬೆಳೆಗಾರರು…!

✍️ಉಲ್ಲಾಸ್ ಕಜ್ಜೋಡಿ

ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವರಾದ ಡಾ| ಜಿ.ಪರಮೇಶ್ವರ್

ಸ್ವಾಗತ ಕೋರಿದ ಅಧಿಕಾರಿಗಳು ಹಾಗೂ ಮುಖಂಡರು

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ” : ಡಾ| ಜಿ.ಪರಮೇಶ್ವರ್

ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ| ಜಿ.ಪರಮೇಶ್ವರ್ ಅವರು ಜು.08 ರಂದು ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ. ಕೇವಲ ಹೇಳಿಕೆಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ. ಇತ್ತೀಚೆಗೆ ನಡೆದ ಕಾನ್ಫರೆನ್ಸ್...
Loading posts...

All posts loaded

No more posts

error: Content is protected !!