ಗುತ್ತಿಗಾರು :  ಹಣದಾಸೆಗೆ ಹೂಡಿಕೆ ಮಾಡಿದ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ಹಣ ಠೇವಣಿ ಮಾಡಿದರೆ ಕಮಿಷನ್ ನೀಡುವುದಾಗಿ ನಂಬಿಸಿ ಸುಳ್ಯ ತಾಲೂಕಿನ ಗುತ್ತಿಗಾರಿನ 30 ವರ್ಷದ ಮಹಿಳೆಯಿಂದ ಲಕ್ಷಾಂತರ ರೂ ಪಡೆದುಕೊಂಡು ವಂಚಿಸಿದ ಬಗ್ಗೆ  ವರದಿಯಾಗಿದೆ.ಮಾರ್ಚ್ 19ರಂದು ಮಹಿಳೆಗೆ ಟೆಲಿಗ್ರಾಂ ಆ್ಯಪ್‌ನಿಂದ ಏರ್‌ಫಝ್ ಎಂಬ ಕಂಪೆನಿಯಲ್ಲಿ ಹೂಡಿಕೆ ಮಾಡಿದರೆ ಕಮಿಷನ್ ನೀಡುವುದಾಗಿ ತಿಳಿಸಿ ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕನ್ನು ಒತ್ತಿದಾಗ ಅದರಲ್ಲಿ ಟೆಲಿಗ್ರಾಂ ಅಕೌಂಟ್ ತೆರೆದು ಲಾಗಿನ್...

ಕುಕ್ಕೆ ಸುಬ್ರಹ್ಮಣ್ಯದ ಪ್ರಾಥಮಿಕ ವೈದ್ಯಕೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಸಚಿವರಿಗೆ ಮನವಿ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶಾದ್ಯಂತ ಇಲ್ಲಿಗೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರುಶನ ಪಡೆದು ಪುನೀತರಾಗುತ್ತಾರೆ. ಈ ಕ್ಷೇತ್ರವು ಆದಾಯದಲ್ಲಿ ಕರ್ನಾಟಕ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದ್ದು, ಆದರೂ ಕೂಡ ಇಲ್ಲಿ ಅಗತ್ಯವಾಗಿ ಬೇಕಾಗಿರುವಂತಹ ಅತೀ ಅವಶ್ಯಕವಾದ ವೈದ್ಯಕೀಯ...
Ad Widget

ಶ್ರೀಮಂತ ದೇವಸ್ಥಾನಗಳಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ – ಕುಕ್ಕೆಯಲ್ಲಿ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ

(ವರದಿ : ರತ್ನಾಕರ ಸುಬ್ರಹ್ಮಣ್ಯ ) ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ....

ಕುಕ್ಕೆ ಸುಬ್ರಹ್ಮಣ್ಯ : ನಾಳೆ(ಜೂ.30) ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭ

ಶಂಕುಸ್ಥಾಪನೆ ನೆರವೇರಿಸಲಿರುವ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ

(ವರದಿ : ಉಲ್ಲಾಸ್ ಕಜ್ಜೋಡಿ)ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ(ಜೂ.30) ಪೂರ್ವಾಹ್ನ 11:30ಕ್ಕೆ ತುಳಸಿ ತೋಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ...

ಮಲೆನಾಡು ಜನಹಿತರಕ್ಷಣಾ ವೇದಿಕೆ ಹೋರಾಟದ ಫಲಶ್ರುತಿ – ಶೀಘ್ರವೇ ಜಂಟಿ ಸರ್ವೆಗೆ ಸರಕಾರದ ಆದೇಶ – ಆಯಾಯ ಗ್ರಾ.ಪಂ.ಗೆ ಮಾಹಿತಿ ನೀಡಿ ಜಂಟಿಸರ್ವೆ ನಡೆಸುವಂತೆ ಮನವಿ

ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಹೆಚ್ಚಿದ ಬೇಡಿಕೆ ಮಾ.24 ರಂದು ಮತ್ತೆ ಎರಡು ಶೋ, ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಿಜ್ರಂಭಣೆಯ ದೈವಂಕಟ್ಟು ಮಹೋತ್ಸವ – ಕಣ್ತುಂಬಿಕೊಂಡ ಸಾವಿರಾರು ಭಕ್ತರು – ಮಹೋತ್ಸವ ಇಂದು ಸಂಪನ್ನ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...

ನಾಳೆ ( ಫೆ.21) ಪುತ್ತೂರು ಸೇರಿದಂತೆ ರಾಜ್ಯಾದ್ಯಾಂತ ಭಾವ ತೀರ ಯಾನ ಚಲನಚಿತ್ರ ತೆರೆಗೆ

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ರೈತರ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ನಡೆಸಲು ಸಮಾಲೋಚನಾ ಸಭೆಯಲ್ಲಿ ನಿರ್ಧಾರ – ಸಲಹಾ ಸಮಿತಿ, ಗ್ರಾಮ ಮಟ್ಟದಲ್ಲಿ ರೈತ ಸಮಿತಿ ರಚಿಸುವ ಬಗ್ಗೆ ನಿರ್ಧಾರ ;ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಇಲ್ಲಿ ಬದುಕಲು ಸಾಧ್ಯ – ವಕೀಲ ಪ್ರದೀಪ್

ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಮಲೆನಾಡಿನ ಜೀವನ ಸಾಧ್ಯ. ನಾವು ಇಂದು ಕಸ್ತೂರಿ ರಂಗನ್ ವರದಿಯ ಹಿಂದೆ ಹೋಗುವುದನ್ನು ಬಿಟ್ಟು ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ಆರಂಭಿಸಬೇಕಿದೆ ಇದರಿಂದಾಗಿ ಪಶ್ಚಿಮಘಟ್ಟಗಳ ಜ್ವಲಂತ ಸಮಸ್ಯೆಗಳಿಗೆ ಹರಿಹಾರ ಸಿಗಬಹುದು ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಸಂಚಾಲಕರಾಗಿರುವ ವಕೀಲ ಪ್ರದೀಪ್ ಕೆ.ಎಲ್. ಹೇಳಿದರು. ಅವರು ಸುಳ್ಯದ...

ಪ್ರಕೃತಿಯಲ್ಲೊಂದು ವಿಸ್ಮಯ – ತುಳಸಿ ಗಿಡದಲ್ಲಿ ಅರಳಿದ ದಾಸವಾಳ

https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...
Loading posts...

All posts loaded

No more posts

error: Content is protected !!