ಕುಕ್ಕೆ ಆನ್ ಲೈನ್ ಸೇವೆಗೆ ಪ್ರತ್ಯೇಕ ವೆಬ್ ಸೈಟ್- ಸಚಿವ ಕೋಟ

ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್‌ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‌ಲೈನ್ ಸೇವೆಗೆ ಪ್ರತ್ಯೇಕ ವೆಬ್‌ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...

ನಾಳೆ ಗುತ್ತಿಗಾರಿಗೆ ಉಸ್ತುವಾರಿ ಸಚಿವರ ಭೇಟಿ – ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

ಜೂನ್ ೨೦ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗಾರಿಗೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ, ಹಾಗೂ ಜಿ.ಪಂ. ,ತಾ.ಪಂ. ಸದಸ್ಯರು ಉಪಸ್ಥಿತರಿರುವರು. ಗುತ್ತಿಗಾರು ಪ.ಪೂ.ಕಾಲೇಜಿನ ಕಟ್ಟಡ, ಗುತ್ತಿಗಾರು ಪೇಟೆಯ ಅಟೋ ರಿಕ್ಷಾ ನಿಲ್ದಾಣ, ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಜನಪದ...
Ad Widget

ಚೇತರಿಕೆ ಕಾಣುತ್ತಿರುವ ರಬ್ಬರ್ ದರ : ಕೇರಳದಂತೆ ಇಲ್ಲೂ ಸರಕಾರ ಬೆಂಬಲ ಬೆಲೆ ನೀಡಬೇಕು- ಮುಂಡೋಡಿ

⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...

ಗಡಿಯಲ್ಲಿ ಚೀನಾ ತಕರಾರು: ಪ್ರತ್ಯುತ್ತರ ನೀಡಿದ ಸೇನೆ ೫ ಚೀನಿ‌ ಸೈನಿಕರು ಹತ – ಮೂವರು ಭಾರತೀಯ ಯೋಧರು ಹುತಾತ್ಮ

ಲಡಾಖ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ್ದು, ಚೀನಿ ಸೈನಿಕರ ದಾಳಿಯ ಪರಿಣಾಮವಾಗಿ ಭಾರತೀಯ ಸೇನೆಯ ಓರ್ವ ಸೈನ್ಯಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.ಗಡಿಯಿಂದ ಸೈನ್ಯ ಹಿಂಪಡೆಯುವಿಕೆ ಪ್ರಕ್ರಿಯೆ ಜಾರಿಯಲ್ಲಿರುವಾಗಲೇ ಚೀನಿ ಸೈನಿಕರು ಗಡಿಯಲ್ಲಿ ಭಾರತೀಯ ಸೈನಿಕರೊಂದಿಗೆ ಘರ್ಷಣೆಗೆ ಇಳಿದಿದ್ದಾರೆ ಎನ್ನಲಾಗಿದೆ.ನಿನ್ನೆ ತಡರಾತ್ರಿ ನಡೆದ ಘರ್ಷಣೆಯಲ್ಲಿ ಭಾರತೀಯ ಸೇನೆಯ ಓರ್ವ...

ರಾಜ್ಯಸಭೆಗೆ ಮೂರು ಪಕ್ಷಗಳ ನಾಲ್ವರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ರಾಜ್ಯಸಭೆಯ ಚುನಾವಣೆಯಲ್ಲಿ ಬಿಜೆಪಿ ಈರಣ್ಣ ಕಡಾಡಿ, ಅಶೋಕ ಗಸ್ತಿ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್‌ನ ಎಚ್‌.ಡಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. ಅವಿರೋಧ ಆಯ್ಕೆಯ...

ರಾಜ್ಯದಲ್ಲಿ ಪ್ರಬಲ ಗೋ ಹತ್ಯಾ ನಿಷೇಧ ಮಸೂದೆ ಶೀಘ್ರ

ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...

ಶಿಸ್ತಿನ ಸಿಪಾಯಿಗಳಿಗೆ ಬಿಜೆಪಿ ಹೈ ಕಮಾಂಡ್ ಮಣೆ : ರಾಜ್ಯಸಭೆ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿ ಆಯ್ಕೆ

ರಾಯಚೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗಸ್ತಿ ಹಾಗೂ ಬಿಜೆಪಿ ಬೆಳಗಾವಿ ನಗರಾಧ್ಯಕ್ಷ ಈರಣ್ಣ ಕಡಾಡಿ ಇವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ . ಇದರೊಂದಿಗೆ ರಾಜ್ಯ ಬಿಜೆಪಿ ಕಳಿಸಿದ ಲಿಸ್ಟ್ ಗೆ ಹೈಕಮಾಂಡ್ ತಿರಸ್ಕರಿಸಿ , ಪಕ್ಷದ ಕಾರ್ಯಕರ್ತರಿಗೆ ಮಣೆ ಹಾಕಿದೆ.ಈ ಮೂಲಕ ಪಕ್ಷದ ನಾಯಕರ ಹಿಂಬಾಲಕರಿಗೆ, ಪಕ್ಷದಲ್ಲಿ ಗುಂಪುಗಾರಿಕೆ, ಬಂಡಾಯದ...

ಜೂನ್ 14 ಡಿಕೆಶಿ ಪದಗ್ರಹಣ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜೂನ್ 7ರಂದು ನಿಗದಿಯಾಗಿದ್ದ ಡಿಕೆಶಿ ಪದಗ್ರಹಣ ಮುಂದೂಡಿಕೆ ಯಾಗಿತ್ತು. ಇದೀಗ ಜೂನ್ 14ರಂದು ಪದಗ್ರಹಣಕ್ಕೆ ಮುಹೂರ್ತ ಪಿಕ್ಸ್ ಆಗಿದೆ ಎಂದು ತಿಳಿದುಬಂದಿದೆ

ಗೃಹರಕ್ಷಕದಳದ ಸಿಬ್ಬಂದಿಗಳ ಸೇವೆಯನ್ನು ಮುಂದುವರಿಸುವಂತೆ ಜೆಡಿಎಸ್ ಆಗ್ರಹ

ರಾಜ್ಯ ಸರ್ಕಾರವು ಆರ್ಥಿಕ ಕಾರಣವೊಡ್ಡಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಸೇವೆಸಲ್ಲಿಸುತ್ತಿರುವ ಗೃಹರಕ್ಷಕದಳದ ಸಿಬ್ಬಂದಿಗಳನ್ನು ಜೂನ್ ಒಂದರಿಂದ ಬಿಡುವ ಆದೇಶ ಜಾರಿ ಮಾಡಿದ್ದು ಈ ದಿಢೀರ್ ಘೋಷಣೆ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಲಿದೆ. ರಾಜ್ಯದಲ್ಲಿ ಸುಮಾರು 25 ಸಾವಿರ ಗೃಹರಕ್ಷಕ ಸಿಬ್ಬಂದಿ ಗಳು ಸೇವೆ ಸಲ್ಲಿಸುತ್ತಿದ್ದು ನೆರೆ ಪರಿಹಾರ, ಸಾರಿಗೆ ಸುವ್ಯವಸ್ಥೆ, ಬಂದೋಬಸ್ತು, ಗಣ್ಯರ ರಕ್ಷಣೆ, ಕಾನೂನು ಸುವ್ಯವಸ್ಥೆ,...

ಕಾಸರಗೋಡು ಎಸ್ಪಿಯಾಗಿ ಕನ್ನಡತಿ ಡಿ ಶಿಲ್ಪಾ ನೇಮಕ

ಕಾಸರಗೋಡು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಪಿ ಎಸ್ ಸಾಬು ರವರನ್ನು ವರ್ಗಾವಣೆಗೊಳಿಸಿ ಆಸ್ತಾನಕ್ಕೆ ಕರ್ನಾಟಕ ಮೂಲದ ಡಿ ಶಿಲ್ಪಾ ರವರನ್ನು ನೇಮಿಸಲಾಗಿದೆ ಶಿಲ್ಪಾ ರವರು ಜಿಲ್ಲೆಯ ಪ್ರಥಮ ಮಹಿಳಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
Loading posts...

All posts loaded

No more posts

error: Content is protected !!