- Sunday
- September 6th, 2026
ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಹೊರಬಿದ್ದಿದ್ದು ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆ.ಪಿ.ಎಸ್) ಬೆಳ್ಳಾರೆಯ ವಿದ್ಯಾರ್ಥಿಯಾದ ಸಾತ್ವಿಕ್.ಹೆಚ್.ಎಸ್ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದ್ದಾರೆ. ಅಮರಸುದ್ದಿಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ಸಾತ್ವಿಕ್.ಹೆಚ್.ಎಸ್ ಭವಿಷ್ಯದಲ್ಲಿ ಗಣಿತ ಸಂಶೋಧಕನಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕಳಂಜ ಗ್ರಾಮದ ಕಜೆಮೂಲೆ ಡಾ.ಶಶಿಧರ್.ಹೆಚ್.ಎಸ್ ಹಾಗೂ ಡಾ.ಅನುಪಮಾ ಶಶಿಧರ್ ದಂಪತಿಗಳ ಸುಪುತ್ರರಾಗಿರುವ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಶೇಣಿ, ಚೊಕ್ಕಾಡಿ ಭಗವಾನ್...
ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಸಾತ್ವಿಕ್ ಹೆಚ್.ಎಸ್. ಈ ಬಾರಿಯ ಎಸ್ .ಎಸ್.ಎಲ್.ಸಿ. ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಡಿ.11 ಮತ್ತು 12ರಂದು ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ರಿ.) ಇದರ ವತಿಯಿಂದ 40ನೇ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕನ್ನು 8 ಜನ ಕ್ರೀಡಾಪಟುಗಳು ಪ್ರತಿನಿಧಿಸಿದ್ದು ಎಲ್ಲಾ 8 ಮಂದಿ ಕ್ರೀಡಾಪಟುಗಳು ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತುಕಾರಾಮ ಏನೆಕಲ್ಲು 100ಮೀ. ಮತ್ತು 200ಮೀ. ಓಟದಲ್ಲಿ...
ದಕ್ಷಿಣ ಕನ್ನಡ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದು ಇಂದು ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಬಿಜೆಪಿ ಜಿಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ...
ಇಂದು ಸುಳ್ಯಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ . ಶಿವಕುಮಾರ್ ಅವರು ಬಳಿಕ ಕುಕ್ಕೆ ಸುಬ್ರಹ್ಮಣ್ಯ ಹೋಗಿ ನಂತರ ನಿಂತಿಕಲ್ಲಿನ ಎಂ.ಮಾಧವ ಗೌಡ ಕಾಮಧೇನು ಅವರ ಧರ್ಮಶ್ರೀ ಆರ್ಕೇಡ್ ನಲ್ಲಿರುವ ಮಯೂರ ಗೋಲ್ಡ್ ಫ್ಯಾಲೇಸ್ ಗೆ ಭೇಟಿ ನೀಡಿದರು. ಉದ್ಯಮಿ ಹಾಗೂ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ , ಮಯೂರ ಗೋಲ್ಡ್ ಮಾಲಕ ದೀಕ್ಷಿತ್...
ರಾಜ್ಯದ ನೂತನ ಸಚಿವರಾಗಿ ಎರಡನೇ ಬಾರಿ ಇಂದು ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕರಾದ ಎಸ್.ಅಂಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ತಕ್ಷಣದಿಂದ ಜಾರಿ ಬರುವಂತೆ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಕೋಟಿ ಶ್ರೀನಿವಾಸ ಪೂಜಾರಿ ಅವರಿಗೆ ಕೊಡಗು ಹಾಗೂ ಸುನಿಲ್ ಕುಮಾರ್ ಅವರನ್ನು ಉಡುಪಿ...
ಕೆಲವು ತಿಂಗಳುಗಳಿಂದ ನಡೆದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿ ಬಿಜೆಪಿಯಲ್ಲಿ ಹೊಸ ಶಕೆಗೆ ನಾಂದಿ ಹಾಡಿದ್ದಾರೆ. ಕಣ್ಣೀರಿಡುತ್ತಲೇ ರಾಜೀನಾಮೆ ಸಲ್ಲಿಸುವ ಇರಾದೆ ವ್ಯಕ್ತಪಡಿಸಿದರು. ಇದುವರೆಗೂ ಅವಕಾಶ ಮಾಡಿ ಹೈಕಮಾಂಡ್...
ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ.ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ.ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ ಅನುಷ್ಠಾನ ಯುವ ಜನಾಂಗದ ಅಭ್ಯುದಯಕ್ಕೆ ಸಂಪತ್ತಾಗಿದೆ.ಮಹಾಪುರುಷರನ್ನು ಅವರ ಗುಣ ನಡತೆ, ಪರಿಶ್ರಮ ಮತ್ತು ಸಾಧನೆಯಿಂದ ಅವರನ್ನು ಗೌರವಿಸುತ್ತೇವೆ.ಬದಲಾಗಿ ಅವರಲ್ಲಿನ...
ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.೨೧ರಿಂದ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಆಗಮನವನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಕೋವಿಡ್-೧೯ ಇಳಿಮುಖಗೊಂಡಿರುವುದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಸೋಮವಾರದಿಂದ ಅವಕಾಶ ಲಭ್ಯವಾಗಿದೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...
Loading posts...
All posts loaded
No more posts
