- Friday
- August 21st, 2026
ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಂದ ಪ್ರಾರ್ಥನೆ, ಭಾಷಣ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ . ಅಧ್ಯಕ್ಷೆ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಪಾರೆಪ್ಪಾ ಡಿ, ಸಹ...
ದೇವಚಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಊರಿನ ಗಣ್ಯರ ವತಿಯಿಂದ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾದ ಎ.ವಿ ತೀರ್ಥರಾಮ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಲ್ಮಡ್ಕ ಗ್ರಾಮ ಪಂಚಾಯತಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಯಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ನೆರವೇರಿಸಿ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಆಕ್ರಿಕಟ್ಟೆ ಇವರು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಪ್ರತಿಜ್ಞಾ...
ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕ ಮತ್ತು ಪಂಚಶ್ರೀ ಯುವಕ ಮಂಡಲ(ರಿ) ಪಂಬೆತ್ತಾಡಿ, ಇದರ ಸದಸ್ಯರಾದ ಶ್ರೀನಿವಾಸ ಮತ್ತು ತೀರ್ಥೇಶ್ ರವರು ವೇಷ ಧರಿಸಿ ಊರ ಮತ್ತು ಪರವೂರ ದಾನಿಗಳ ಸಹಕಾರದೊಂದಿಗೆ ಒಟ್ಟು ರೂಪಾಯಿ 58,000/- ವನ್ನು ಸಂಗ್ರಹಿಸಿ ಕುಮಾರಿ ಸಮೀಕ್ಷಾಳ ಹೆತ್ತವರ ಸಮ್ಮುಖದಲ್ಲಿ ಹಸ್ತಾಂತರ ಮಾಡಿದರು . ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ...
ಚೊಕ್ಕಾಡಿ ಪ್ರೌಢಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ ಕುಕ್ಕುಜಡ್ಕದಲ್ಲಿ ಅಕ್ಟೋಬರ್ 2ರಂದು ಗಾಂಧೀ ಜಯಂತಿಯನ್ನು ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿಯವರು ಹಾಗೂ ಆಂಗ್ಲಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಚೈತ್ರಾ ಅವರು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಅನಂತರ ಗಾಂಧೀಜಿಯವರ ಮೆಚ್ಚಿನ ಗೀತೆಗಳನ್ನು ಹಾಡಲಾಯಿತು. ಶಿಕ್ಷಕರಾದ ಹರಿಪ್ರಸಾದ್ ಅವರು ಸ್ವಚ್ಛತೆ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಿದರು....
ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 04 ಮಂಗಳವಾರದಂದು ಆಯುಧ ಪೂಜೆ ಆಚರಿಸಲಾಗುವುದು. ಬೆಳಿಗ್ಗೆ 8:30 ಕ್ಕೆ ತೆನೆ ಕಟ್ಟುವುದು ಮತ್ತು ಮದ್ಯಾಹ್ನ ಹೊಸ್ತರೋಗಣೆ ನಡೆಯಲಿದೆ. ಹಾಗೂ ರಾತ್ರಿ 7:00 ಗಂಟೆಗೆ ದುರ್ಗಾಪೂಜೆ ಜರಗಲಿರುವುದು.ಬೆಳಿಗ್ಗೆ 8:30 ಕ್ಕೆ ಭಕ್ತಾದಿಗಳಿಗೆ ತೆನೆ ಹಂಚುವುದು.ಆಯುಧ ಪೂಜೆಯು ಬೆಳಿಗ್ಗೆಯಿಂದ ಮದ್ಯಾಹ್ನ ತನಕ ಹಾಗೂ ಸಾಯಂಕಾಲ ನಡೆಯಲಿದೆ.ವರದಿ :- ಉಲ್ಲಾಸ್...
ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಗುರುರಾಜ್ ನಿಡುಬೆಯವರ ಮಾಲಕತ್ವದ ಕೃಷಿ ಯಂತ್ರೋಪಕರಣಗಳ ಮಳಿಗೆ ಪಂಚಶ್ರೀ ಆಗ್ರೋಟೆಕ್ ಅ.02 ರಂದು ಶುಭಾರಂಭಗೊಂಡಿತು. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ .ಮನ್ಮಥ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅಚ್ಚುತ ಗೌಡ ಕುದುಂಗು, ಜೆ.ಟಿ.ವೆಂಕಪ್ಪ ಗೌಡ ಜಬಳೆ,ಕಟ್ಟಡದ ಮಾಲಕರಾದ ಸತೀಶ...
ಗಾಂಧಿನಗರದ ಶುಭಶ್ರೀ ಮಹಿಳಾ ಮಂಡಲ ಹಾಗೂ ಇನ್ನರ್ ವೀಲ್ ಕ್ಲಬ್, ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಲೀಲಾದಾಮೋದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಶಿಕ್ಷಕರಿಗೆ ಕೊಡಮಾಡುವ "ಉತ್ತಮ ಶಿಕ್ಷಕ ಪ್ರಶಸ್ತಿ" ಸನ್ಮಾನ ನೆರವೇರಿಸಿದರು. ಶಿಕ್ಷಕ ವೃತ್ತಿ ಸಮಾಜದಲ್ಲಿ ಒಂದು ಗೌರವಯುತ ಸ್ಥಾನವನ್ನು...
ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭಾ ಕಾರ್ಯಕ್ರಮವು ಸೆ.18 ರಂದು ದ್ವಾರಕಾ ಸಭಾ ಭವನದಲ್ಲಿ ನಡೆಯಿತು.ಸಂಘದ ಮಹಾ ಸಭೆಯ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಮಹಾಲಿಂಗನ್ ಬಾಜಿರ್ತೊಟ್ಟಿ, ಶಂಕರ ಪಾಟಾಳಿ ಪರಿವಾರಕಾನ ಅವರು ಮುಖ್ಯ ಅತಿಥಿಗಳಾಗಿದ್ದರು. ವಾರ್ಷಿಕ ಲೆಕ್ಕ ಪತ್ರವನ್ನು ಸಂಘದ ಖಜಾಂಜಿ...
ಗಾಂಧಿ ಜಯಂತಿಯ ಅಂಗವಾಗಿ ಇಂದು ಬೆಳ್ಳಾರೆ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ "ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು,...
Loading posts...
All posts loaded
No more posts
