- Wednesday
- July 29th, 2026
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
ಅಡ್ಕಾರಿನ ನಡುವಡ್ಕ ಎಂಬಲ್ಲಿ ಕಾರು ಮತ್ತು ರಿಕ್ಷಾ ಡಿಕ್ಕಿಯಾದ ಘಟನೆ ಜು.17ರಂದು ಸಂಭವಿಸಿದೆ. ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಜುಲೈ 17 ಹಾಗೂ 18 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಪರಿಣಾಮವಾಗಿ ಭೂಕುಸಿತ ಸಂಭವಿಸುವ ಸಾಧ್ಯತೆ ಎದುರಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ(IMD) ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. (ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯ ವಲಯಾರಣ್ಯಾಧಿಕಾರಿ ಮಂಜುನಾಥ್.ಎನ್ ಹಾಗೂ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ವಿಮಲ್ ಬಾಬು ಕುಶಾಲನಗರ ಅರಣ್ಯ ತರಬೇತಿ ಕೇಂದ್ರದ ವಲಯಾರಣ್ಯಾಧಿಕಾರಿಗಳಾಗಿ ವರ್ಗಾವಣೆಗೊಂಡಿದ್ದಾರೆ. ಮಂಜುನಾಥ್ ಅವರ ಸ್ಥಾನಕ್ಕೆ ಹನೂರು ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ನಿರಂಜನ್ ಶೆಟ್ಟಿ ಆಗಮಿಸಲಿದ್ದಾರೆ. ವಿಮಲ್ ಬಾಬು ಅವರ ಸ್ಥಾನಕ್ಕೆ ಕುದುರೆಮುಖ ವನ್ಯಜೀವಿ ವಿಭಾಗದ ವಲಯಾರಣ್ಯಾಧಿಕಾರಿ ಚೇತನ್ ಹೆಚ್.ಪಿ ಆಗಮಿಸಲಿದ್ದಾರೆ.
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 17 ಜುಲೈ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಸುಳ್ಯದ ಜನಪ್ರಿಯ ವಸ್ತ್ರ ಮಳಿಗೆ ಕುಂಕುಂ ಇಂಟರ್ನ್ಯಾಷನಲ್ ನಲ್ಲಿ ಗ್ರಾಹಕರಿಗಾಗಿ 'ಮೆಗಾ ಮಾನ್ಸೂನ್ ಸೇಲ್' ಆರಂಭಗೊಂಡಿದೆ.ಮಾನ್ಸೂನ್ ವಿಶೇಷ ಕೊಡುಗೆಯ ಅಂಗವಾಗಿ ಮದುವೆ ಸಂಗ್ರಹ (Wedding Collection) ಸೇರಿದಂತೆ ಆಯ್ದ ವಸ್ತ್ರಗಳ ಮೇಲೆ ಶೇ. 50ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ, ಮಳೆಗಾಲದ ರೇನ್ಕೋಟ್ ಮತ್ತು ಅಂಬ್ರೆಲಾ ಖರೀದಿಗೆ ಶೇ. 30ರವರೆಗೆ ವಿಶೇಷ ರಿಯಾಯಿತಿ ಘೋಷಿಸಲಾಗಿದೆ.ಮಾನ್ಸೂನ್ ಸೇಲ್ ಅಂಗವಾಗಿ...
ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಗೌತಮಿ ದೇರಾಜೆ BRAVYNEX ENGINEERING LLPಗೆ ಆಯ್ಕೆಯಾಗಿರುತ್ತಾರೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ., ಸೆಕ್ರೆಟರಿ, ಎ.ಒ.ಎಲ್.ಇ.(ರಿ) ಕಮಿಟಿ ‘ಬಿ’ ಡಾ. ಜ್ಯೋತಿ ಆರ್. ಪ್ರಸಾದ್, ಡೈರೆಕ್ಟರ್ ಎ.ಒ.ಎಲ್.ಇ.(ರಿ) ಕಮಿಟಿ ‘ಬಿ’ ಡಾ....
ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಮನೆ ಮತ್ತು ಶಾಲೆ ಎರಡು ಸಮಾನ ಪಾಲುದಾರರು. ಪೋಷಕರ ಪ್ರೋತ್ಸಾಹ ಶಿಕ್ಷಕರ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಪರಿಶ್ರಮ ಒಂದಾದಾಗ ಮಾತ್ರ ಗುಣಮಟ್ಟದ ಶಿಕ್ಷಣ ಸಾಧ್ಯವಾಗುತ್ತದೆ. ಶಿಕ್ಷಕರ ಹಾಗೂ ಪೋಷಕರ ಧನಾತ್ಮಕ ನಡವಳಿಕೆಗಳು ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಪೋಷಕರು ಮಕ್ಕಳೊಂದಿಗೆ ಧನಾತ್ಮಕ ಮನೋಭಾವದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಬೇಕು. ಆ ಮೂಲಕ ಮಕ್ಕಳನ್ನು ಅರ್ಥ ಮಾಡಿಕೊಂಡು...
ಸುಳ್ಯ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅವಿನ್ ರಂಗತ್ತಮಲೆ ಅವರು ಉಪತಹಶೀಲ್ದಾರ್ ಆಗಿ ಭಡ್ತಿ ಹೊಂದಿದ್ದು, ಸುಳ್ಯದಲ್ಲಿಯೇ ತಮ್ಮ ಸೇವೆಯನ್ನು ಮುಂದುವರಿಸಲಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸರ್ಕಾರಿ ಸೇವೆಯನ್ನು ಆರಂಭಿಸಿದ್ದರು. ಗ್ರಾಮ ಆಡಳಿತಾಧಿಕಾರಿಯಾಗಿ ಮರ್ಕಂಜ ಗ್ರಾಮಕ್ಕೆ ನೇಮಕಗೊಂಡ ಬಳಿಕ ಅಜ್ಜಾವರ, ಮಂಡೆಕೋಲು, ಉಬರಡ್ಕಮಿತ್ತೂರು ಹಾಗೂ ಜಾಲ್ಸೂರು ಗ್ರಾಮಗಳಲ್ಲಿ ವಿವಿಧ ಹಂತಗಳಲ್ಲಿ ಸೇವೆ...
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಪಿಎಚ್.ಡಿ ಸಂಶೋಧಕ ವಿದ್ಯಾರ್ಥಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಬ್ಯಾಂಕ್ ಆಫ್ ಬರೋಡದ ಉದ್ಯೋಗಿ ಪೆರ್ಲಂಪಾಡಿಯ ಭರತೇಶ ಅಲಸಂಡೆಮಜಲು ಅವರು ಜುಲೈ ತಿಂಗಳ 20ರಿಂದ 26ರವರೆಗೆ ಫ್ರಾನ್ಸ್ನ ಪ್ಯಾರಿಸ್ನಲ್ಲಿ ನಡೆಯಲಿರುವ ಜಾಗತಿಕ ಮಟ್ಟದ “ವಿಕಿಮೇನಿಯಾ 2026” ಅಂತರರಾಷ್ಟ್ರೀಯ ಸಮ್ಮೇಳನಕ್ಕೆ...
Loading posts...
All posts loaded
No more posts
