- Wednesday
- August 19th, 2026
ಆಕಸ್ಮಿಕವಾಗಿ ಮನೆಗೆ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿ ಜೀವಂತ ದಹನವಾಗಿದ ಘಟನೆಯೊಂದು ಇಂದು ಬೆಳಿಗ್ಗೆ ಐವರ್ನಾಡಿನ ಪರ್ಲಿಕಜೆ ಎಂಬಲ್ಲಿ ಸಂಭವಿಸಿದೆ. ಸುಧಾಕರ ಎಂಬವರು ಅನಾರೋಗ್ಯದಿಂದಿದ್ದು ಮನೆಯಲ್ಲಿ ಮಲಗಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಮನೆಯ ಒಂದು ಭಾಗ ಸುಟ್ಟು ಹೋಗಿದೆ. ಮನೆಯೊಳಗಿದ್ದ ಸುಧಾಕರ ಅವರಿಗೆ ಹೊರಹೋಗಲಾಗದೇ ಬೆಂಕಿಗೆ ಆಹುತಿಯಾಗಿದ್ದಾರೆನ್ನಲಾಗಿದೆ. ಈ...
ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಹಾಗೂ ಪಡಿಬಾಗಿಲು ವಿದ್ಯಾರ್ಥಿಗಳಿಂದ ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ಸಿಂಹ ಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಸಂಗೀತೋತ್ಸವ ಮತ್ತು ಪುರಸ್ಕಾರ, ಸನ್ಮಾನ ಪ್ರಶಸ್ತಿ ಪ್ರಧಾನ ಸಮಾರಂಭವು ವಿಟ್ಲ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಶ್ರೀಯುತ ವಿದ್ವಾನ್ ಡಾಕ್ಟರ್ ವಿ.ಆರ್ ನಾರಾಯಣ್ ಪ್ರಕಾಶ್ ಕ್ಯಾಲಿಕೆಟ್ ರವರು ಸಮಾರಂಭವನ್ನು...
ಸೆ.13 ರಂದು ಜಯನಗರ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಕಬ್ಬಡಿ ಪಂದ್ಯಾಟ ನಡೆಯಲಿದ್ದು, 14 ವರ್ಷ ವಯೋಮಿತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಆಯ್ಕೆ ಪಂದ್ಯಾಟ ಕೂಡ ಸೆ.13 ರಂದು ನಡೆಯಲಿದೆ. ಬೆಳಿಗ್ಗೆ 9:30 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ 4:30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ....
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಶಾಲಾ ಸಂಸತ್ತು, ವಿದ್ಯಾರ್ಥಿಗಳ ಶಿಕ್ಷಕರ ಸಹಭಾಗಿತ್ವದೊಂದಿಗೆ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಸ್ವಾಗತ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪಾರೆಪಾಡಿ ಇವರು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು, ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕರನ್ನು ಹೂಗುಚ್ಛ ಹಾಗೂ ಕಿರು ಕಾಣಿಕೆಯನ್ನು ನೀಡಿ ಸನ್ಮಾನಿಸಿದರು....
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 06/09/2022 ರಂದು ನಡೆಯುವ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಖೋ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ,ತಂಡದಲ್ಲಿ ಲೊಕೇಶ್.ಎನ್, ಸಿಂಚನ್.ಬಿ.ಎಸ್,ರತನ್.ಪಿ.ಎಸ್, ವಿನೋದ್.ಸಿ,ಸುಪ್ರಿತ್,ಗೋಪಿ,...
ಜಬಳೆ ಪೈಲಾರು ರಸ್ತೆಯ ಕೋಡ್ತುಗುಳಿ ಎಂಬಲ್ಲಿ ಸೇತುವೆ ಕೆಲಸ ಅರ್ಧದಲ್ಲಿದ್ದು, ಜನರ ಓಡಾಟಕ್ಕೆ, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹಾಗೂ ಅನಾರೋಗ್ಯ ಅಥವಾ ಇನ್ನಿತರ ಸಮಸ್ಯೆ ಉಂಟಾದಲ್ಲಿ ಸುತ್ತು ಬಳಸಿ ಬರಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ಸೇತುವೆಯು ಸೆ.05 ರಂದು ಸುರಿದ ಮಳೆಗೆ ಕೊಚ್ಚಿ ಹೋಗಿದ್ದು, ಸೆ.06 ರಂದು ದೊಡ್ಡತೋಟ ವಲಯದ ಶೌರ್ಯ ವಿಪತ್ತು ನಿರ್ವಹಣಾ...
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ಬಿ.ಯಂ.ಯಸ್ ಸಂಯೋಜಿತ) ಕಲ್ಲುಗುಂಡಿ ಘಟಕ ಇದರ ವಾರ್ಷಿಕ ಮಹಾಸಭೆಯು ಇಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ಬಿ.ಯಂ.ಯಸ್ ಅಧ್ಯಕ್ಷರಾದ ರಾಧಾಕೃಷ್ಣ ಬೈತಡ್ಕ ಹಾಗೂ ಕಾರ್ಯದರ್ಶಿಯಾದ ಚಂದ್ರಶೇಖರ ಮರ್ಕಂಜ ಹಾಗೂ ಕಲ್ಲುಗುಂಡಿ ಬಿ.ಯಂ.ಯಸ್ ಘಟಕದ ಅಧ್ಯಕ್ಷರಾದ ವಸಂತ ಊರುಬೈಲ್ ಇವರ ನೇತೃತ್ವದಲ್ಲಿ ಕಲ್ಲುಗುಂಡಿ ಘಟಕದ...
ಐನೆಕಿದು ಗ್ರಾಮದ ಬಾಲಚಂದ್ರ ಗೌಡ ಕೂಜುಗೋಡು ಅವರು ಸೆ.5 ರ ಸಂಜೆ 6:30 ರ ಸುಮಾರಿಗೆ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರರು, ಸಹೋದರಿಯರು, ಒಬ್ಬ ಸಹೋದರ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
ರೂ.50 ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಜಟ್ಟಿಪಳ್ಳ-ಕೊಡಿಯಾಲಬೈಲು-ದುಗ್ಗಲಡ್ಕ ರಸ್ತೆ ಕಾಮಗಾರಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 06/09/2022 ರಂದು ನಡೆಯುವ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ...
Loading posts...
All posts loaded
No more posts
