Ad Widget

ಶತಮಾನ ಕಂಡ ಗುತ್ತಿಗಾರು ಶಾಲೆಗೆ ಮೂಲ ಸೌಕರ್ಯ ಅಭಿವೃದ್ಧಿಗೆ 16.50 ಲಕ್ಷ ಅನುದಾನ ಬಿಡುಗಡೆ

ಶತಮಾನ ಕಂಡ ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ ಸರಕಾರದಿಂದ ವಿಶೇಷ ಅನುದಾನ ಘೋಷಣೆಯಾಗಿದ್ದು ಗುತ್ತಿಗಾರಿನ ಸ.ಮಾ.ಹಿ. ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಶತಮಾನ ಕಂಡ ತಾಲೂಕಿನ ಆಯ್ದ ಒಂದು ಶಾಲೆಗೆ ಈ ಅನುದಾನ ಮಂಜೂರಾಗಿದ್ದು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರೂ 16.50 ಲಕ್ಷ ಅನುದಾನ ಸಿಗಲಿದೆ.

ಕುಕ್ಕೆಸುಬ್ರಹ್ಮಣ್ಯ: ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯ ಇದರ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮವು ಇಂದು ಬೆಳಗ್ಗೆ 9.45 ಕ್ಕೆ ಸರಿಯಾಗಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಹರಿಕೃಷ್ಣ ಇವರು ಬೌದ್ಧಿಕ್ ನೆರವೇರಿಸಿದರು. ಅಧ್ಯಕ್ಷರಾಗಿ ಸೋಮಶೇಖರ್ ನಾಯಕ್ ಮತ್ತು ನಗರ ಕಾರ್ಯದರ್ಶಿ ಇಲೈ ಅರಸ್ ನವರು ಉಪಸ್ಥಿತರಿದ್ದರು....
Ad Widget

ಸಚಿವ ಅಂಗಾರರಿಂದ ಕೊಲ್ಲಮೊಗ್ರು – ಮಾವಿನಕಟ್ಟೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಕೊಲ್ಲಮೊಗ್ರು - ಕಟ್ಟ -ಮಾವಿನಕಟ್ಟೆ ಸಂಪರ್ಕ ರಸ್ತೆಯನ್ನು ವಿಶೇಷ ಅನುದಾನ ತರಿಸಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಡಿಯಲ್ಲಿ 5.25 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಂಕ್ರೀಟೀಕರಣದ ಮೂಲಕ ಈ ಭಾಗದ ಜನರ ಬಹುವರ್ಷದ ಬೇಡಿಕೆಗೆ ಸ್ಪಂದಿಸಿ ಜ.12 ರಂದು ಕಟ್ಟ ಗೋವಿಂದನಗರದಲ್ಲಿ ಗುದ್ದಲಿ ಪೂಜೆ...

ಜ.13-16 : ಹಲ್ಗುಜಿ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ- ನೇಮೋತ್ಸವ

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ದೇವಸ್ಥಾನದ ಜೀರ್ಣೋದ್ಧಾರಗೊಂಡು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿ ನಿಂತಿದೆ. ಜ.15 ನೇ ಶನಿವಾರ ದಿವಾ ಗಂಟೆ 10-31ರ ಮೀನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಶಿರಾಡಿ ದೈವ ಪುನರ್ ಪ್ರತಿಷ್ಠ ಕಲಾಶಾಭಿಷೇಕ ಪರಿವಾರ ದೈವಗಳ ಹಾಗೂ ದೈವಗಳ ನೇಮೋತ್ಸವವು...

ಎಣ್ಮೂರು : ಗೋಡೆ ಕುಸಿದು ಮೃತಪಟ್ಟ ಕುಟುಂಬಕ್ಕೆ ಅಲ್ಪಸಂಖ್ಯಾತರ ಸೊಸೈಟಿ ವತಿಯಿಂದ ಧನಸಹಾಯ

ಎಣ್ಮೂರು ಗ್ರಾಮದ ನರ್ಲಡ್ಕ ಎಂಬಲ್ಲಿ ಡಿ. 19ರಂದು ಶೌಚಾಲಯದ ಗೋಡೆ ಕುಸಿದು ಮೃತಪಟ್ಟ ಅಮೀನ ಹಾಗೂ ನಬೀಸ ರವರ ಮನೆಗೆ ಇಂದು ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರ ತಂಡ ಇಂದು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಂಘದ ಸಹಾಯನಿಧಿ ವತಿಯಿಂದ ಮೃತರಾದ ಎರಡು...

ಪೆರುವಾಜೆ : ಗೊನೆ ಮುಹೂರ್ತ – ಜ.16ರಿಂದ ಜ.21ರವರೆಗೆ ಜಾತ್ರೆ

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ಜ. 16ರಿಂದ ಜ.21ರವರೆಗೆ ಜಾತ್ರೆ ಮಹೋತ್ಸವ ನಡೆಯಲಿದೆ. ಆ ಪ್ರಯುಕ್ತ ಗೊನೆ ಮುಹೂರ್ತ ಜ.10 ರಂದು ನೆರವೇರಿತು. ಪೂಜಾ ಕಾರ್ಯಕ್ರಮವನ್ನು ದೇವಾಲಯದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೆರೆವೆರಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಪಿ ವೆಂಕಟಕೃಷ್ಣ ರಾವ್, ಜಯಪ್ರಕಾಶ್...

ಮೆಟ್ಟಿನಡ್ಕ : ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಒಕ್ಕೂಟದಿಂದ ಶಾಲಾ ಆವರಣ ಸ್ವಚ್ಛತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೆಟ್ಟಿನಡ್ಕ ಒಕ್ಕೂಟ ,ಇದರ ಮಾಸಿಕ ಸಭೆ ಮತ್ತು ಕ್ಷೇತ್ರದ ವತಿಯಿಂದ ನಡೆಯುವ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಜ.9 ರಂದು ಕಿರಿಯ ಪ್ರಾಥಮಿಕ ಶಾಲೆ ಮೆಟ್ಟಿನಡ್ಕ ,ಇದರ ಆವರಣದ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮಾಹಿತಿ ಇರುವ ಕರಪತ್ರವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ...

ಕರ್ನಾಟಕ ಚೇತನ ಪ್ರಶಸ್ತಿ ಪಡೆದ ಕನ್ನಿಕಾ ಅಂಬೆಕಲ್ಲು

ಜ್ಞಾನಮಂದಾರ ಅಕಾಡೆಮಿ ಬೆಂಗಳೂರು, ಇಂಚರ ಸಾಂಸ್ಕೃತಿಕ ಸಂಸ್ಥೆ ಮಂಜೇಶ್ವರ ಆಶ್ರಯದಲ್ಲಿ ಸಂಸ್ಥಾಪಕ ದಿನಾಚರಣೆ 2022ರ ಅಂಗವಾಗಿ ಕರ್ನಾಟಕ ಚೇತನ ಪುರಸ್ಕಾರಕ್ಕೆ ಶಿಕ್ಷಣ ಮತ್ತು ಸಾಂಸ್ಕೃತಿಕ ಕೇಂದ್ರ ಸುಳ್ಯದ ಕನ್ನಿಕಾ ಡಿ ಅಂಬೆಕಲ್ಲು ಇವರು ಆಯ್ಕೆಯಾಗಿದ್ದಾರೆ. ಈಕೆ ಸುಳ್ಯದ ಯುವ ನ್ಯಾಯವಾದಿ‌ ಹಾಗೂ ನೋಟರಿ ದಿನೇಶ್ ಅಂಬೆಕಲ್ಲು ಮತ್ತು ಶಿಕ್ಷಕಿ ಪೂರ್ಣಿಮಾ ಮಡಪ್ಪಾಡಿ ಇವರ ಪುತ್ರಿ. ಜೂನ್...

ಉಬರಡ್ಕ : ಧರ್ಮಜಾಗೃತಿ ಸಮಿತಿಯಿಂದ ದೇವಸ್ಥಾನದ ಪರಿಸರ ಸ್ವಚ್ಛತೆ

ಉಬರಡ್ಕದ ಶ್ರೀ ನರಸಿಂಹ ಶಾಸ್ತಾವು ದೇವಸ್ಥಾನದಲ್ಲಿ ದೇವಸ್ಥಾನದ ಒಳಾಂಗಣ ಹಾಗೂ ಪರಿಸರವನ್ನು ಸುಳ್ಯ ಧರ್ಮಜಾಗೃತಿ ಸಮಿತಿ ಕಾರ್ಯಕರ್ತರು ಸ್ವಚ್ಛತೆಯನ್ನು ಮಾಡಿದರು. ಸಮಿತಿಯ 6 ಮಂದಿ ಕಾರ್ಯಕರ್ತರು, ಮತ್ತು ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡರು.

ಜ.14 ರಂದು ಮಡಪ್ಪಾಡಿಯಲ್ಲಿ ವಾಲಿಬಾಲ್ ಪಂದ್ಯಾಟ

ಜನರಲ್ ಬಿಪಿನ್ ರಾವತ್ ಹಾಗೂ ಪುನೀತ್ ರಾಜಕುಮಾರ್ ಇವರ ಸ್ಮರಣಾರ್ಥ, ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ಮಡಪ್ಪಾಡಿ ಹಾಗೂ ಯುವಕ ಮಂಡಲ (ರಿ) ಮಡಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಹ್ವಾನಿತ ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಜ.14 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇದರ ಆಟದ ಮೈದಾನದಲ್ಲಿ ನಡೆಯಲಿದೆ ಎಂದು ಸಂಘಟಕರು...
Loading posts...

All posts loaded

No more posts

error: Content is protected !!