Ad Widget

ವಳಲಂಬೆ : 25 ಲಕ್ಷದಲ್ಲಿ ನಿರ್ಮಾಣಗೊಳ್ಳುತ್ತಿರುವ ತಡೆಗೋಡೆ ಕಾಮಗಾರಿ ವೀಕ್ಷಿಸಿದ ಸಚಿವ ಎಸ್ ಅಂಗಾರ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಹರಿಯುತ್ತಿರುವ ಹೊಳೆಗೆ ಪ್ರವಾಹ ನಿಯಂತ್ರಣಕ್ಕಾಗಿ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ತಡೆಗೋಡೆ ಕಾಮಗಾರಿಯನ್ನು ಸಚಿವರಾದ ಎಸ್.ಅಂಗಾರ ವೀಕ್ಷಿಸಿದರು. ಈ ತಡೆಗೋಡೆ ನಿರ್ಮಾಣದಿಂದ ವಳಲಂಬೆ ಅಡ್ಡನಪಾರೆ ದೇವ ಸಂಪರ್ಕ ರಸ್ತೆಯು ಅಭಿವೃದ್ಧಿಯಾಗಲಿದೆ. ಈ ಸಂದರ್ಭ ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ ಉಪಸ್ಥಿತರಿದ್ದರು.

ಗುತ್ತಿಗಾರು : ಅಕ್ರಮ ಸಕ್ರಮ ಸಮಿತಿ ಸಭೆ- ಮಾಸಾಶನ ಪಲಾನುಭವಿಗಳಿಗೆ ಸಚಿವರಿಂದ ಆದೇಶ ಪತ್ರ ವಿತರಣೆ

ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಾಮಾಜಿಕ ಭದ್ರತೆ ಯೋಜನೆಯಡಿ ಮಾಸಾಶನ ಮಂಜೂರಾತಿಗೊಂಡ ಫಲಾನುಭವಿಗಳಿಗೆ ಆದೇಶ ಪತ್ರವನ್ನು ಸಚಿವರು ವಿತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ, ಅಕ್ರಮ- ಸಕ್ರಮ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸದಸ್ಯರಾದ ಬಾಳಪ್ಪ ಕಳಂಜ, ಗುಣವತಿ ಕೊಲ್ಲಂತಡ್ಕ ಉಪಸ್ಥಿತರಿದ್ದರು.
Ad Widget

ಸಂಪಾಜೆ : ಗಡಿಕಲ್ಲು- ಅಲಡ್ಕ ರಸ್ತೆ ಕಾಂಕ್ರೀಟೀಕರಣ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಾಜೆ ಅಲಡ್ಕ ರಸ್ತೆ ಕಾಂಕ್ರೀಟೀಕರಣ ಉದ್ಘಾಟನಾ ಕಾರ್ಯಕ್ರಮ ಜ.11 ರಂದು ನಡೆಯಿತು. ಉದ್ಘಾಟನೆಯನ್ನು ಸಂಪಾಜೆ ಸೊಸೈಟಿ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೊಯಿಂಗಾಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಮಹಮದ್ ಕುಂಚಿ ಗೂನಡ್ಕ, ಜಗದೀಶ್ ರೈ, ಉಮ್ಮರ್...

ಕೇನ್ಯ : ನೂತನ ಮಹಿಳಾ ಮಂಡಲ ರಚನೆ – ಅಧ್ಯಕ್ಷೆ ತಾರಾ ಬಿ.- ಕಾರ್ಯದರ್ಶಿ ಸಾತ್ವಿಕ ಪಿ.

ಕಡಬ ತಾಲೂಕು ಕೇನ್ಯ ಗ್ರಾಮದಲ್ಲಿ ನೂತನ ಮಹಿಳಾ ಮಂಡಲ ಅಸ್ತಿತ್ವಕ್ಕೆ ಬಂದಿದ್ದು ಜ.10 ರಂದು ಕೇನ್ಯದಲ್ಲಿ ನಡೆದ ವಿಶೇಷ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವ ಅಧ್ಯಕ್ಷರಾಗಿ ಶ್ರೀಮತಿ ಮಮತಾ. ಎಸ್. ಶೆಟ್ಟಿ , ಸ್ಥಾಪಕಾಧ್ಯಕ್ಷರಾಗಿ ಶ್ರೀಮತಿ ತಾರಾ. ಬಿ. ರೈ ಬಿರ್ಕಿ ಮತ್ತು ಕಾರ್ಯದರ್ಶಿಯಾಗಿ ಶ್ರೀಮತಿ ಸಾತ್ವಿಕ. ಪಿ. ನರಿಯಂಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ...

ವಳಲಂಬೆ: ಶ್ರದ್ಧಾಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ‌ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಡೆಸಲ್ಪಡುವ ಶ್ರಧ್ಧಾಕೇಂದ್ರ ಸ್ವಚ್ಚತಾ ಕಾರ್ಯಕ್ರಮದಡಿಯಲ್ಲಿ ಸ್ವಸಹಾಯ ಹಾಗೂ ಪ್ರಗತಿಬಂಧು ತಂಡದ ಸದಸ್ಯರಿಂದ ವಳಲಂಬೆಯಲ್ಲಿ ದೇವಸ್ಥಾನ ಸ್ವಚ್ಚತಾಕಾರ್ಯ ನಡೆಯಿತು. ಮುಂಬರುವ ಜಾತ್ರಾ ದಿನದ ಅಂಗವಾಗಿ ದೇವಳದ ಪರಿಸರ ಸ್ವಚ್ಚಗೊಳಿಸುವ ಕಾರ್ಯದಲ್ಲಿ ಸದಸ್ಯರು ಪಾಲ್ಗೊಂಡರು. ಗ್ರಾಮಾಭಿವೃದ್ಧಿ ವಲಯ ಮೇಲ್ವಿಚಾರಕ ಮುರಳೀದರ್, ಸೇವಾ ಪ್ರತಿನಿಧಿಗಳಾದ ಲೋಕೇಶ್ವರ ಡಿ.ಆರ್, ಹರೀಶ್ ಕುಳ್ಳಂಪಾಡಿ, ಲೋಕೇಶ್ವರಿ...

ಸೇವಾಜೆ-ಮಡಪ್ಪಾಡಿ ರಸ್ತೆ 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ – ಸಚಿವ ಅಂಗಾರರಿಂದ ಗುದ್ದಲಿಪೂಜೆ

ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೊಂಡು ರೂ. 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸೇವಾಜೆ - ಮಡಪ್ಪಾಡಿ ರಸ್ತೆಗೆ ಸಚಿವರಾದ ಎಸ್.ಅಂಗಾರ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ ,...

ಕಡಬ : ಯುವ ಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ

ಕಡಬ ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆಯಾಗಿದ್ದಾರೆ‌. ಇವರು ಕೇನ್ಯ ಗ್ರಾಮದ ಗೆಜ್ಜೆ ಮನೆ ನಿವಾಸಿಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.

ಸುಳ್ಯ : ಅಡ್ಕಾರ್ ಇಲೆಕ್ಟ್ರಾನಿಕ್ಸ್ ರಜತ ಮಹೋತ್ಸವ

ಸುಳ್ಯದಲ್ಲಿ ಇಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾದ ಶ್ರೀರಾಮ್ ಪೇಟೆಯ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನೇಶ್ ಅಡ್ಕಾರ್ ಅವರ ಮಾಲಕತ್ವದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯು 30/08/1996 ರಂದು ಪ್ರಾರಂಭಗೊಂಡು ಕಳೆದ ವರ್ಷ 2021 ರಲ್ಲಿ 25 ವರ್ಷವನ್ನು ಪೂರೈಸಿ 26 ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಸಂಭ್ರಮದಲ್ಲಿದ್ದು ಇದರ ಅಂಗವಾಗಿ 2021 ನೇಯ ವರ್ಷದಲ್ಲಿ...

ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯ ವೆಬ್ಸೈಟ್ ಬಿಡುಗಡೆ

ನೆಟ್ಟಣದ ಕಿದು ಐಸಿಎಆರ್ ಸಿಪಿಸಿಆರ್ ಐ ತೆಂಗು ಸಂಶೋಧನಾ ಕೇಂದ್ರದ 50ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ದ.ಕ.ಜಿಲ್ಲಾ ತೆಂಗು ಉತ್ಪಾದಕರ ಸಂಸ್ಥೆಯ ವೆಬ್ಸೈಟ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ವಿಟ್ಲದಲ್ಲಿ ಕೇಂದ್ರ ಕಛೇರಿ ಹೊಂದಿರುವ ದ.ಕ. ಜಿಲ್ಲೆ ಯಲ್ಲಿ ತೆಂಗು ಕೃಷಿಕರಿಗೆಂದೇ ಹುಟ್ಟಿಕೊಂಡ ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆ ಯ ಅಧಿಕೃತ...

ಏನೆಕಲ್ : ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಸ್ಪರ್ಧೆಯ ಪ್ರಶಸ್ತಿ ವಿತರಣೆ

ಕಲಾಮಾಯೆ (ರಿ) ಏನೆಕಲ್ ಸಾರಥ್ಯದಲ್ಲಿ. ಸೋಲಾರ್ ಪಾಯಿಂಟ್ ನಿಂತಿಕಲ್ ಮತ್ತು ಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಪ್ರಾಯೋಜಕತ್ವದ. ಅಮರ ಸುಳ್ಯ ಸುದ್ದಿ ಸಹಯೋಗದಲ್ಲಿ ನಡೆದ ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಸ್ಪರ್ಧೆಯಲ್ಲಿ ವಿಜೇತ ರದವರಿಗೆ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.ಪವಿತ್ರ.ಆರ್. ಸುಬ್ರಮಣ್ಯ (ಸೀನಿಯರ್ ಟಿವಿ ಸ್ಟಾರ್ ಆಫ್ ಹಾಡು ಬಾ ಕನಸು )ಜೂನಿಯರ್...
Loading posts...

All posts loaded

No more posts

error: Content is protected !!