- Tuesday
- August 18th, 2026
ದೊಡ್ಡತೋಟ ಭಜನಾ ಮಂದಿರದ ವಠಾರದಲ್ಲಿ ಆ.21ರಂದು ಶ್ರೀ ರಾಮ ಭಜನಾ ಮಂದಿರದ ವತಿಯಿಂದ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಮುಂಜಾನೆ ಮಂದಿರದಲ್ಲಿ ಗಣಹೋಮ ನಡೆಯಿತು. ನಂತರ 5 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ನಡೆಸಲಾಯಿತು ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದು, ಸಂಜೆ 5 ಗಂಟೆಗೆ ಬಹುಮಾನ ವಿತರಣೆ...
ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ(ರಿ)ಮಡಪ್ಪಾಡಿ,ಶ್ರೀ ರಾಮ ಭಜನಾಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ, ಶಾಲಾಭಿವೃದ್ಧಿ ಸಮಿತಿ ಮಡಪ್ಪಾಡಿ ಹಾಗೂ ಸಮಸ್ತ ಗ್ರಾಮಸ್ಥರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಧನ್ಯಕುಮಾರ್ ದೇರುಮಜಲು ಅಧ್ಯಕ್ಷತೆ...
ಸುಳ್ಯ ತಾಲೂಕಿನ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಅಗೋಸ್ಟ್ 22ರಂದು ಸಂಘದ ಸಮನ್ವಯ ಸಭಾಂಗಣದಲ್ಲಿ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.ಸಂಘವು ವರದಿ ವರ್ಷದಲ್ಲಿ 93.66 ಕೋಟಿ ವ್ಯವಹಾರ ಮಾಡಿ ರೂ.4001879.43 ದಾಖಲೆಯ ನಿವ್ವಳ ಲಾಭಗಳಿಸಿರುತ್ತದೆ. 97.38% ರಷ್ಟು ಸಾಲ ವಸೂಲಾತಿ ಮಾಡಿದ್ದು, ಆಡಿಟ್ ವರ್ಗದಲ್ಲಿ...
ಗೂನಡ್ಕ ಶ್ರೀ ಕೃಷ್ಣ ಗೆಳೆಯರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಗೂನಡ್ಕ ಶ್ರೀ ಶಾರದ ಶಾಲೆಯ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ಜರುಗಿದವು. ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್ ರವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಿದರು . ಈ ಸಂಧರ್ಭದಲ್ಲಿ...
ಶಿಕ್ಷಣ ಕ್ರಾಂತಿಯ ಹರಿಕಾರ, ಆಧುನಿಕ ಸುಳ್ಯದ ನಿರ್ಮಾತೃ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಸ್ಥಾಪಕಾಧ್ಯಕ್ಷರಾದ ಡಾ ಕುರುಂಜಿ ವೆಂಕಟರಮಣ ಗೌಡರ ಧರ್ಮಪತ್ನಿ ದಿ. ಜಾನಕಿ ವೆಂಕಟರಮಣ ಗೌಡರ 10ನೇ ಪುಣ್ಯತಿಥಿ ಕಾರ್ಯಕ್ರಮವು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದರು ದೀಪ ಬೆಳಗಿ ಪುಷ್ಪಾರ್ಚನೆ...
ಜಯನಗರ ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಶ್ರೀ ಕೊರಗಜ್ಜನ ದೈವಸ್ಥಾನದ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನಗಳ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನ ಕೊರಂಬಡ್ಕ ಇದರ ಆಡಳಿತ ಸಮಿತಿ ಅಧ್ಯಕ್ಷ ಕೇಶವ ಸಿ.ಎ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಮಡಿಕೇರಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಗೂನಡ್ಕ ಜುಮ್ಮಾ ಮಸೀದಿ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಘಟನೆ ಕಳೆದ ರಾತ್ರಿ ನಡೆದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಬೊಳುಬೈಲು ಸಮೀಪ ಮಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಘಟನೆ ಕಳೆದ ರಾತ್ರಿ ನಡೆದಿದೆ. ಗಾಂಧಿನಗರದ ಅಶ್ರಫ್ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆನ್ನಲಾಗಿದೆ.
ಮಾಜಿ ಪ್ರಧಾನಿ, ಭಾರತರತ್ನ ದಿ. ರಾಜೀವ್ ಗಾಂಧಿಯವರ ಜನ್ಮದಿನಾಚರಣೆ ಆ.20ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್ ಮಾತನಾಡಿ ರಾಜೀವ್ ಗಾಂಧಿಯವರು 80ರ ದಶಕದಲ್ಲಿ ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಅಡಿಪಾಯ ಹಾಕಿದರು. ಇಂದು ದೇಶ ವಿಶ್ವದಲ್ಲೇ ಐ ಟಿ ಕ್ಷೇತ್ರದ ದಿಗ್ಗಜ ಎನಿಸಿಕೊಳ್ಳಲು...
Loading posts...
All posts loaded
No more posts
