- Saturday
- August 1st, 2026
ಸುಳ್ಯ ತಾಲೂಕಿನ ಗುತ್ತಿಗಾರು, ನಡುಗಲ್ಲು, ಹರಿಹರ ಪಳ್ಳತ್ತಡ್ಕ, ಬಾಳುಗೋಡು, ಕೊಲ್ಲಮೊಗ್ರು, ಕಲ್ಮಕಾರು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ, ಐನೆಕಿದು ಸೇರಿದಂತೆ ಉಭಯ ತಾಲೂಕುಗಳ ಹಲವು ಕಡೆಗಳಲ್ಲಿ ಇಂದು(ಮಾ.31) ಸಂಜೆಯ ವೇಳೆಗೆ ಗಂಟೆಗಳ ಕಾಲ ಗುಡುಗು-ಸಿಡಿಲು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಕುಕ್ಕೆ ಸುಬ್ರಹ್ಮಣ್ಯ...
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ರಬ್ಬರ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಬೇಡಿಕೆಗಳನ್ನು ಇತ್ಯರ್ಥಪಡಿಸದೆ ಇರುವ ಬಗ್ಗೆ ಎ. 01ರಿಂದ ಕೆ ಎಫ್ ಡಿ ಸಿ ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಎದುರು ಅನಿರ್ಧಷ್ಟಾವಧಿ ಪ್ರತಿಭಟನಾ ಹೋರಾಟ ಮತ್ತು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿರುವ ಕೆ ಎಫ್ ಡಿ ಸಿ ಕಾರ್ಮಿಕ ಸಂಘಟನೆಗಳು ಸುಳ್ಯ...
ಕಲ್ಮಕಾರು ಗ್ರಾಮದ ಯಶವಂತ್ ನಿಡುಬೆ ಅವರು ಭಾರತೀಯ ಭೂಸೇನೆಯಲ್ಲಿ 25 ವರ್ಷಗಳ ಕಾಲ ದೇಶಸೇವೆ ಸಲ್ಲಿಸಿ ಇಂದು ಸೇವಾ ನಿವೃತ್ತರಾದರು. 2002 ರಲ್ಲಿ ಮಂಗಳೂರಿನಲ್ಲಿ ನಡೆದ ಸೇನಾ ನೇಮಕಾತಿಯಲ್ಲಿ ಆಯ್ಕೆಗೊಂಡು ಹೈದರಾಬಾದ್ ನಲ್ಲಿ ತರೆಬೇತಿ ಪಡೆದರು. ಸಿಯಾಚಿನ್ ಗ್ಲಾಸಿಯರ್ ನಲ್ಲಿ ವೃತ್ತಿ ಆರಂಭಿಸಿ, ಟಾಟಾ ನಗರ್, ಅಕ್ನೂರ್ ಸೆಕ್ಟರ್, ಪ್ರಯಾಗ್ ರಾಜ್, ಲಡಾಕ್, ಜಾನ್ಸಿ, ಬರೇಲಿ,...
ಕಲ್ಲುಗುಂಡಿಯ ಅಮ್ಮನ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಮಾ.31 ರಂದು ಅವಿರೋಧವಾಗಿ ನಡೆಯಿತು. ನೂತನ ಅಧ್ಯಕ್ಷರಾಗಿ ಸುನಿಲ್ ಕುಮಾರ್ ಎನ್.ನೆಲ್ಲಿಕುಮೇರಿ, ಉಪಾಧ್ಯಕ್ಷರಾಗಿ ಶಶಿಧರ ಬಿ.ಕೆ. ಬೆಳ್ಳಾರೆ ಅವಿರೋಧವಾಗಿ ಆಯ್ಕೆಯಾದರು. ಸಂಘದ ನೂತನ ನಿರ್ದೇಶಕರಾಗಿ ಅಣ್ಣಾದೊರೆ ಅಡ್ಯಡ್ಕ, ಕೃಷ್ಣಕುಮಾರ್ ಅಡ್ಯಡ್ಕ, ಪೀಟರ್ ಪೌಲು ನೆಲ್ಲಿಕುಮೇರಿ, ಸಿರಾಜುದ್ದೀನ್ ಕಡೆಪಾಲ,ಸುನಿಲ್ ಕುಮಾರ್...
ಏ.01 ರಿಂದ ಪ್ರಾರಂಭವಾಗಲಿರುವ ಜನಗಣತಿ ದೇಶದ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯುತ್ತಿದ್ದು, ಕೋವಿಡ್ ಕಾರಣದಿಂದ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಈಗ ನಡೆಸಲಾಗುತ್ತಿದೆ.ತ್ವರಿತ ದತ್ತಾಂಶ ಸಂಗ್ರಹಣೆ : ಹಿಂದೆ ಕಾಗದದ ಪಾರ್ಮ್ಗಳನ್ನು ಸಂಗ್ರಹಿಸಿ ಅವುಗಳನ್ನು ಸ್ಕ್ಯಾನ್ ಮಾಡಿ ಫಲಿತಾಂಶ ಪ್ರಕಟಿಸಲು ವರ್ಷಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೆ ಈಗ ಡಿಜಿಟಲ್...
ಮೊದಲು ಶಿಕ್ಷಕರ ಜೀವನದಲ್ಲಿ ಚೆಲ್ಲಾಟವಾಡಿದರು. ಅಂದರೆ ಶಿಕ್ಷಕರು ಕೇವಲ ಪಾಠ ಮಾಡುವುದಲ್ಲದೆ ವಿದ್ಯಾರ್ಥಿಗಳೊಂದಿಗೆ ಬೆರೆತು ಅವರಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಅಥವಾ ಹೊರಸೆಳೆಯುವ ಕಾಯಕ ಯೋಗಿಗಳಂತೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಅಕ್ಷಯ ಪಾತ್ರೆಯಂತೆ ಕಾರ್ಯನಿರ್ವಹಿಸುವ ಅಂದ ಹಾಗೇ “ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ”.ವಿದ್ಯೆಯನ್ನು ಧಾರೆ ಎರೆಯುದರಲ್ಲಿ ಸೈ ಎನಿಸಿಕೊಂಡವರು ಗುರುಗಳು. ಅಲ್ಲದೆ ಶಿಕ್ಷಕರು ತಮ್ಮ ಪ್ರೀತಿಯ...
ಪೈಚಾರಿನಲ್ಲಿರುವ ಶ್ರೀ ವೀರಭದ್ರ ಮಾರಿಯಮ್ಮ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾರಿಯಮ್ಮ ದೇವಿಯ ಮೂರ್ತಿಗೆ ಬೆಳ್ಳಿಯ ಕವಚ ನಿರ್ಮಾಣದ ಕೆಲಸ ನಡೆಯುತ್ತಿದ್ದು, ಸುಳ್ಯದ ಗೋಕುಲ್ ದಾಸ್ ಅವರು ತಮ್ಮ ಹರಕೆಯ ಬೆಳ್ಳಿಯನ್ನು ದೇವಿ ಕ್ಷೇತ್ರದಲ್ಲಿ ಸಮರ್ಪಿಸಿದರು.ಈ ಸಂದರ್ಭದಲ್ಲಿ ಬೆಳ್ಳಿ ಸಮರ್ಪಣೆಗೆ ಗೋಕುಲ್ ದಾಸ್ ಅವರು ಚಾಲನೆ ನೀಡಿದರು.
ಬಂಟ್ವಾಳ : “ಸಾಹಿತ್ಯವು ನಿರಂತರ ಸ್ಥಿತ್ಯಂತರಗಳ ಪಯಣವಾಗಿದ್ದು, ಇಲ್ಲಿನ ಸಾಹಿತ್ಯ ಕೇವಲ ಪುಸ್ತಕದಲ್ಲಿ ಉಳಿಯದೆ, ಜನಪದ, ಯಕ್ಷಗಾನದ ಮೂಲಕ ಜನಜೀವನದಲ್ಲಿ ಬೆರೆತುಹೋಗಿದೆ” ಎಂದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಕುರುಂಜಿ ಹೇಳಿದರು. ಬಂಟ್ವಾಳದಲ್ಲಿ ನಡೆದ ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಸಾಹಿತ್ಯ-ಸಂಸ್ಕೃತಿ ವಿಚಾರಗೋಷ್ಠಿಯಲ್ಲಿ "ಸಾಹಿತ್ಯದ ಸ್ಥಿತ್ಯಂತರಗಳು" ಎಂಬ ವಿಚಾರದ ಕುರಿತು...
ಪೆರುವಾಜೆ : ಸುಳ್ಯ, ಪುತ್ತೂರು, ಕಡಬ ತಾಲೂಕಿನ ಇಪ್ಪತ್ತೆರಡು ಗ್ರಾಮಗಳಿಗೆ ಒಳಪಟ್ಟಿರುವ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಎ.10 ಮತ್ತು 11 ರಂದು ಪ್ರತಿಷ್ಠಾ ವರ್ಧಂತಿ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ, ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ವ್ಯವಸ್ಥಿತ ರೀತಿಯಲ್ಲಿ ಕಾರ್ಯಕ್ರಮ ನಡೆಸುವ ನಿಟ್ಟಿನಲ್ಲಿ ಭಕ್ತಾದಿಗಳ ಸಭೆಯು...
Loading posts...
All posts loaded
No more posts
