- Monday
- August 17th, 2026
ಸುಬ್ರಹ್ಮಣ್ಯದಲ್ಲಿ ಆ.1 ರಂದು ಸಂಜೆಯಿಂದ ಸುರಿದ ಮಳೆಯಿಂದ ಕುಮಾರಧಾರ ಸಮೀಪದ ಏನೆಕಲ್ಲು ತೆರಳುವ ರಸ್ತೆಯ ಪರ್ವತಮುಖಿ ಎಂಬಲ್ಲಿ ಗುಡ್ಡ ಜರಿದು ಮನೆ ಕುಸಿತವಾಗಿ ಇಬ್ಬರು ಬಾಲಕಿಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ರಾತ್ರಿ ಸುಮಾರು 7.30ರ ವೇಳೆಗೆ ಕುಸಿತ ಸಂಭವಿಸಿತ್ತು. ಮಣ್ಣಿನಡಿಗೆ ಇಬ್ಬರು ಮಕ್ಕಳು ಸಿಲುಕಿರುವುದು ಗೊತ್ತಾಗಿ ರಾತ್ರಿ 10.30ರ ವರೆಗೆ ಕಾರ್ಯಚರಣೆ...
ಆ.01 ರಂದು ಸುರಿದ ಭಾರಿ ಮಳೆಗೆ ಸುಳ್ಯ ತಾಲೂಕಿನ ಕಲ್ಮಕಾರು, ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ತತ್ತರಿಸಿದೆ.ಕಲ್ಮಕಾರಿನ ಪೇಟೆಯ ಬಳಿ ಇರುವ ಸಂತಡ್ಕ ಬೈಲು, ಗುಳಿಕ್ಕಾನ ಸೇರಿದಂತೆ ಹಲವು ಪ್ರದೇಶಗಳ ಸುಮಾರು 150 ಕ್ಕೂ ಹೆಚ್ಚಿನ ಮನೆಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯ ಒಂದು ಭಾಗ ಸೋಮವಾರ ತಡರಾತ್ರಿ ಕೊಚ್ಚಿ ಹೋಗಿ ಅಲ್ಲಿನ...
ಮನೆ ಮೇಲೆ ಗುಡ್ಡ ಜರಿದು ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿರುವ ಘಟನೆ ಸುಬ್ರಹ್ಮಣ್ಯದ ಕುಮಾರಧಾರ ಸಮೀಪ ನಡೆದಿದೆ. ಕುಸುಮಾಧರ ಎಂಬವರ ಮನೆ ಕುಸಿತವಾಗಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣುಪಾಲಾಗಿದ್ದಾರೆ. ಸದ್ಯ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು, ಜೆಸಿಬಿ ತರಿಸಿ ಮೃತದೇಹಗಳನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ. ಆದರೆ ಕುಮಾರಧಾರದಿಂದ ಪಂಜ ಕಡೆಗೆ ಹೋಗುವ ರಸ್ತೆ...
ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತಾ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಿಕೊಡಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ನೆರೆ ಸಂದರ್ಭ ಸಾರ್ವಜನಿಕರು...
"ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ" ಈ ವಿಷಯವನ್ನು ಆಧರಿಸಿ ಕರ್ನಾಟಕ ಅಂತರ್ ವಿಶ್ವವಿದ್ಯಾನಿಲಯಗಳ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯು ಆ.7 ಮತ್ತು 8 ರಂದು ಮಂಗಳೂರು ವಿ.ವಿ.ಯ ಆಶ್ರಯದಲ್ಲಿ, ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ರಾಜ್ಯದ ಸುಮಾರು 60 ಕ್ಕಿಂತಲೂ ಹೆಚ್ಚು ನಾಟಕ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ.
ನಿನ್ನೆಯ ಬಾರೀ ಮಳೆಗೆ ಸುಳ್ಯ ತಾಲೂಕಿನ ಕಲ್ಮಕಾರಿನ ಕಡಮಕಲ್ಲು ಕಾಡಿನ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವ ಘಟನೆ ನಡೆದಿದೆ. ಘಟನೆಯಿಂದ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಹರಿದು ಸೇತುವೆಗಳು ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ. ಕೃಷಿಕರ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾದ ಘಟನೆಯೂ ನಡೆದಿದೆ. ಈಗಲೂ ತೋಡಿನಲ್ಲಿ...
“75ನೇ ಸ್ವಾತಂತ್ಯçದ ಅಮೃತ ಮಹೋತ್ಸವ”ದ ಅಂಗವಾಗಿ ಸರ್ಕಾರದ ವತಿಯಿದ ನಡೆಸಲ್ಪಡುತ್ತಿರುವ ವಿವಿಧ ಸ್ಪರ್ಧೆಗಳಲ್ಲಿ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿ, ಕಿರುನಾಟಕ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ದಿನಾಂಕ: 26.೦8.2೦22ಕ್ಕೆ ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಘಟಕ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪೂರ್ಣಪ್ರಜ್ಞಾ ಕಾಲೇಜು ಉಡುಪಿಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ...
ಶ್ರೀ ಹರಿಹರೇಶ್ವರ ದೇವಸ್ಥಾನ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹರಿಹರ, ಬಾಳುಗೋಡು, ಐನೆಕಿದು ಇವುಗಳ ಸಹಭಾಗಿತ್ವದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆ.05 ರಂದು ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ
ಕುಕ್ಕುಜಡ್ಕ ದಲ್ಲಿ ಆ.06 ರಿಂದ 13 ರವರೆಗೆ ನಡೆಯಲಿರುವ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜು.31 ರಂದು ಕುಕ್ಕುಜಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು, ಗೌರವಾಧ್ಯಕ್ಷರಾದ ಎಂ.ಜಿ ಸತ್ಯನಾರಾಯಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ...
Loading posts...
All posts loaded
No more posts
