- Monday
- March 16th, 2026
ಸುಳ್ಯ ತಾಲೂಕು ಕಲ್ಮಕಾರು ಗ್ರಾಮದ ಗಡಿಕಲ್ಲು ಕೃಷ್ಣ ನಾಯ್ಕರ ದ್ವಿತೀಯ ಪುತ್ರಿ ಸುಮಿತ್ರ ಇವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮವು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸಾರೆಪುಣಿ ದಿ|| ಕೊರಗಪ್ಪ ನಾಯ್ಕರ ಪ್ರಥಮ ಪುತ್ರ ಯೋಗಿಶ್ ರವರೊಂದಿಗೆ ಅಕ್ಟೋಬರ್ 24 ರಂದು ನಡೆಯಿತು. ವರದಿ :- ಉಲ್ಲಾಸ್ ಕಜ್ಜೋಡಿ
ಡಾ . ಮಧುಶ್ರೀ ಕೆ.ವಿ.ಕೇನಾಜೆ ಅವರಿಗೆ ಆಲ್ ಇಂಡಿಯಾ ಆಯುರ್ವೇದ ವೈದ್ಯಕೀಯ ಪಿ.ಜಿ ಪ್ರವೇಶ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ೪೨೪ ನೇ ರ್ಯಾಂಕ್ ಪಡೆದಿರುತ್ತಾರೆ.ಬಿಎಎಂಎಸ್ ಪದವಿಯನ್ನು ಸರಕಾರಿ -ಆರ್ಯುವೇದ ಕಾಲೇಜು ಮೈಸೂರಿನಲ್ಲಿ ಪೂರೈಸಿರುವ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಪೂರೈಸಿರುತ್ತಾರೆ. ಸ.ಪ.ಪೂ....
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ಸದಸ್ಯರುಗಳ ಮಕ್ಕಳು 2020- 21ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ 620 ಅಂಕಗಳಿಗಿಂತ ಹೆಚ್ಚು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನ. 13ರಂದು ಸುಳ್ಯದಲ್ಲಿ ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುವುದು. ಸಂಘದ ಕಾರ್ಯವ್ಯಾಪ್ತಿಯಲ್ಲಿರುವ ಸದಸ್ಯರುಗಳು ತಮ್ಮ ಮಕ್ಕಳ ಅರ್ಜಿಯನ್ನು ಸಂಘದ ಹತ್ತಿರದ ಶಾಖೆಗಳಲ್ಲಿ ನೀಡಬೇಕೆಂದು ಸಂಘದ...
ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಸುಬ್ರಹ್ಮಣ್ಯ ಸಮೀಪ ಅ.25ರ ಸೋಮವಾರದಂದು ಸಂಭವಿಸಿದೆ.ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ...
2025ಕ್ಕೆ ಭಾರತವನ್ನು ಕ್ಷಯ ಮುಕ್ತಗೊಳಿಸುವ ಪ್ರಧಾನಿಯವರ ಘೋಷಣೆಯಂತೆ ಮುರುಳ್ಯ ಗ್ರಾಮವನ್ನು ಕ್ಷಯ ಮುಕ್ತಗೊಳಿಸುವ ಯೋಜನೆಗೆ ಪೂರ್ವಭಾವಿಯಾಗಿ ಟಾಸ್ಕ್ ಪೋರ್ಸ್ ಸಮಿತಿ ರಚನೆಯು ಮುರುಳ್ಯ ಗ್ರಾಮ ಪಂಚಾಯತ್ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕು.ಜಾನಕಿ ವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾತನಾಡಿ...
ಕಡಬ ತಾಲೂಕಿನ ಹಲವು ಗ್ರಾಮಗಳು ಕಳೆದ 40-50 ವರ್ಷಗಳಿಂದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಜೀವನ ಸಾಗಿಸುತ್ತಿರುವ ರೈತರ ಜಮೀನುಗಳನ್ನು ಅಕ್ರಮ-ಸಕ್ರಮದ ಅಡಿಯಲ್ಲಿ ಅರ್ಜಿ ಕೊಟ್ಟರೂ ಈವರೆಗೆ ಮಂಜೂರು ಆಗದೇ ಇರುವುದರಿಂದ ಅವರ ಜಮೀನುಗಳನ್ನು ಯಾವುದೇ ನಿಭಂದನೆ ಇಲ್ಲದೇ ಮಂಜೂರುಗೊಳಿಸಬೇಕು. ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಭೂಮಿ ಕಾಯ್ದಿರಿಸಿದ್ದರೂ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡದೇ ಇರುವುದರಿಂದ ಅರ್ಹರಿಗೆ...
ಸುಬ್ರಹ್ಮಣ್ಯ: ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ತುರ್ತು ಕಾರ್ಯಚರಣೆಯಿಂದ ಬಾರೀ ದುರಂತ ತಪ್ಪಿದ ಘಟನೆ ಅ.25ನೇ ಸೋಮವಾರ ಸಂಭವಿಸಿದೆ.ನೂಜಿಬಾಳ್ತಿಲ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭದಲ್ಲಿ ಗ್ಯಾಸ್ ಅಂಡೆಯ ಪೈಪ್ ನಲ್ಲಿ ಗ್ಯಾಸ್...
ಅರಂತೋಡು ಗ್ರಾಮದ ಉಳುವಾರು ನಿವಾಸಿ ದೇವಣ್ಣ ಗೌಡ ಅವರು ಅ.24 ರ ಮುಂಜಾನೆಯಿಂದ ಕಾಣೆಯಾಗಿದ್ದಾರೆಇವರು ಕಂಡಲ್ಲಿ 9741113650,8762416256, 9591370038 ಈ ಮೊಬೈಲ್ ನಂಬರ್ ಗೆ ಮಾಹಿತಿ ನೀಡಲು ಕೋರಲಾಗಿದೆ.
ಕಡಬ ಸರಕಾರಿ ಆಸ್ಪತ್ರೆಯ ಪ್ರಥಮ ದರ್ಜೆ ಸಹಾಯಕ ಕೊರಗಪ್ಪಗೌಡ ಮತ್ತು ಬಿಳಿನೆಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ದಮಯಂತಿ ಜಿ ದಂಪತಿಗಳ ಪುತ್ರಿ ಶಿಲ್ಪಾ.ಕೆ.ವಿ, ಜೈವಿಕ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗದ ನಂತರ ಕರ್ನಾಟಕ ಸರಕಾರದ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ರಿಸರ್ಚ್ ಸೆಂಟರ್ ನಲ್ಲಿ ಜೇನು ಕೃಷಿ ವಿಭಾಗದ ಸಹಾಯಕ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಗ್ರಾಮಪಂಚಾಯತ್ ಕೊಲ್ಲಮೊಗ್ರು ಇದರ ಸಹಯೋಗದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ದ ಪ್ರಯುಕ್ತ ಕೊಲ್ಲಮೊಗ್ರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಅ.23 ರಂದು ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಿತು.ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆಯನ್ನು ಪಶುವೈದ್ಯ ಡಾ.ವೆಂಕಟಾಚಲಪತಿ...
Loading posts...
All posts loaded
No more posts
