Ad Widget

ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ. ರಚನೆ- ಅಧ್ಯಕ್ಷರಾಗಿ ಮಾಧವ ಎಸ್, ಉಪಾಧ್ಯಕ್ಷರಾಗಿ ಕುಸುಮಾವತಿ ನಡುಬೆಟ್ಟು ಆಯ್ಕೆ

ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇಲ್ಲಿಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ಮುಂದಿನ ಮೂರು ವರ್ಷಗಳ ಅವಧಿಗೆ ರಚಿಸಲಾಯಿತು. ರಚನಾ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ವಹಿಸಿದ್ದರು. ಎಸ್.ಡಿ.ಎಂ.ಸಿ ಯ ನೂತನ ಅಧ್ಯಕ್ಷರಾಗಿ ಮಾಧವ ಎಸ್, ಉಪಾಧ್ಯಕ್ಷರಾಗಿ ಕುಸುಮಾವತಿ ನಡುಬೆಟ್ಟು ಆಯ್ಕೆಯಾದರು. ಈ ಒಂದು ರಚನಾ ಸಭೆಯಲ್ಲಿ...

ಮುಳ್ಳುಬಾಗಿಲು :- ಸಂಗಮ ನವೋದಯ ಸ್ವ-ಸಹಾಯ ಸಂಘದ 18ನೇ ವರ್ಷದ ವಾರ್ಷಿಕ ಸಭೆ

ಸಂಗಮ ನವೋದಯ ಸ್ವ-ಸಹಾಯ ಸಂಘ ಮುಳ್ಳುಬಾಗಿಲು ಇದರ 18ನೇ ವರ್ಷದ ವಾರ್ಷಿಕ ಸಭೆಯನ್ನು ಸೆ.30 ರಂದು ಉಮೇಶ್ ಬಟ್ಟೋಡಿ ಅವರ ಮನೆಯಲ್ಲಿ ನಡೆಸಲಾಯಿತು.ಸಭೆಯಲ್ಲಿ ಸಂಘದ ಅಧ್ಯಕ್ಷರಾದ ಜಗದೀಶ್ ಕಿಲರ್ ಕಜೆ, ಕಾರ್ಯದರ್ಶಿಯಾದ ನಾರಾಯಣ.ಪಿ ಮುಳ್ಳುಬಾಗಿಲು ಹಾಗೂ ಸಂಘದ ಸದಸ್ಯರಾದ ವೆಂಕಪ್ಪ ಗೌಡ, ವೆಂಕಟ್ರಮಣ ಗೌಡ, ಪುರುಷೋತ್ತಮ ಗೌಡ, ಗಿರಿಯಪ್ಪ ಗೌಡ, ಉಮೇಶ್ ಬಟ್ಟೋಡಿ, ಮೋಹನ್ ದಾಸ್...
Ad Widget

ಹರಿಹರ ಪಲ್ಲತ್ತಡ್ಕ :- ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಅರಿವು ಕಾರ್ಯಕ್ರಮ

ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎಸ್.ಡಿ.ಎಂ.ಸಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅ.02 ರಂದು ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ, ನಾಟಕ ಹಾಗೂ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಿತು.ಹರಿಹರ ಪಲ್ಲತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಹರಿಹರ ಪಲ್ಲತ್ತಡ್ಕದ ಮುಖ್ಯ ಪೇಟೆಯವರೆಗೆ ಗಾಂಧಿ ನಡಿಗೆ,...

ಕೊಲ್ಲಮೊಗ್ರು :- ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧಿ ನಡಿಗೆ ಜಾಥಾ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B.C ಟ್ರಸ್ಟ್.(ರಿ.) ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರು ಗ್ರಾಮದಲ್ಲಿ ಅ.02 ರಂದು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿ, ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು, ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕ, ಕಿರಿಯ ಪ್ರಾಥಮಿಕ ಶಾಲೆ ಗಡಿಕಲ್ಲು ಇವುಗಳ ಸಂಯುಕ್ತಾಶ್ರಯದಲ್ಲಿ ಗಾಂಧಿ ನಡಿಗೆ ಜಾಥಾ ಕಾರ್ಯಕ್ರಮ ನಡೆಯಿತು. ಕೊಲ್ಲಮೊಗ್ರು ಮುಖ್ಯ...

ಹಾಲೆಮಜಲು :- ಗಾಂಧಿ ಜಯಂತಿ ಅಂಗವಾಗಿ ಸಾರ್ವಜನಿಕ ಬಸ್ ತಂಗುದಾಣದ ಸ್ವಚ್ಛತೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ವತಿಯಿಂದ ಅ.02 ರ ಗಾಂಧಿ ಜಯಂತಿಯ ಅಂಗವಾಗಿ ಹಾಲೆಮಜಲು ಸಾರ್ವಜನಿಕ ಬಸ್ ತಂಗುದಾಣವನ್ನು ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಸತೀಶ್ ಹಾಲೆಮಜಲು ಹಾಗೂ ಸ್ವಯಂಸೇವಕರಾದ ಲೋಹಿತ್, ಪ್ರಜ್ವಲ್, ಕಾರ್ತಿಕ್, ಕರುಣಾಕರ, ಹರಿಶ್ಚಂದ್ರ ಕುಳ್ಳಂಪಾಡಿ ಈ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. (ವರದಿ...

ಹರಿಹರ ಪಲ್ಲತ್ತಡ್ಕ :- ಗ್ರಾಮಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಅ.02 ರಂದು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮಸಭೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಗ್ರಾಮಪಂಚಾಯತ್ ಅದ್ಯಕ್ಷರಾದ ಜಯಂತ್ ಬಾಳುಗೋಡು ದೀಪ ಬೆಳಗಿಸಿ ಉದ್ಘಾಟಿಸಿದರು. ಗ್ರಾಮಪಂಚಾಯತ್ ಪಿ.ಡಿ.ಓ ಪುರುಷೋತ್ತಮ ಮಣಿಯಾನ ಹಾಗೂ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಭೆಯಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ,...

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ : ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರು ಶಾಸ್ತ್ರಿಯವರ ಜಯಂತಿ ಆಚರಣೆಯು ಅ.2 ರಂದು ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಹಸೀನಾಭಾನು ಪುಷ್ಪಾರ್ಚನೆ ಮಾಡಿದರು.ಶಿಕ್ಷಕ ರಾಮಚಂದ್ರ ಭಟ್ ರವರು ಗಾಂಧೀಜಿ ಮತ್ತು ಲಾಲ್ ಬಹಾದ್ದೂರು ಶಾಸ್ತ್ರಿಯವರ ಬಗ್ಗೆ ಮಾತನಾಡಿದರು.ಶಿಕ್ಷಕರು ಸರ್ವಧರ್ಮ ಪ್ರಾರ್ಥನೆ ಮಾಡಿದರು.ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಗಾಂಧಿ ಕುರಿತ ಹಾಡು...

ಕೃಷಿ ಭೂಮಿಯನ್ನು ಅರಣ್ಯವನ್ನಾಗಿಸಲು ಪಿತೂರಿ – ಭ್ರಷ್ಟಾಚಾರ ವ್ಯವಸ್ಥೆ ಹಾಗೂ ಕೃಷಿ ಭೂಮಿಯನ್ನು ಅರಣ್ಯವನ್ನಾಗಿಸಿದರೆ ಪ್ರತಿಭಟನೆಯ ಎಚ್ಚರಿಕೆ : ಮಲೆನಾಡು ಜನಹಿತ ರಕ್ಷಣಾ ವೇದಿಕೆ

ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಜನರು ವಾಸಿಸುತ್ತಿರುವ ಹಾಗೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ಕೃಷಿ ಭೂಮಿಗಳನ್ನು ಅರಣ್ಯವನ್ನಾಗಿ ಪರಿವರ್ತನೆ ಮಾಡಿ ಭಾರತವನ್ನು ಬಡರಾಷ್ಟ್ರವನ್ನಾಗಿ ಮಾಡಲಾಗುತ್ತಿದೆ ಎಂದು ಅ.01ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಆರೋಪಿಸಿದರು.ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಜನರ ಬದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಹಾಗೂ ಕಾಡು...

ಪೆರಾಜೆ: ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯ ಅಂಗವಾಗಿ ಶ್ರಮದಾನ

ಪೆರಾಜೆ: ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ಪೆರಾಜೆ ಹಾಗೂ ಚಿಗುರು ಯುವಕ ಮಂಡಲ ಹಾಗೂ ಯುವ ಕೋಟೆ ಯುವಕ ಮಂಡಲ ಪೆರಾಜೆ ಇದರ ವತಿಯಿಂದ ಶ್ರಮದಾನ ಕಾರ್ಯಕ್ರಮ ನಡೆಯಿತು. ಈ ಶ್ರಮದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಯುವಕ ಮಂಡಲದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಭಾಗವಹಿಸಿದ್ದರು.

ಕಲ್ಮಡ್ಕ: ಗಾಂಧೀ ಜಯಂತಿ ಆಚರಣೆ- ಘನತ್ಯಾಜ್ಯ ಘಟಕದ ಕಸ ವಿಲೇವಾರಿಯ ವಾಹನ ಹಾಗೂ ಘನತ್ಯಾಜ್ಯ ಘಟಕದ ಉದ್ಘಾಟನೆ

ಕಲ್ಮಡ್ಕ ಗ್ರಾಮ ಪಂಚಾಯತಿನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್ ರವರು ದೀಪ ಬೆಳಗಿಸಿದರು. ಗ್ರಾಮ ಪಂಚಾಯತ್ ಘನತ್ಯಾಜ್ಯ ಘಟಕದ ಕಸ ವಿಲೇವಾರಿಯ ವಾಹನಕ್ಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ. ಎಸ್ ಇವರು ಚಾಲನೆಯನ್ನು ನೀಡಿದರು. ಕಲ್ಮಡ್ಕ ಗ್ರಾಮ ಪಂಚಾಯತಿನ ನೂತನವಾಗಿ ನಿರ್ಮಿಸಲಾದ ಘನತ್ಯಾಜ್ಯ ಘಟಕದ ಕಟ್ಟಡವನ್ನು ಮಾಜಿ...
Loading posts...

All posts loaded

No more posts

error: Content is protected !!