- Friday
- May 1st, 2026
ಡಿ.9 ಮಂಗಳವಾರದಂದು ಜಿಲ್ಲಾ ಕಾಂಗ್ರೆಸ್ ಭವನ ಮಲ್ಲಿಕಟ್ಟೆಯಲ್ಲಿ ಜಿಲ್ಲಾ ಅಸಂಘಟಿತ ಘಟಕದ ಅಧ್ಯಕ್ಷರಾದ ಅಬ್ಬಾಸ್ ಅಲಿ ಅವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಘಟಕದ ಮಾಸಿಕ ಸಭೆ ನಡೆಯಿತು. ಸುಳ್ಯ ತಾಲೂಕು ಅಸಂಘಟಿತ ಅಧ್ಯಕ್ಷರಾದ ದಿವಂಗತ ಎ.ಎಸ್ ಚಂದ್ರಲಿಂಗಂ ರವರ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ್ ರವರ ಶಿಪಾರಸ್ಸಿನ ಮೇರೆಗೆ...
ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ತಾಲೂಕು ದಂಡಾಧಿಕಾರಿಯಿಂದ ಮಂಜೂರಾತಿಯಾದ ಆಯುಧ ಪರವಾನಿಗೆಯನ್ನು ಹೊಂದಿ ಡಿ. 31 ರಂದು ನವೀಕರಣ ಮುಕ್ತಾಯಗೊಳ್ಳುವ ಪರವಾನಿಗೆದಾರರು ಡಿ. 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿಯನ್ನು ಸಲ್ಲಿಸಬೇಕು. ದಿನಾಂಕ 01.01.2026 ರಿಂದ ಸ್ವೀಕೃತಿಯಾದ ಅರ್ಜಿಗಳಿಗೆ ದಂಡನೆ ಪಾವತಿಸಿ ನವೀಕರಿಸಬೇಕಾಗಿರುವುದರಿಂದ 2025 ಡಿಸೆಂಬರ್ 31 ರ ಒಳಗಾಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವಂತೆ ಸುಳ್ಯ ತಹಶೀಲ್ದಾರ್...
ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಕೆ.ಪಿ.ಎಸ್ ಬೆಳ್ಳಾರೆ ಇವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವಿದ್ಯಾರ್ಥಿಗಳಾದ ಆದ್ಯಾ ಬಾಬ್ಲುಬೆಟ್ಟು ಭಾಗವಹಿಸಿ ಗಝಲ್ ಮತ್ತು ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡರು....
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಉದ್ಘಾಟನೆಯು ಡಿ.08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ ಯವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಈ ಶಿಬಿರವನ್ನು ಸಂಸ್ಕೃತ ಭಾರತಿ ಕಾಸರಗೋಡು ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿ...
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಜ್ಜಾವರ ವಲಯ ಹಾಗೂ ತತ್ವಮಸಿ ಗುಂಪು ಮಂಡೆಕೋಲು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ,ಶಶ್ರೀ ಶಬರಿಗಿರಿ ಸೇವಾ ಪ್ರತಿಷ್ಠಾನ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಮಂಡೆಕೋಲು ಇವುಗಳ ಸಹಕಾರದೊಂದಿಗೆ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನಾ ಕುಣಿತ ಭಜನಾ ಸ್ಪರ್ಧೆ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ...
ಸುಬ್ರಹ್ಮಣ್ಯ ಡಿಸೆಂಬರ್ 9 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನಕ್ಷತ್ರವಾದ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಕುಕ್ಕೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಜಮಾವನೆಗೊಂಡಿದ್ದರು. ಬೆಳಗ್ಗೆ 6:00 ಯಿಂದ ಆರಂಭವಾದ ಆಶ್ಲೇಷ ಬಲಿ ಸೇವೆಯು ನಿರಂತರವಾಗಿ ಮೂರು ಹಂತಗಳಲ್ಲಿ( ಬ್ಯಾಚ್) 11 ಗಂಟೆ ತನಕ ಭಕ್ತರು ಸೇವೆಗಾಗಿ ಸರತಿ ಸಾಲಿನಲ್ಲಿ ಇದ್ದದು ಕಂಡು ಬಂತು. ಇತ್ತ...
ಸುಳ್ಯದ ಓಡಬಾಯಿಯಲ್ಲಿ ಕುಂಭಕ್ಕೋಡು ಕಸ್ತೂರಿ ಸಭಾಭವನದ ಮುಂಭಾಗ ಬಿಎಂಎ ವೆಜ್ ಗ್ರೂಪ್ಸ್ ನವರ ನೂತನ ಹೋಲ್ಸೇಲ್ ಮಳಿಗೆ ಬಿ.ಎಂ.ಎ ಫ್ರೆಶ್ ಮಾರ್ಟ್ ಡಿ.8ರಂದು ಶುಭಾರಂಭಗೊಂಡಿತು.ಇಲ್ಲಿ ತರಕಾರಿ, ಹಣ್ಣುಹಂಪಲು, ಜ್ಯೂಸ್, ಐಸ್ ಕ್ರೀಂ, ಸಲಾಡ್, ಡ್ರೈ ಫ್ರುಟ್ಸ್, ಟೀ, ಕಾಫಿ ಎಲ್ಲವೂ ಒಂದೇ ಮಳಿಗೆಯಲ್ಲಿ ದೊರೆಯುತ್ತದೆ. ವಿಶಾಲ ಪಾರ್ಕಿಂಗ್ ವ್ಯವಸ್ಥೆ ಇದೆ ಎಂದು ಮ್ಹಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
“ಉಬರಡ್ಕದಲ್ಲಿಯೇ ಅಡಿಕೆ ಖರೀದಿ ಕೇಂದ್ರ ಆಗಿರುವುದರಿಂದ ರೈತರಿಗೆ ಸಹಕಾರಿಯಾಗಲಿದೆ ಎಲ್ಲರೂ ಸದುಪಯೋಗ ಮಾಡಿಕೊಳ್ಳಿ, ಮಾಸ್ ನಲ್ಲಿಯೂ ಉತ್ತಮ ಬೆಲೆ ನೀಡಿ ಅಡಿಕೆ ಖರೀದಿ ಮಾಡುತ್ತೇವೆ” ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷರಾದ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಹೇಳಿದರು. ಅವರು ಉಬರಡ್ಕದಲ್ಲಿ ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು, ಮಾಸ್ ಲಿಮಿಟೆಡ್ ಇವರಿಂದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವುಗಳ ಸಹಯೋಗದೊಂದಿಗೆ ಆಂತರಿಕ ಗುಣಮಟ್ಟ ಭರವಸಾಕೋಶದ ಅಡಿಯಲ್ಲಿ ಅರೆಭಾಷೆ ಸಂಘದ ವತಿಯಿಂದ ಡಿ.08ರಂದು “ಅರೆಭಾಷೆ ದಿನಾಚರಣೆ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ವಹಿಸಿದ್ದರು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಕೊಡಗು ಗೌಡ...
ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಕೆ.ಪಿ.ಎಸ್ ಬೆಳ್ಳಾರೆ ಇವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
Loading posts...
All posts loaded
No more posts
