Ad Widget

ಪೆರುವಾಜೆ: ಭಾವೈಕ್ಯ ಯುವಕ ಮಂಡಲದಿಂದ ದಿ|ಪ್ರೇಮನಾಥ ರೈ ರವರ ಪುಣ್ಯಸ್ಮರಣೆ ಕಾರ್ಯಕ್ರಮ

ಪೆರುವಾಜೆ ಭಾವೈಕ್ಯ ಯುವಕ ಮಂಡಲ(ರಿ.) ವತಿಯಿಂದ ಪೂರ್ವಾಧ್ಯಕ್ಷರಾದ ದಿ| ಪ್ರೇಮನಾಥ ರೈ ರವರ ಒಂದನೇ ವರುಷದ ಪುಣ್ಯಸ್ಮರಣೆ ಕಾರ್ಯಕ್ರಮ ಸೆ.16 ರಂದು ಪೆರುವಾಜೆ ಯುವಕ ಮಂಡಲದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾವೈಕ್ಯ ಯುವಕ‌ ಮಂಡಲ ಮತ್ತು ದಿ|ಪ್ರೇಮನಾಥ ರೈ ರವರ ಒಡನಾಟ ಮತ್ತು ಸಮಾಜಮುಖಿ ಕಾರ್ಯಗಳನ್ನು ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ ನೆನಪಿಸಿಕೊಂಡರು. ಕಾರ್ಯಕ್ರಮದ ನಂತರ...

ಮಾವಿನಕಟ್ಟೆ : ಚಿರಾಯು ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಸ್ತಿತ್ವಕ್ಕೆ – ಅಧ್ಯಕ್ಷ ಜಯಂತ ಮಾವಿನಕಟ್ಟೆ, ಕಾರ್ಯದರ್ಶಿ ಯತೀಂದ್ರ ಮಾವಿನಕಟ್ಟೆ

ಚಿರಾಯು ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ವಿಜಯಕಾಂತ್ ಮಾವಿನಕಟ್ಟೆ, ಅಧ್ಯಕ್ಷರಾಗಿ ಜಯಂತ ಮಾವಿನಕಟ್ಟೆ, ಉಪಾಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಯತೀಂದ್ರ, ಸಂಘಟನಾ ಕಾರ್ಯದರ್ಶಿಯಾಗಿ ದಿನೇಶ ಖಜಾಂಜಿಯಾಗಿ ಫಾರೂಕ್ ಮಾವಿನಕಟ್ಟೆ, ಗೌರವ ಸಲಹೆಗಾರರಾಗಿ ಸಿದ್ದಿಕ್ ಅಬುದಾಬಿ, ತೋಮಸ್ ದುಬೈ ಹಾಗೂ ಕವನ ಮಾವಿನಕಟ್ಟೆ , ಸಂಘಟನಾ...
Ad Widget

ಸರಕಾರದ ನಡೆ ಖಂಡಿಸಿ ವಿ ಹೆಚ್ ಪಿ, ಬಜರಂಗದಳ ನಾಳೆ ಪ್ರತಿಭಟನೆ

ಮೈಸೂರಿನ ನಂಜನಗೂಡಿನಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸಿದ್ದನ್ನು ಹಾಗೂ ಇನ್ನೂ ಹಲವು ದೇವಸ್ಥಾನಗಳನ್ನು ಧ್ವಂಸಗೊಳಿಸಲು ನಿರ್ಧರಿಸಿರುವ ಸರಕಾರದ ನಡೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಖಂಡಿಸಿ ಸೆ.16 ರಂದು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಿದೆ ಎಂದು ಬಜರಂಗದಳದ ಜಿಲ್ಲಾ ಸಂಯೋಜಕ ಲತೀಶ್ ಗುಂಡ್ಯ ತಿಳಿಸಿದ್ದಾರೆ.

ದೇವ : ಬೀದಿದೀಪ ಅಳವಡಿಸಲು ಗ್ರಾಮಸ್ಥರಿಂದ ಮನವಿ

ದೇವಚಳ್ಳ ಗ್ರಾ.ಪಂ.ವ್ಯಾಪ್ತಿಯ ದೇವ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಬಳಿ ಬೀದಿದೀಪ ಅಳವಡಿಸುವಂತೆ ನಾಗರಿಕರು ದೇವಚಳ್ಳ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಿಡಿಓ ಗುರುಪ್ರಸಾದ್, ಅಧ್ಯಕ್ಷೆ ಸುಲೋಚನ ದೇವ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ: ರೋಟರಿ ಕ್ಲಬ್ ವತಿಯಿಂದ ಸಾಧಕಿಗೆ ಸನ್ಮಾನ

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಶರೀನಾ ಡಿಸೋಜಾ ಇವರನ್ನು ಅವರ ಮನೆಯಲ್ಲಿ ಸೆ.15ರಂದು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯ ಕುಮಾರ ಅಮೈ, ಪೂರ್ವಾಧ್ಯಕ್ಷರಾದ ರಾಮಕೃಷ್ಣ ಮಲ್ಲಾರ, ಗಿರಿಧರ್ ಸ್ಕಂಧ, ವಿಶ್ವನಾಥ ನಡುತೋಟ ,ವೆಂಕಟೇಶ್ ಎಚ್...

ಕರಂಗಲ್ಲು : ಸನ್ಮಾನ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

ದೇವಚಳ್ಳ ಗ್ರಾಮದ ಕರಂಗಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.11 ರಂದು 2020-21ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ 10ನೇ ತರಗತಿಯಲ್ಲಿ 93% ಅಂಕ ಗಳಿಸಿ ಉತ್ತೀರ್ಣರಾದ ತನುಷ್ ಎಂ.ಎಸ್ ಅವರ ಸನ್ಮಾನ ಕಾರ್ಯಕ್ರಮ ಎಸ್.ಡಿ.ಎಂ.ಸಿ ಹಾಗೂ ಮುಖ್ಯೋಪಾಧ್ಯಾಯರ ಸಹಭಾಗಿತ್ವದಲ್ಲಿ ನಡೆಯಿತು. ನಂತರ ಶಾಲೆಯಲ್ಲಿ ಹಾಜರಾತಿ, ಕಲಿಕೆ ಹಾಗೂ ಆಟೋಟ ಸ್ಪರ್ಧೆಗಳಲ್ಲಿ...

ಸುಬ್ರಹ್ಮಣ್ಯ: ಸಾಧಕಿಗೆ ಸನ್ಮಾನ

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಕುಮಾರಿ ಅನನ್ಯ ಎಂ ಡಿ ರವರನ್ನು ಅವರ ಮನೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ವಿಜಯಕುಮಾರ ಅಮೈ, ನಿಕಟ ಪೂರ್ವಾಧ್ಯಕ್ಷ ಉಮೇಶ್ ಕೆ ಎನ್, ಮಾಯಿಲಪ್ಪ ಸಂಕೇಶ, ಸದಸ್ಯರಾದ...

ರೋಟರಿ ಕ್ಲಬ್ ಸುಬ್ರಹ್ಮಣ್ಯ ವತಿಯಿಂದ ಹಾಸನಡ್ಕ ಶಾಲೆಗೆ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ಕೊಡುಗೆ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಅಮರಮುಡ್ನೂರು ಗ್ರಾಮದ ಹಾಸನಡ್ಕ ಕಿರಿಯ ಪ್ರಾಥಮಿಕ ಶಾಲೆಗೆ ಲೇಖನ ಸಾಮಗ್ರಿ ಮತ್ತು ನೋಟು ಪುಸ್ತಕಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ವಿಜಯಕುಮಾರ ಅಮೈ ವಹಿಸಿದ್ದರು. ಅತಿಥಿಗಳಾಗಿ ಶಾಲಾ ಎಸ್.ಡಿ.ಎಂ.ಸಿ ಪೂರ್ವಾಧ್ಯಕ್ಷ ತಿಮ್ಮಪ್ಪ ಗೌಡ, ಪ್ರಾಯೋಜಕರಾದ ಮಾಯಿಲಪ್ಪ ಸಂಕೇಶ, ಕಾರ್ಯದರ್ಶಿ...

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಹಿಂದಿ ಸಭಾದ ವತಿಯಿಂದ ಹಿಂದಿ ದಿನಾಚರಣೆಯನ್ನು ಸೆಪ್ಟೆಂಬರ್ 14ರಂದು ಆಚರಿಸಲಾಯಿತು.ಆನ್ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಹಿಂದಿ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕರಾದ ಡಾ. ನಾಗರತ್ನ ಎನ್ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ...

ಅರಂತೋಡು : ರಾಜ್ಯ ಹೆದ್ದಾರಿಯಲ್ಲಿ ಅಪಾಯ ಆಹ್ವಾನಿಸುತ್ತಿರುವ ಗುಂಡಿ

ಅರಂತೋಡು ತೆಕ್ಕಿಲ್ಹೆಚ್.ಪಿ.ಗ್ಯಾಸ್‌ ಗೋಡಾನ್ ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ತಾದ ಗುಂಡಿ ಸೃಷ್ಟಿಯಾಗಿದ್ದು ವಾಹನ ಸವಾರ ರು ಚಾಲನೆ ಮಾಡುವಾಗ ಜಾಗೃತೆ ವಹಿಸದೇ ಹೋದರೆ ಅವಘಡ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಇದೀಗ ಆ ಗುಂಡಿಗೆ ಬಾಳೆಗಿಡ ನೆಟ್ಟು ಸಾರ್ವಜನಿಕರು ಪ್ರತಿಭಟಿಸಿದ್ದು ಇನ್ನಾದರೂ ಇಲಾಖೆಯವರು ಎಚ್ಚೆತ್ತುಗೊಳ್ಳಬಹುದೇ?. ಕಳೆದ ವರ್ಷ ಇದೇ ತರದ ಗುಂಡಿ ನಿರ್ಮಾಣ ವಾಗಿ...
Loading posts...

All posts loaded

No more posts

error: Content is protected !!