- Sunday
- August 16th, 2026
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಹಗ್ಗ ಜಗ್ಗಾಟ ಸ್ಪರ್ಧೆಯು ಇದೇ ಬರುವ 23 ಜೂನ್ 2022ರಂದು ನಡೆಯಲಿದೆ. ಈ ಪಂದ್ಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ಸುಮಾರು 32 ಪುರುಷರ ಮತ್ತು 30 ಮಹಿಳಾ ತಂಡಗಳು ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಪ್ರತಾಪ ಯುವಕ ಮಂಡಲ ಅಜ್ಜಾವರ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.12 ರಂದು ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶಿವಪ್ರಕಾಶ್ ಅಡ್ಪಂಗಾಯವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವಜನ ಸಂಯುಕ್ತ ಮಂಡಳಿ ಯ ಪೂರ್ವ ಅಧ್ಯಕ್ಷರಾದ ದಿನೇಶ್ ಮಾಡಪ್ಪಾಡಿ ಯವರು ಉದ್ಘಾಟಿಸಿದರು.ನೂತನ ಪದಾಧಿಕಾರಿಗಳಿಗೆ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ದಯಾನಂದ ರವರು...
ಸುಳ್ಯ ರೋಟರಿ ಕ್ಲಬ್ ವತಿಯಿಂದ ಜಯನಗರದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ರುದ್ರಭೂಮಿಯ ಬಗ್ಗೆ ಕ್ಲಬ್ ಅಧ್ಯಕ್ಷ ಪ್ರಭಾಕರ ನಾಯರ್ ಇಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ರೊಟರಿ ಕ್ಲಬ್ ಸುಳ್ಯ 2021-22ರ ಅವಧಿಯ ಜಿಲ್ಲಾ ಯೋಜನೆಯಂತೆ ಸುಳ್ಯ ನಗರ ಪಂಚಾಯತ್ ಅಧೀನದಲ್ಲಿರುವ ಜಯನಗರದಲ್ಲಿ ನೂತನವಾಗಿ ಅಭಿವೃದ್ಧಿಗೊಂಡಿರುವ ಸಾರ್ವಜನಿಕ ರುದ್ರಭೂಮಿಯನ್ನು ಜೂ.22 ರಂದು ಶಾಸಕರು ಮತ್ತು ಸಚಿವರಾದ ಎಸ್....
2021-22ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು, ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಬ್ಬರೂ ವಿದ್ಯಾರ್ಥಿಗಳು ಸಹ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸೌಮ್ಯ 490 ಅಂಕ ಹಾಗೂ ಗೀತಾಶ್ರೀ 450 ಅಂಕಗಳನ್ನು ಗಳಿಸಿದ್ದಾರೆ. ವರದಿ :- ಉಲ್ಲಾಸ್...
ಗ್ರಾಮ ಪಂಚಾಯತ್ ಮಡಪ್ಪಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ಮತ್ತು ಸುಳ್ಯ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ ಬೆಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ...
2021-22 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಕಲಾ ಹಾಗೂ ವಾಣಿಜ್ಯ ವಿಭಾಗದಿಂದ ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ 96.07% ಪಡೆದುಕೊಂಡಿದೆ.ಇದರಲ್ಲಿ 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 07 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ...
ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಕಾಂಗ್ರೆಸ್ ನಿಂದ ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಜಿ.ಕೆ.ಹಮೀದ್ ರನ್ನು ಉಚ್ಚಾಟಿಸಲಾಗಿತ್ತು. ಈ ಬಗ್ಗೆ ಅಮರ ಸುದ್ದಿಗೆ ಪ್ರತಿಕ್ರಿಯಿಸಿದ್ದು "ನನ್ನನ್ನು ಗ್ರಾಮ ಮಟ್ಟದ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಿರುವುದು ಮಾಧ್ಯಮದಿಂದ ತಿಳಿಯಿತು. ಆದರೆ ಇದುವರೆಗೆ ಯಾವುದೇ ನೋಟಿಸ್ ಸಿಕ್ಕಿಲ್ಲ. ಈಗ ತಾಲೂಕು ಕಾಂಗ್ರೆಸ್ ನಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಅವರು...
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಜಿ.ಕೆ. ಹಮೀದ್ ರವರನ್ನು ಮುಂದಿನ 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್...
ಕೊಡಗು ಭಾಗದ ಭೂತಾರಾಧನೆ ಬಗ್ಗೆ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ಸರಿಯಲ್ಲ ಎಂದು ಅಜಿತ್ ಐವರ್ನಾಡು ಹೇಳಿದರು. ಅವರು ಜೂ.17 ರಂದು ಗೋಷ್ಠಿಯಲ್ಲಿ ಮಾತನಾಡಿ ಮೇ.28 ರಂದು ಮುರ್ನಾಡುವಿನಲ್ಲಿ ನಡೆದ ಶಿರಾಡಿ ದೈವದೊಂದಿಗೆ ಇತರರು ನರ್ತನ ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನವೆಂದು ಪ್ರಚಾರ ಮಾಡಿದ್ದು ತಪ್ಪು. ಇದಲ್ಲದೆ ಕೊಡಗು ಹಾಗೂ ದಕ್ಷಿಣ ಕನ್ನಡದ ದೈವಾರಾಧನೆ ಪದ್ಧತಿಯಲ್ಲಿ ಹಲವು...
https://karresults.nic.in/ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜೂ.18ರಂದು ಬೆಳಿಗ್ಗೆ 11.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರಕಟಿಸಲಿದ್ದು ಬಳಿಕ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ. ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಸಚಿವ ನಾಗೇಶ್ ಅವರು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದು ಬಳಿಕ ಮಂಡಳಿಯ ವೆಬ್ಸೈಟ್...
Loading posts...
All posts loaded
No more posts
