Ad Widget

ಅಕ್ರಮ ಸಕ್ರಮ – ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ; ಸರಕಾರದಿಂದ ಮಂಜೂರಾದ ನಿವೇಶನವನ್ನು ಸದುಪಯೋಗಪಡಿಸಿಕೊಳ್ಳಿ- ಸಚಿವ ಎಸ್.ಅಂಗಾರ

ಸರಕಾರ ಮೂಲಭೂತ ಸೌಕರ್ಯವಿಲ್ಲದವರಿಗೆ ಬೇಕಾದ ವ್ಯವಸ್ಥೆ ಯನ್ನು ಮಾಡಲು ಬದ್ದವಾಗಿದೆ. ಆದರೆ ಜನರು ಮಂಜೂರಾದ ನಿವೇಶನವನ್ನು ಮಾರಾಟ ಮಾಡದೇ ಅದರ ಸದುಪಯೋಗ ಪಡೆಯಬೇಕು ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು. ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಾಗುವಳಿ ಚೀಟಿ ವಿತರಣೆ ಹಾಗೂ ಮುಖ್ಯಮಂತ್ರಿಗಳ ಗ್ರಾಮೀಣ ನಿವೇಶನ ಯೋಜನೆಯ ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಹಕ್ಕುಪತ್ರವನ್ನು ವಿತರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ...

ಬೂಡು : ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ – ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೂಡು ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ರಿ. ಬೂಡು-ಕೇರ್ಪಳ- ಕುರುಂಜಿಗುಡ್ಡೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸರಳವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ವಾಸುದೇವ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನ್ಮಾಷ್ಟಮಿ ಕಾರ್ಯಕ್ರಮವನ್ನು ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಉದ್ಘಾಟಿಸಿ “ಕೃಷ್ಣನ ಜೀವನಗಾಥೆಯು ನಮ್ಮ...
Ad Widget

ಎಲಿಮಲೆ : ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ಮಿತ್ರ ಬಳಗ ಎಲಿಮಲೆ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.ಮಿತ್ರ ಬಳಗದ ಅಧ್ಯಕ್ಷ ಓಂಪ್ರಸಾದ್ ಕಜೆ ದೀಪ ಬೆಳಗಿದರು. ಈ ಸಂದರ್ಭದಲ್ಲಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಬಳ್ಪ : ಜಿಯೋ ನೆಟ್ವರ್ಕ್ ಆರಂಭ – ಸಚಿವ ಅಂಗಾರರಿಂದ ಚಾಲನೆ

ಬಳ್ಪದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜಿಯೋ ಟವರ್ ಅನ್ನು ಸಚಿವ ಅಂಗಾರ ಇಂದು ಲೋಕಾರ್ಪಣೆ ಮಾಡಿದರು. ಈ ಭಾಗದ ಜನರ ಬೇಡಿಕೆ ಈಡೇರಿಕೆ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ರೈ , ರಮಾನಂದ ಎಣ್ಣೆಮಜಲು, ವಿನೋದ್ ಬೊಳ್ಮಲೆ ಮತ್ತಿತರರು ಉಪಸ್ಥಿತರಿದ್ದರು.

ಬಾಳಿಲ : ಶ್ರೀ ಕೃಷ್ಣ ಜನ್ಮಾಷ್ಠಮಿ – ಕೃಷ್ಣ ವೇಷ ಸ್ಪರ್ಧೆ

ಶ್ರೀಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ನಡೆದ ಒಂಭತ್ತನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಸರಳವಾಗಿ ನಡೆಯಿತು. ಗೋವಿಂದಯ್ಯ ಕೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದೇವಳದಲ್ಲಿ ವಿಶೇಷ ಪೂಜೆ, ಒಂದರಿಂದ ಆರು ವರ್ಷದ ಒಳಗಿನ ಮಕ್ಕಳಿಗೆ ಕೃಷ್ಣನ ವೇಷ ಸ್ಪರ್ಧೆ ಹಾಗು ಬಹುಮಾನ ವಿತರಣಾ ಕಾರ್ಯಕ್ರಮ...

ದೇವ : ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ದೇವ ಗೆಳೆಯರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ ಅಧ್ಯಕ್ಷ ವಿನಯ್ ಕುಮಾರ್ ಮುಳುಗಾಡು, ತೀರ್ಥೇಶ್ ಪಾರೆಪ್ಪಾಡಿ, ದೇವ ಕಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ ಜಯಪ್ರಕಾಶ್ ಮುತ್ಲಾಜೆ, ದುರ್ಗೇಶ್ ಪಾರೆಪ್ಪಾಡಿ, ಭವಿತೇಶ್ ಹಿರಿಯಡ್ಕ,ಕೀರ್ತನ್ ಹಿರಿಯಡ್ಕ ಮತ್ತಿತರರು ಭಾಗವಹಿಸಿದ್ದರು.

ಮಂಡೆಕೋಲು : ಶ್ರೀ ಮಹಾದೇವಿ ಭಜನಾ ಮಂದಿರದ ಜೀರ್ಣೋದ್ದಾರ ಅಂಗವಾಗಿ ತುಳಸಿ ಗಿಡ ವಿತರಣೆ

ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಇದರ ಅಂಗವಾಗಿ ಮಂದಿರಕ್ಕೆ ಸಂಬಂಧಿಸಿದ ಶಿವಾಜಿನಗರ ಹಾಗೂ ಮಡಿವಾಳಮೂಲೆ ಕಾಲೋನಿಗಳ ಪ್ರತೀ ಮನೆಗಳಲ್ಲಿ ತುಳಸಿ ಕಟ್ಟೆ ನಿರ್ಮಾಣ ಮಾಡುವ ಸಂಕಲ್ಪ ಕೈಗೊಳ್ಳಲಾಗಿದ್ದು, ಅದರ ಅಂಗವಾಗಿ ಆ.29 ರಂದು ಭಜನಾ ಮಂದಿರದ ಸಭಾಂಗಣದಲ್ಲಿ ತುಳಸಿ ಗಿಡ ವಿತರಿಸುವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಬಗ್ಗೆ ಧಾರ್ಮಿಕ...

ಬೊಳುಬೈಲು : ಎಸ್‌ಡಿಎಂಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ ಬೈತಡ್ಕ

ಜಾಲ್ಸೂರು ಗ್ರಾಮದ ಬೊಳುಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಇತ್ತೀಚೆಗೆ ರಚನೆಗೊಂಡಿತು. ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಬಾಬು ಕೆ.ಎಂ., ಗ್ರಾ.ಪಂ. ಸದಸ್ಯರುಗಳಾದ ಗೀತಾ ಗೋಪಿನಾಥ್ ಬೊಳುಬೈಲು, ಗೀತಾ ಚಂದ್ರಹಾಸ ಉಪಸ್ಥಿತರಿದ್ದರು.ನೂತನ ಎಸ್‌ಡಿಎಂಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ ಬೈತಡ್ಕ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಯಂತ ಕುಂಬಚೋಡು, ಸದಸ್ಯರುಗಳಾಗಿ ಭವ್ಯ, ದುಗ್ಗಪ್ಪ, ವೇದಾವತಿ, ಭಾರತಿ, ಸರೋಜಿನಿ, ಜಯಚಂದ್ರ, ಗೀತಾ ಚಂದ್ರಹಾಸ, ತೀರ್ಥರಾಮ, ಅನಿತಾ,...

ಬೆಳ್ಳಾರೆ: ಸ್ನೇಹಿತರ ಕಲಾಸಂಘ ವತಿಯಿಂದ ಸರಳ ಹಾಗೂ ಸಾಂಕೇತಿಕ ಶ್ರೀಕೃಷ್ಣಾಷ್ಟಮಿ ಆಚರಣೆ

ಸ್ನೇಹಿತರ ಕಲಾಸಂಘ (ರಿ.) ಬೆಳ್ಳಾರೆ ಇದರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ನೇಹಿತರ ಕಲಾಸಂಘದ ಸಭಾಂಗಣದಲ್ಲಿ ಸರ್ಕಾರದ ಸೂಚನೆಯಂತೆ ಸರಳ ಹಾಗೂ ಸಾಂಕೇತಿಕವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಆ.30 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರತಿಷ್ಠಿತ ಸಂಸ್ಥೆ ರೋಟರಿ ಕ್ಲಬ್ ಇದರ ಬೆಳ್ಳಾರೆ ಟೌನ್ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಉದ್ಯಮಿ ಸ್ನೇಹಿತರ ಕಲಾಸಂಘದ...

ನವಚೇತನ ಯುವಕ ಮಂಡಲ ವತಿಯಿಂದ ಬೊಳುಬೈಲು ಶಾಲೆಯಲ್ಲಿ ಗಿಡ ನಾಟಿ

ಜಾಲ್ಸೂರು ಗ್ರಾಮದ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನವಚೇತನ ಯುವಕ ಮಂಡಲ ವತಿಯಿಂದ 100 ಅಡಿಕೆ ಗಿಡ ನಾಟಿ ಮಾಡುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕೋಮಲರವರು ಗಿಡ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು. ಗಿಡ ನಾಟಿ ಆದ ಬಳಿಕ ಹನಿ ನೀರಾವರಿ ಪದ್ಧತಿಯಲ್ಲಿ ಪೈಪ್ ಲೈನ್...
Loading posts...

All posts loaded

No more posts

error: Content is protected !!