- Sunday
- March 15th, 2026
ಮಾವಿನಕಟ್ಟೆ ಹಿರಿಯ ಪ್ರಾಥಮಿಕ ಶಾಲಾ ಅವರಣವನ್ನು ಆ.29 ರಂದು ಶ್ರಮದಾನದ ಮೂಲಕ ಸುಚಿಗೊಳಿಸಲಾಯಿತು. ಶಾಲಾ ಮೇಲುಸ್ತುವಾರಿ ಸಮಿತಿ ಮತ್ತು ಊರವರ ಸಹಕಾರದಲ್ಲಿ ನಡೆದ ಶ್ರಮದಾನದ ಉಸ್ತುವಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ದುರ್ಗಾದಾಸ್ ಮೆತ್ತಡ್ಕ, ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪೂರ್ಣಿಮಾ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ...
ದರ್ಖಾಸ್ತು ಸ.ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ ಸಭೆಯು ಆ.26ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಎಸ್.ಡಿ.ಎಂ.ಸಿ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹರೀಶ್.ಡಿ, ಉಪಾಧ್ಯಕ್ಷೆಯಾಗಿ ಭವಾನಿ, ಸದಸ್ಯರಾಗಿ ಗೀತಾ, ಸುಜಾತ, ಸಂಜೀವ, ಹಸೀನಾ, ನುಸೈಬಾ, ಜಯಶ್ರೀ, ಬಾಲಕೃಷ್ಣ, ಗಿರಿಜ, ಸುಜಾತ.ಬಿ, ಸುಜಾತ, ಕಲಾ, ಜಯಂತಿ, ಜಾನ್...
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಭಾರತಿ ಬೆಳ್ಳಾರೆ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್...
ವೈಯಕ್ತಿಕ ದ್ವೇಷವನ್ನಿಟ್ಟುಕೊಂಡು ತನ್ನ ಸ್ವಾರ್ಥಕ್ಕಾಗಿ ಸಮಾಜಕ್ಕೆ ಊರಿಗೆ ಕೇಡು ಬಯಸುವವರಿಂದ ಗುತ್ತಿಗಾರಿನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಒಗ್ಗಟ್ಟಾಗಿ ಈ ಮೊದಲು ಹೋರಾಟ ನಡೆಸಿದ್ದೇವೆ. ಇನ್ನೂ ಅಂತಹ ಸಂದರ್ಭ ಬಂದಾಗ ರಾಜಕೀಯ ರಹಿತ ಹೋರಾಟಕ್ಕೆ ಸಿದ್ಧ ಎಂದು ಮಾಜಿ ಜಿ.ಪಂ.ಸದಸ್ಯ ಭರತ್ ಮುಂಡೋಡಿ ಹೇಳಿದರು.ಅವರು ಇಂದು ಗುತ್ತಿಗಾರಿನಲ್ಲಿ ನಡೆದ ನಾಗರಿಕರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಗುತ್ತಿಗಾರು ಗ್ರಾಮವನ್ನು...
ದೇಶದ ಏಳಿಗೆಗೆ ಜನರ ಸಹಕಾರ ಅಗತ್ಯವಾಗಿದೆ. ಅವಶ್ಯಕವಾಗಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸರಕಾರದ ಗಮನಕ್ಕೆ ತರಬೇಕು. ಆಗ ಅದನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬುದರ ಕುರಿತು ಕ್ರಮ ಕೈಗೊಳ್ಳಲಾಗುವುದು. ಅಭಿವೃದ್ಧಿಯನ್ನು ಹೇಗೆ ಮಾಡಬೇಕು ಎಂಬುದರ ಸ್ಪಷ್ಟ ಅರಿವು ನಮಗಿದೆ ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು.ಅಜ್ಜಾವರದ ಮೇದಿನಡ್ಕದಲ್ಲಿ ಆ. 29 ರಂದು ನೂತನ ಅಂಗನವಾಡಿ ಯನ್ನು...
ಗೃಹರಕ್ಷಕ ದಳದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಮುಖ್ಯ ಕಮಾಂಡರ್ ಮುರಲಿ ಮೋಹನ ಚೋಂತಾರು, ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ಹಾಗೂ ದ.ಕ. ಉಸ್ತುವಾರಿ ಸಚಿವ ಎಸ್.ಅಂಗಾರ ಅವರನ್ನು ಗೃಹರಕ್ಷಕ ದಳದ ವತಿಯಿಂದ ಸಮ್ಮಾನಿಸಲಾಯಿತು. ಸಚಿವ ಅಂಗಾರರು ಸುಳ್ಯ ಹಾಗೂ ಸುಬ್ರಹ್ಮಣ್ಯದ ಗೃಹರಕ್ಷಕ ದಳ ಕಚೇರಿಗೆ ಕಂಪ್ಯೂಟರ್ ಹಸ್ತಾಂತರಿಸಿದರು.
ನಾಲ್ಕೂರು ಗ್ರಾಮದ ದೇರಪ್ಪಜ್ಜನ ಮನೆ ಡಿ.ಎಚ್. ಪೂರ್ಣಚಂದ್ರ ರವರು ಮೆದುಳಿನ ರಕ್ತಸ್ರಾವದಿಂದ ಆ.27 ರಂದು ಪೂನಾದಲ್ಲಿ ನಿಧನರಾದರು. ಪೂನಾದ ಖಾಸಗಿ ಕಂಪೆನಿಯಲ್ಲಿ ಹಲವಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಲತಾ, ಪುತ್ರ ಶಮಂತ್, ಪುತ್ರಿ ವಿಂಧ್ಯಾ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಗುತ್ತಿಗಾರು ವಲಯದ ಕಮಿಲ ಒಕ್ಕೂಟದ ಆಜಡ್ಕ ಎಂಬಲ್ಲಿ ನೂತನವಾಗಿ ಪಂಚಶ್ರೀ ಪ್ರಗತಿಬಂಧು ಸಂಘ ವನ್ನು ಒಕ್ಕೂಟದ ಅಧ್ಯಕ್ಷರಾದ ಕೇಶವ ಗೌಡ ಕಾಂತಿಲ ಉದ್ಘಾಟಿಸಿದರು. ಸಂಘದ ದಾಖಲಾತಿಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಶಾರದಾ ಹಾಗೂ ಶ್ರೀಮತಿ ಲತಾ ಕುಮಾರಿ ಹಸ್ತಾಂತರಿಸಿದರು. ಈ ಸಂದರ್ಭ...
ಗೌಡ ಜನಾಂಗದ ಸಂಸ್ಕೃತಿ, ಆಚಾರ -ವಿಚಾರಗಳು ಮುಂದಿನ ಪೀಳಿಗೆಗೆ ರವಾನೆಯಾಗಬೇಕಿದ್ದರೆ ಯುವ ಜನಾಂಗ ಅದರತ್ತ ಆಕರ್ಷಿತವಾಗುವಂತೆ ಆಗಬೇಕು. ಈ ನಿಟ್ಟಿನಲ್ಲಿ ಅಕಾಡೆಮಿಯ ವತಿಯಿಂದ ನಡೆಯುವ ಶಿಬಿರಗಳಲ್ಲಿ ಯುವಕ ಯುವತಿಯರು ಪಾಲ್ಗೊಂಡು ಸಂಸ್ಕೃತಿ ಆಚಾರ ವಿಚಾರಗಳನ್ನು ಕಲಿತುಕೊಳ್ಳಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಹೇಳಿದ್ದಾರೆ. ಅವರು ಮಂಡೆಕೋಲು ಗ್ರಾ.ಪಂ...
ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್(ರಿ.) ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಆ.27 ರಂದು ನಡೆಯಿತು. ಬೆಳ್ಳಾರೆ ದರ್ಗಾ ಶರೀಫಿನಲ್ಲಿ ಝಿಯಾರತ್ ನಡೆಸಿ ಆ ಬಳಿಕ ಆಂಬ್ಯುಲೆನ್ಸ್ ಲೋಕಾರ್ಪಣೆಗೊಂಡಿತು. ಟ್ರಸ್ಟ್ ನ ಅಧ್ಯಕ್ಷ ಯು ಹೆಚ್ ಅಬೂಬಕ್ಕರ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಳಲಿ ಕೇಂದ್ರ...
Loading posts...
All posts loaded
No more posts
