- Saturday
- August 15th, 2026
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆಯನ್ನು ದಿನಾಂಕ 03-06-2022ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ವಿಶೇಷತೆ ಕುರಿತು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಲೆಫ್ಟಿನೆಂಟ್ ಸೀತಾರಾಮ ಎಂ ಡಿ ಜಾಥಾಕ್ಕೆ ಚಾಲನೆಯನ್ನು ನೀಡಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ...
ಇತ್ತೀಚೆಗೆ ಅಗಲಿದ ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಮಂಜುನಾಥ್ ರಾವ್ ಅವರಿಗೆ ಶುಭಕರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಜೂ.01 ಶ್ರದ್ದಾಂಜಲಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರಾದ ದಿನೇಶ್.ಬಿ.ಎನ್, ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ನಿರ್ದೇಶಕರುಗಳಾದ ವೆಂಕಟೇಶ್.ಹೆಚ್.ಎಲ್, ಮಾಧವ.ಡಿ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ.30 ರಿಂದ ಜೂ.1 ರ ವರೆಗೆ ಜರುಗಿದ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಮಣಿಕಂಠನ್ ರವರು ಪ್ರಥಮ ಸ್ಥಾನ...
ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕರಾಗಿ ಶ್ರೀಮತಿ ಚಂಚಲಾಕ್ಷಿ ಸನತ್ ಮುಳುಗಾಡು ನೇಮಕಗೊಂಡಿದ್ದಾರೆ. ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮಂಡಳಿ ಸಭೆಯಲ್ಲಿ ಇವರನ್ನು ನೇಮಕ ಮಾಡಲಾಯಿತು. ಸಮಿತಿಯ ನಿರ್ದೇಶಕರಾಗಿದ್ದ ಮರ್ಕಂಜದ ಶ್ರೀಮತಿ ಅಮ್ಮಣಿ ಯವರು ಇತ್ತೀಚೆಗೆ ನಿಧನರಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚಂಚಲಾಕ್ಷಿ ಯವರನ್ನು ಆಯ್ಕೆ ಮಾಡಲಾಗಿದೆ.
ಬಾಳುಗೋಡುವಿನಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಕಟ್ಟಡ ಮಾಲೀಕರಾದ ಲೋಕೇಶ್ ಕಟ್ಟೆಮನೆ, ಸುಬ್ರಹ್ಮಣ್ಯ ಪ್ರಾಥಮಿಕ...
ಹರಿಹರ ಪಲ್ಲತ್ತಡ್ಕದಲ್ಲಿ ಜೂ.01 ರಂದು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉದ್ಘಾಟನೆಗೊಂಡಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಅವರು ದೀಪ ಬೆಳಗಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿದರು. ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ...
ಬೆಳ್ಳಾರೆಯ ದಾರುಲ್ ಹಿಕ್ಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 2022-23 ನೇ ಸಾಲಿನ ಮಂತ್ರಿ ಮಂಡಲವನ್ನು ಜೂನ್ 1ರಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ರಚಿಸಲಾಯಿತು. ಮುಖ್ಯಮಂತ್ರಿಯಾಗಿ ಮತದಾನದ ಮೂಲಕ ಫಾತಿಮಾ ರಿಝಾ ಆಯ್ಕೆಯಾದರೆ, ಉಪಮುಖ್ಯಮಂತ್ರಿಯಾಗಿ ಮಹಮ್ಮದ್ ಸಲೀತ್ ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಫಾತಿಮಾ ಮಾಶಿಯಾ, ಉಪ ಶಿಕ್ಷಣ ಮಂತ್ರಿಯಾಗಿ ತಾನಿಷ ಎನ್ ಎಸ್, ಶಿಸ್ತುಮಂತ್ರಿಯಾಗಿ ರಿಝಾ...
ಪಂಜದ ದೀನ್ ದಯಾಳ್ ಕಾಂಪ್ಲೆಕ್ಸ್ ನಲ್ಲಿ ಅಕ್ಷಯ ಫೂಟ್ ವೇರ್ ಮತ್ತು ಸ್ಪೋರ್ಟ್ಸ್ ಸಾಮಾಗ್ರಿಗಳ ಶಾಪ್ ಜೂ.2 ರಂದು ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ಕಂಪೆನಿಯ ವಿವಿಧ ವಿನ್ಯಾಸದ ಪಾದರಕ್ಷೆಗಳು ಹಾಗೂ ಸ್ಪೋರ್ಟ್ಸ್ ಸಾಮಾಗ್ರಿಗಳು ದೊರೆಯುತ್ತದೆ ಎಂದು ಪಾಲುದಾರರಾದ ದೀಪಕ್ ಪೂಜಾರಿಮನೆ ಹಾಗೂ ರಮೇಶ್ ಕಾಯಂಬಾಡಿ ತಿಳಿಸಿದ್ದಾರೆ.
ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ತಾಲೂಕಿನ ಅರ್ಹ 10 ಮಂದಿ ಬಡ ವಿದ್ಯಾರ್ಥಿಗಳಿಗೆ ಜೂ.5 ಆದಿತ್ಯವಾರದಂದು ಬೆಳ್ಳಾರೆಯಲ್ಲಿ ಶೈಕ್ಷಣಿಕ ನಿಧಿ/ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಶೈಕ್ಷಣಿಕ ನಿಧಿ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳು ಜೂ.3 ರ ಮೊದಲು ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಯ ಹೆಸರು, ವಿಳಾಸ, ರೇಷನ್ ಕಾರ್ಡ್ ಪ್ರತಿ, ಸೂಚಕರ ಹೆಸರಿನೊಂದಿಗೆ ಘಟಕದ...
Loading posts...
All posts loaded
No more posts
