- Sunday
- March 15th, 2026
ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ಹಾಗೂ ಸಂಪಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದಿವಂಗತ ಮೋಹಿನಿ ವಸಂತ ಗೌಡ ಪೆಲ್ತಡ್ಕರವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಭೆಯು ಆ.27 ರಂದುವ ಗೂನಡ್ಕದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿತು.ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಬಾಳಿಲ ಗ್ರಾ.ಪಂ. ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಗ್ರಾ.ಪಂ. ವತಿಯಿಂದ ಸನ್ಮಾನ ಕಾರ್ಯಕ್ರಮ ಆ. 26 ರಂದು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು.ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ಕು. ಪದ್ಮಿನಿ ಸಿ.ಆರ್, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 611 ಅಂಕಗಳೊಂದಿಗೆ ಶಾಲೆಗೆ...
ಪೈಕ. ಸ .ಕಿ.ಪ್ರಾ ಶಾಲೆಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅ. 17 ರಂದು ರಚನೆ ಮಾಡಲಾಯಿತು.2021 -22 ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜುನಾಥ ಕೆ., ಉಪಾಧ್ಯಕ್ಷರಾಗಿ ಶ್ರೀಮತಿ ರೇಣುಕಾ ಆಯ್ಕೆಯಾದರು.ಸದಸ್ಯರುಗಳಾಗಿ ಉದಯಕುಮಾರ್ ಪಿ, ಭುವನೇಶ್ವರ ಪಿ, ಅಚ್ಚುತ ಪಿ, ಆನಂದ, ವೆಂಕಟರಮಣ ಎಂ, ರಾಘವೇಂದ್ರ, ಶ್ರೀಮತಿ...
ರೈಟ್ ಟು ಲಿವ್ - ಕೋಟೆ ಫೌಂಡೇಶನ್ ವತಿಯಿಂದ ದುಗ್ಗಲಡ್ಕದ ಸರಕಾರಿ ಪ್ರೌಢಶಾಲೆಗೆ ಲ್ಯಾಪ್ ಟಾಪ್ ಕೊಡುಗೆಯಾಗಿ ನೀಡಿದ್ದಾರೆ. ಬೆಂಗಳೂರಿನ ಕೋಟೆ ಫೌಂಡೇಶನ್ ನೀಡಿದ ಲ್ಯಾಪ್ ಟಾಪನ್ನು ದಿನೇಶ್ ಅತ್ಯಾಡಿಯವರು ದುಗ್ಗಲಡ್ಕ ಪ್ರೌಢಶಾಲೆಯ ಸಿಬ್ಬಂದಿ ವಸಂತ ಕುಮಾರ್ ಅವರಿಗೆ ತಲುಪಿಸಿದ್ದಾರೆ.
ಸುಬ್ರಹ್ಮಣ್ಯದ ಕುಮಾರಧಾರ ಬಳಿ ಕೊಲ್ಲಮೊಗ್ರದ ಕಾರ್ತಿಕ್ ಪೈಕ ಮಾಲಕತ್ವದ ಕಾರ್ತಿಕೇಯ ಅಟೋ ವರ್ಕ್ಸ್ ಇಂದು ಶುಭಾರಂಭಗೊಂಡಿತು. ಪರಮೇಶ್ವರ ಗೌಡ ಪೈಕ ದೀಪ ಬೆಳಗಿಸಿ ಉದ್ಘಾಟಿಸಿದರು. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಸನ್ನ ದರ್ಬೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಕಿಶೋರ್ ಶಿರಾಡಿ, ಕಾಂಪ್ಲೆಕ್ಸ್ ಮಾಲಕ ಪ್ರಸಾದ್ ರೈ ಮತ್ತಿತರರು ಉಪಸ್ಥಿತರಿದ್ದು ಶುಭಹಾರೈಸಿದರು. ಎಲ್ಲಾ...
ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ , ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ , ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮ ಇಂದು ನಡೆಯಲಿದ್ದು, ಮಳೆಯ ಕಾರಣದಿಂದ ಬೆಳ್ಳಾರೆಯ ಕಲ್ಪವೃಕ್ಷ ಆರ್ಕೇಡ್ ಬಳಿ ನಡೆಯಬೇಕಿದ್ದ...
ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಮಹಾಸ್ವಾಮಿಗಳಾದ ಪರಮಪೂಜ್ಯ ಜಗದ್ಗುರು ಅನಂತಶ್ರೀಭೂಶಿತ ಕಾಳಹಸ್ತೇಂದ್ರ ಸರಸ್ವತಿ ಸ್ವಾಮಿಗಳ ಚಾತುರ್ಮಾಸ ಅಂಗವಾಗಿ ಶ್ರೀ ಸರಸ್ವತಿ ಮಾತೃ ಮಂಡಳಿ ವತಿಯಿಂದ ಮಹಿಳಾಗೋಷ್ಠಿ 2021 ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಸಾಧಕರನ್ನು ಸನ್ಮಾನಿಸಲಾಗಿದ್ದು ಕಬ್ಬಿಣದ ಕೆಲಸ ಮಾಡುತ್ತಿರುವ ಶ್ರಮಜೀವಿ ಗುತ್ತಿಗಾರು ಗ್ರಾಮದ ಪೈಕದ ಲೀಲಾವತಿ ಅಪ್ಪಯ್ಯ ಆಚಾರ್ಯ ರನ್ನು...
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 10ನೇ ವಾರ್ಡಿನ ಕೋರ್ಟ್ ಬಳಿಯಿಂದ ಕುರುಂಜಿ ಗುಡ್ಡೆಗೆ ಹೋಗುವ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಯು 20 ಲಕ್ಷ ರೂ ವೆಚ್ಚದಲ್ಲಿ ಆರಂಭಗೊಂಡಿದ್ದು ಕಾಮಗಾರಿಯ ಗುದ್ದಲಿಪೂಜೆ ಈ ದಿನ ನಡೆಯಿತು. 10ನೇ ವಾರ್ಡಿನ ಸದಸ್ಯ ಹಾಗೂ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಸುಳ್ಯದ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೊಂಡು ಹತ್ತು ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮದ ಉದ್ಘಾಟನಾ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ಆ.27ರಂದು ನಡೆಯಿತು.ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಐಕ್ಯೂ ಎಸಿ ಘಟಕ ಮತ್ತು ಹೆಚ್ ಆರ್ & ಪ್ಲೇಸ್ ಮೆಂಟ್ ಘಟಕ ಇದರ ಸಹಯೋಗದೊಂದಿಗೆ ಆ. 25 ರಂದು ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು ಎಂಬ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ ಎಸ್ ಇವರು ವಹಿಸಿ, ಸೇನೆ ಉದ್ಯೋಗವನ್ನು...
Loading posts...
All posts loaded
No more posts
